ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ
ಶಿರಾ ಹಾಗೂ ಆರ್ಆರ್ ನಗರ ಬೈ ಎಲೆಕ್ಷನ್ನಲ್ಲಿ ಸೋತು ಮುಖಂಭಗ ಅನುಭವಿಸಿರುವ ಕಾಂಗ್ರೆಸ್ ಇದೀಗ ಪುಟಿದೇಳುವ ತವಕದಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪೂಕರವೆಂಬತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಬಳ್ಳಾರಿಯ ಕಾರ್ಯಕರ್ತರ ಸಭೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

<p>ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪೂಕರವೆಂಬತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.</p>
ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪೂಕರವೆಂಬತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
<p>ಮಾರ್ಗ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಚಿತ್ರದುರ್ಗದಲ್ಲಿ, ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾನುವಾರ ಅದ್ದೂರಿ ಸ್ವಾಗತ ಸಿಕ್ಕಿತು.</p>
ಮಾರ್ಗ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಚಿತ್ರದುರ್ಗದಲ್ಲಿ, ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾನುವಾರ ಅದ್ದೂರಿ ಸ್ವಾಗತ ಸಿಕ್ಕಿತು.
<p>ಭಾನುವಾರ ಹೊಸಪೇಟೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸೇರಲು ಬಿಜೆಪಿ ಸೇರಿದಂತೆ ಬೇರೆ ಪಕ್ಷದ ನಾಯಕರು ನನ್ನ ಬಳಿ ಬಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.</p>
ಭಾನುವಾರ ಹೊಸಪೇಟೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸೇರಲು ಬಿಜೆಪಿ ಸೇರಿದಂತೆ ಬೇರೆ ಪಕ್ಷದ ನಾಯಕರು ನನ್ನ ಬಳಿ ಬಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
<p>'ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದೆಲ್ಲೆಡೆ ನಾವೆಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ. ಇದಕ್ಕಾಗಿ ನಾನು ಇಲ್ಲಿಂದ ಪ್ರವಾಸ ಆರಂಭ ಮಾಡಿದ್ದು, ಇದು ಕಾಂಗ್ರೆಸ್ ಪಾಲಿಗೆ ವಿಜಯದ ನಡೆಯಾಗಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>
'ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದೆಲ್ಲೆಡೆ ನಾವೆಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ. ಇದಕ್ಕಾಗಿ ನಾನು ಇಲ್ಲಿಂದ ಪ್ರವಾಸ ಆರಂಭ ಮಾಡಿದ್ದು, ಇದು ಕಾಂಗ್ರೆಸ್ ಪಾಲಿಗೆ ವಿಜಯದ ನಡೆಯಾಗಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
<p>ಕಾಂಗ್ರೆಸ್ ಸೇರಬಯಸುವವರಿಗೆ ಯಾವುದೇ ಷರತ್ತನ್ನು ಹಾಕುವುದಿಲ್ಲ. ನಾನು ಯಾರ ಮೇಲೂ ವೈಯಕ್ತಿಕ ದ್ವೇಷ ಮಾಡುವುದಿಲ್ಲ. ಪಕ್ಷದ ನಾಯಕರು ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಿ. ಜೊತೆಗೆ ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.</p>
ಕಾಂಗ್ರೆಸ್ ಸೇರಬಯಸುವವರಿಗೆ ಯಾವುದೇ ಷರತ್ತನ್ನು ಹಾಕುವುದಿಲ್ಲ. ನಾನು ಯಾರ ಮೇಲೂ ವೈಯಕ್ತಿಕ ದ್ವೇಷ ಮಾಡುವುದಿಲ್ಲ. ಪಕ್ಷದ ನಾಯಕರು ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಿ. ಜೊತೆಗೆ ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.
<p>ಇನ್ನು ಇದೇ ವೇಳೆ ಮಾಜಿ ಶಾಸಕ ಅನಿಲ್ ಲಾಡ್ ಸಹ ಮತನಾಡಿ, ಡಿಕೆ ಶಿವಕುಮಾರ್ ಅವರಿಗೆ ಕಷ್ಟ ಬಂದಿದೆ. ನಾವೆಲ್ಲ ಬೆಂಬಲವಾಗಿರ್ತೇವೆ. ಬಾಂಬ್ ಯಾವಾಗ ಸಿಡಿಸಬೇಕು ನನಗೆ ಗೊತ್ತಿದೆ. ಕಾದು ನೊಡಿ ಎಂದರು.</p>
ಇನ್ನು ಇದೇ ವೇಳೆ ಮಾಜಿ ಶಾಸಕ ಅನಿಲ್ ಲಾಡ್ ಸಹ ಮತನಾಡಿ, ಡಿಕೆ ಶಿವಕುಮಾರ್ ಅವರಿಗೆ ಕಷ್ಟ ಬಂದಿದೆ. ನಾವೆಲ್ಲ ಬೆಂಬಲವಾಗಿರ್ತೇವೆ. ಬಾಂಬ್ ಯಾವಾಗ ಸಿಡಿಸಬೇಕು ನನಗೆ ಗೊತ್ತಿದೆ. ಕಾದು ನೊಡಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.