MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • News
  • Politics
  • ಪ್ರಾದೇಶಿಕ ಸೇನೆಗೆ ನಿಯೋಜನೆಗೊಂಡ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ!

ಪ್ರಾದೇಶಿಕ ಸೇನೆಗೆ ನಿಯೋಜನೆಗೊಂಡ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ!

ಕಾಂಗ್ರೆಸ್‌ ಪಕ್ಷದ ವಕ್ತಾರೆ ಹಾಗೂ ಸೋಶಿಯಲ್‌ ಮೀಡಿಯಾ ವಿಭಾಗದಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಭವ್ಯಾ ನರಸಿಂಹಮೂರ್ತಿ ದೇಶದ ಟೆರಿಟರಿಯಲ್‌ ಆರ್ಮಿಗೆ ನಿಯೋಜನೆಗೊಂಡಿದ್ದಾರೆ.  

2 Min read
Author : Santosh Naik
Published : Jun 01 2024, 11:11 PM IST
Share this Photo Gallery
  • FB
  • TW
  • Linkdin
  • Whatsapp
112

ಇಲ್ಲಿಯವರೆಗೂ ಕಾಂಗ್ರೆಸ್‌ನ ವಕ್ತಾರೆಯಾಗಿ ಜನರಿಗೆ ಪರಿಚಯರಾಗಿದ್ದ ಭವ್ಯಾ ನರಸಿಂಹಮೂರ್ತಿ ಈಗ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
212

ತಾವು ದೇಶದ ಟೆರಿಟರಿಯಲ್‌ ಆರ್ಮಿ ಅಂದರೆ, ಪ್ರಾದೇಶಿಕ ಆರ್ಮಿಯಲ್ಲಿ ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿರುವ ಬಗ್ಗೆ ಭವ್ಯಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

312

ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಶ್ರೇಯಕ್ಕೂ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿ ಪಾತ್ರರಾಗಿದ್ದಾರೆ.

412

2022ರ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಗೌರವವೂ ಭವ್ಯಾ ನರಸಿಂಹಮೂರ್ತಿ ಅವರದ್ದಾಗಿದೆ.

512

ಪ್ರಾದೇಶಿಕ ಸೇನೆ ಅನ್ನೋದು ರೆಗ್ಯಲರ್‌ ಆರ್ಮಿಯಲ್ಲ. ಭಾರತದ ನಾಗರೀಕರಿಗೆ ತಮ್ಮ ವೃತ್ತಿಯೊಂದಿಗೆ ಭಾರತೀಯ ಸೇನೆಯ ಭಾಗವಾಗಿ ದೇಶಸೇವೆ ಮಾಡುವ ಅವಕಾಶವನ್ನು ಕಲ್ಪಿಸುತ್ತದೆ.

612

ಟೀಮ್‌ ಇಂಡಿಯಾ ಮಾಜಿ ನಾಯಕ ಎಂಎಸ್‌ ಧೋನಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಪ್ರಾದೇಶಿಕ ಸೇನೆಯ ಭಾಗವಾಗಿದ್ದಾರೆ. ಅದರೊಂದಿಗೆ ರಾಜಸ್ಥಾನದ ಸಚಿನ್‌ ಪೈಲಟ್‌, ಬಿಜೆಪಿಯ ಅನುರಾಗ್‌ ಠಾಕೂರ್‌ ಕೂಡ ಟೆರಿಟರಿಯಲ್‌ ಆರ್ಮಿಗೆ ಸೇರಿದ ಪ್ರಮುಖರಾಗಿದ್ದಾರೆ.

712

ವರ್ಷದಲ್ಲಿ ಎರಡು ತಿಂಗಳ ಕಾಲ ಪ್ರಾದೇಶಿಕ ಸೇನೆಯಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ರಾಜ್ಯದ ಜನರ ಆಶೀರ್ವಾದ ತಮ್ಮ ಮೇಲೆ ಇರಲಿ ಎಂದು ಭವ್ಯಾ ನರಸಿಂಹ ಮೂರ್ತಿ ಹೇಳಿದ್ದಾರೆ.

812

ಕಾಶ್ಮೀರದಲ್ಲಿ ಭಾರತ ಹಾಗೂ ಪಾಕಿಸ್ತಾನದ ಗಡಿಯ ಬಳಿ ಇರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದ ಬಳಿಕ ಲೆಫ್ಟಿನೆಂಟ್‌ ಆಗಿ ಅವರು ನಿಯೋಜನೆಗೊಂಡಿದ್ದಾರೆ.

912

ಮುಂದಿನ ದಿನಗಳಲ್ಲಿ ನಾನು ರಾಜಕಾರಣಿಯಾಗಿ ದೇಶದ ಒಳಗೆ ಹಾಗೂ ಸೇನಾಧಿಕಾರಿಯಾಗಿ ದೇಶದ ಗಡಿಯಲ್ಲಿ ಸೇವೆ ಸಲ್ಲಿಸಲಿದ್ದೇನೆ ಎಂದು ಭವ್ಯಾ ಬರೆದುಕೊಂಡಿದ್ದಾರೆ.

1012

2022 ರಲ್ಲಿ ಡೈರೆಕ್ಟರೇಟ್ ಜನರಲ್ ಟೆರಿಟೋರಿಯಲ್ ಆರ್ಮಿ ನಡೆಸಿದ ಪರೀಕ್ಷೆಯ ಮೂಲಕ ನನ್ನ ಆಯ್ಕೆಯಾಗಿದೆ. 2022 ರ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ನಾನು ಎಂದು ಅವರು ಹೇಳಿಕೊಂಡಿದ್ದಾರೆ.

1112

“ಮೇ 2024 ರಲ್ಲಿ, ನಾನು ಇಂಡೋ-ಪಾಕ್ LOC (ನಿಯಂತ್ರಣ ರೇಖೆ) ಬಳಿ ಇರುವ ಸೇನಾ ಘಟಕದಲ್ಲಿ ನನ್ನನ್ನು ನೇಮಿಸಲಾಯಿತು, ಅಲ್ಲಿ ನನಗೆ ತರಬೇತಿ ನೀಡಲಾಯಿತು ಮತ್ತು ಲೆಫ್ಟಿನೆಂಟ್ ಆಗಿ ನಿಯೋಜಿಸಲಾಯಿತು' ಎಂದು ಭವ್ಯಾ ಹೇಳಿದ್ದಾರೆ.

1212

ಪ್ರಾದೇಶಿಕ ಸೇನೆಯು ನಾಗರಿಕರು ತಮ್ಮ ನಾಗರಿಕ ವೃತ್ತಿಯಲ್ಲಿ ಮುಂದುವರಿಯುತ್ತಲೇ ಭಾರತೀಯ ಸೇನೆಯ ಭಾಗವಾಗಿ ದೇಶಕ್ಕೆ ಸೇವೆ ಸಲ್ಲಿಸಲು ಇರುವ ಅವಕಾಶವಾಗಿದೆ ಎಂದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕಾಂಗ್ರೆಸ್
ಭಾರತ ಸುದ್ದಿ
ಭಾರತೀಯ ಸೇನೆ

Latest Videos
Recommended Stories
Recommended image1
ನನ್ನ ಬಗ್ಗೆ ಇ.ಡಿ.ಗೆ ದೂರು ನೀಡಿದ್ದು ಬಿಜೆಪಿಗೆ ಮತ ಹಾಕುವ, ಕಾಂಗ್ರೆಸ್‌ ನಂಟಿರುವ ವ್ಯಕ್ತಿ: ಸತೀಶ್ ಜಾರಕಿಹೊಳಿ!
Recommended image2
BJPಗೆ ಬಿಗ್ ಶಾಕ್! ಮಾಜಿ ಶಾಸಕ ನರೇಂದ್ರ ಬಾಬು ರಾಜೀನಾಮೆ, 10 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ವಾಪಸ್
Recommended image3
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ: ಡಿಕೆಶಿ ಮೇಲುಗೈ, ರಾಜಣ್ಣ ಸೇರಿ ಸಿದ್ದರಾಮಯ್ಯ ಬಣ ತಲ್ಲಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved