ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯದ್ದೇ ಜಯ : ಸಚಿವ ಸಿ.ಟಿ.ರವಿ
ಬೆಂಗಳೂರು(ಅ.01): ಘೋಷಣೆಯಾಗಿರುವ ಎಲ್ಲಾ ಚುನಾವಣೆಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ಅಲ್ಲದೆ, ಹಿರಿಯರ ಮಾರ್ಗದರ್ಶನ, ಕಿರಿಯರ ಬೆಂಬಲದೊಂದಿಗೆ ಪಕ್ಷ ಈಗ ನೀಡಿರುವ ಹೊಸ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

<p>ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬುಧವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>
ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬುಧವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
<p>ಜವಾಬ್ದಾರಿಗಳು ಆಗಾಗ ಬದಲಾಗುತ್ತಿರುತ್ತವೆ. ಆದರೆ, ಕಾರ್ಯಕರ್ತ ಎಂಬುದು ಕೊನೆವರೆಗೆ ಇರುತ್ತದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 1988ರಲ್ಲಿ ಮೊದಲ ಬಾರಿಗೆ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸುವ ಮೂಲಕ ಕಾರ್ಯಕರ್ತನಾಗಿ ಪಕ್ಷದ ಕೆಲಸ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಹೊಸ ಜವಾಬ್ದಾರಿ ನೀಡಿದ್ದಾರೆ. ನನ್ನ ಸಾಮರ್ಥ್ಯ ಮೀರಿ ಆ ವಿಶ್ವಾಸ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.</p>
ಜವಾಬ್ದಾರಿಗಳು ಆಗಾಗ ಬದಲಾಗುತ್ತಿರುತ್ತವೆ. ಆದರೆ, ಕಾರ್ಯಕರ್ತ ಎಂಬುದು ಕೊನೆವರೆಗೆ ಇರುತ್ತದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 1988ರಲ್ಲಿ ಮೊದಲ ಬಾರಿಗೆ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸುವ ಮೂಲಕ ಕಾರ್ಯಕರ್ತನಾಗಿ ಪಕ್ಷದ ಕೆಲಸ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಹೊಸ ಜವಾಬ್ದಾರಿ ನೀಡಿದ್ದಾರೆ. ನನ್ನ ಸಾಮರ್ಥ್ಯ ಮೀರಿ ಆ ವಿಶ್ವಾಸ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.
<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಎಲ್ಲ ಚುನಾವಣೆಗಳನ್ನು ಎದುರಿಸಲಿದ್ದೇವೆ. ಘೋಷಣೆಯಾಗಿರುವ ಎಲ್ಲಾ ಚುನಾವಣೆಯಲ್ಲಿಯೂ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಎಲ್ಲ ಚುನಾವಣೆಗಳನ್ನು ಎದುರಿಸಲಿದ್ದೇವೆ. ಘೋಷಣೆಯಾಗಿರುವ ಎಲ್ಲಾ ಚುನಾವಣೆಯಲ್ಲಿಯೂ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
<p>ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಹಲವರಿರಬಹುದು. ಆದರ, ಪಕ್ಷ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಿದೆ. ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಮಗೆ ಪಕ್ಷ ಮುಖ್ಯವಾಗಿದ್ದು, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದರು.</p>
ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಹಲವರಿರಬಹುದು. ಆದರ, ಪಕ್ಷ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಿದೆ. ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಮಗೆ ಪಕ್ಷ ಮುಖ್ಯವಾಗಿದ್ದು, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದರು.
<p>ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರವಿ, ಅದನ್ನು ನಮ್ಮ ಸಂಸದೀಯ ಮಂಡಳಿ ತೀರ್ಮಾನಿಸುತ್ತದೆ. ಮುನಿರತ್ನ ಕೂಡ ಈಗ ಬಿಜೆಪಿ ಸೇರಿದ್ದಾರೆ. ಮುನಿರಾಜು ಗೌಡ ಯುವ ಮೋರ್ಚಾ ಅಧ್ಯಕ್ಷ ಆಗಿದ್ದವರು. ಆಕಾಂಕ್ಷಿಗಳು ಹಲವರು ಇರುತ್ತಾರೆ. ಆದರೆ ಅಭ್ಯರ್ಥಿ ಆಗುವುದು ಒಬ್ಬರೇ ಎಂದು ಮಾರ್ಮಿಕವಾಗಿ ಹೇಳಿದರು.</p>
ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರವಿ, ಅದನ್ನು ನಮ್ಮ ಸಂಸದೀಯ ಮಂಡಳಿ ತೀರ್ಮಾನಿಸುತ್ತದೆ. ಮುನಿರತ್ನ ಕೂಡ ಈಗ ಬಿಜೆಪಿ ಸೇರಿದ್ದಾರೆ. ಮುನಿರಾಜು ಗೌಡ ಯುವ ಮೋರ್ಚಾ ಅಧ್ಯಕ್ಷ ಆಗಿದ್ದವರು. ಆಕಾಂಕ್ಷಿಗಳು ಹಲವರು ಇರುತ್ತಾರೆ. ಆದರೆ ಅಭ್ಯರ್ಥಿ ಆಗುವುದು ಒಬ್ಬರೇ ಎಂದು ಮಾರ್ಮಿಕವಾಗಿ ಹೇಳಿದರು.
<p>ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಪ್ರಸ್ತಾಪಿಸಿದ ಅವರು, ಪಕ್ಷ ಏನು ಸೂಚನೆ ಕೊಡುತ್ತದೆಯೊ ಹಾಗೆ ಮಾಡುತ್ತೇನೆ. ಒಬ್ಬರಿಗೆ ಒಂದೇ ನಿಯಮ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ಎರಡನ್ನೂ ಮುಂದೆ ಇಟ್ಟು ಆಯ್ಕೆ ಯಾವುದು ಎಂದು ಕೇಳಿದರೆ ನಾನು ಸಂಘಟನೆ ಎನ್ನುತ್ತೇನೆ ಎಂದು ರವಿ ತಿಳಿಸಿದರು.</p>
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಪ್ರಸ್ತಾಪಿಸಿದ ಅವರು, ಪಕ್ಷ ಏನು ಸೂಚನೆ ಕೊಡುತ್ತದೆಯೊ ಹಾಗೆ ಮಾಡುತ್ತೇನೆ. ಒಬ್ಬರಿಗೆ ಒಂದೇ ನಿಯಮ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ಎರಡನ್ನೂ ಮುಂದೆ ಇಟ್ಟು ಆಯ್ಕೆ ಯಾವುದು ಎಂದು ಕೇಳಿದರೆ ನಾನು ಸಂಘಟನೆ ಎನ್ನುತ್ತೇನೆ ಎಂದು ರವಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.