ಮಾನವೀಯತೆ ಮೆರೆದ ಸಚಿವ ಗೋಪಾಲಯ್ಯ: ಇದು 2ನೇ ಸಲ..!
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಆಹಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಮಾನವೀಯತೆ ಮೆರೆದಿದ್ದಾರೆ. ಇದು ಮೊದಲ ಸಲ ಅಲ್ಲ ಈ ಹಿಂದೆಯೂ ಸಹ ಇದೇ ರೀತಿ ಸಹಾಯ ಮಾಡಿ ಗಮನಸೆಳೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಆಹಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.
ಇದನ್ನು ಕಂಡ ಸಚಿವರು ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ಹತ್ತಿರದ ಚನ್ನರಾಯಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಅಷ್ಟೇ ಅಲ್ಲದೇ, ಗಾಯಾಳುಗಳು ತೀರ್ಥಹಳ್ಳಿಗೆ ತೆರಳಲು ಪ್ರತ್ಯೇಕ ವಾಹನ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಆಹಾರ ಸಚಿವ ಕೆ. ಗೋಪಾಲಯ್ಯ ಅವರು ಮಾನವೀಯತೆ ಮೆರೆದಿದ್ದಾರೆ.
ಗಾಯಾಳುಗಳಿಗೆ ನೀರಿನ ಬಾಟಲಿ ನೀಡುತ್ತಿರುವ ಸಚಿವ ಗೋಪಾಲಯ್ಯ
ಆಗಸ್ಟ್ನಲ್ಲಿ ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಮೇಲೆ ಅಪಘಾತವ ಸಂಭವಿಸಿದ್ದ ವೇಳೆ ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಸಚಿವ ಗೋಪಾಲಯ್ಯ ಅವರು ಕಾರು ನಿಲ್ಲಿಸಿ ಗಾಯಗೊಂಡಿದ್ದವರನ್ನ ಆಸ್ಪತ್ರೆಗೆ ಸೇರಿಸಿದ್ದನ್ನು ಇಲ್ಲಿಸ್ಮರಿಸಬಹುದು.