ಮೋದಿ ಕರೆಯಂತೆ ಈ ದುಂಡು ಕುರ್ಚಿ ಸಭೆಯಲ್ಲಿ ಮಹತ್ವದ ತೀರ್ಮಾನ..!
ಕೊರೋನಾ ವೈರಸ್ ತಂದಿಟ್ಟ ಕಷ್ಟ ಅಷ್ಟಿಸ್ಟಲ್ಲ. ಆರೋಗ್ಯ ತುರ್ತು ಪರಿಸ್ಥಿತಿಯಿಂದಾಗಿ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಇದರಿಂದಾಗಿ ಆಹಾರವಿಲ್ಲದೆ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ಕಾರ್ಮಿಕರು, ಬಡವರು, ನಿರ್ಗತಿಕರ ಕಷ್ಟ ಹೇಳತೀರದಾಗಿದೆ. ಹಲವರು ಸಹಾಯ ಮಾಡುತ್ತಿದ್ದರೂ ಸರಿಯಾಗಿ ತಲುಪುತ್ತಿಲ್ಲ. ಈ ಸಂದರ್ಭದಲ್ಲಿ ಕೊರೋನಾ ಪೀಡಿತರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅದರಂತೆ ಈ ದುಂಡು ಕುರ್ಚಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಮೋದಿ ಕರೆಯಂತೆ ಈ ದುಂಡು ಕುರ್ಚಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕರೆಯನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಾಲನೆಯಾಗುತ್ತಿದೆ.
ಮೋದಿ ಕರೆಯಂತೆ ಈ ದುಂಡು ಕುರ್ಚಿ ಸಭೆಯಲ್ಲಿ ಮಹತ್ವದ ತೀರ್ಮಾನ..!
ಸಚಿವೆ ಶಶಿಕಲಾ ಜೊಲ್ಲೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಆಪ್ತಸಹಾಯಕರ ಸಭೆ ನಡೆಸಿದರು.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಅತ್ಯಂತ ಹೆಚ್ಚು ಕಾರ್ಯಪ್ರವರ್ತರಾಗಿ ಕ್ಷೇತ್ರದ ಜನತೆಯ ಸಮಸ್ಯೆಗಳ ಕರೆಗಳಿಗೆ ಸರಿಯಾಗಿ ಸ್ಪಂದಿಸಿ ಎಂದು ತಮ್ಮ ಬೆಂಬಲಿಗರಿಗೆ ಮನವಿ ಮಾಡಿಕೊಂಡರು
ಯಾವುದೇ ತುರ್ತು ಪರಿಸ್ಥಿತಿಯ ಕರೆಗಳು ಬಂದಲ್ಲಿ ಯಾವುದೇ ಸಮಯದಲ್ಲಾದರೂ ನಮ್ಮ ಗಮನಕ್ಕೆ ತರಲು ಎಲ್ಲರಿಗೂ ಸೂಚಿಸಲಾಯಿತು.
ಕೊರೋನಾ ಪೀಡಿತರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದರು.
ಕಳೆದ ಸೋಮವಾರ ಬಿಜೆಪಿಯ 40ನೇ ಸ್ಥಾಪನಾ ದಿನ ಇತ್ತು ಈ ಸಂದರ್ಭದಲ್ಲಿ ಕೊರೋನಾ ಪೀಡಿತರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು,
ಮೋದಿ ಕರೆಯಂತೆ ಸಚಿವ ಎ ಶಶಿಕಲಾ ಜೊಲ್ಲೆ ಅವರು ತಮ್ಮ ಬೆಂಬಲಿಗರ ಸಭೆ ನಡೆಸಿ ಬಡವರು ಮತ್ತು ನಿರ್ಗತಿಕರ ಸಹಾಯಕ್ಕೆ ನಿಲ್ಲಿ ಎಂದು ಸೂಚಿಸಿದರು.