ಸಿದ್ದರಾಮಯ್ಯಗೆ ಕೊರೋನಾ: ಶೀಘ್ರ ಗುಣಮುಖರಾಗಲು ಜಮೀರ್ ಅಹಮದ್ ಪ್ರಾರ್ಥನೆ
ಬೆಂಗಳೂರು(ಆ.06): ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಶೀಘ್ರವಾಗಿ ಕೊರೋನಾದಿಂದ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ರಾಜ್ಯಾದ್ಯಂತ ಹೋಮ, ಹವನಗಳನ್ನ ನಡೆಸುತ್ತಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಶೀಘ್ರ ಗುಣಮುಖರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರಿಂದ ಪ್ರಾರ್ಥನೆ
ಬೆಂಗಳೂರಿನ ಹಜ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ ಜಮೀರ್ ಅಹಮದ್
ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ, 2000 ಜನರಿಗೆ ಮಧ್ಯಾಹ್ನದ ಊಟ ವಿತರಿಸಿದ ಶಾಸಕರು
ಈ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದರು