MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಈ ಪ್ರದೀಪ್ ಈಶ್ವರ್, ಕರ್ನಾಟಕದ ಏಕೈಕ ಕಾಮಿಡಿ ಪೀಸ್ - ಪ್ರತಾಪ ಸಿಂಹ

ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಈ ಪ್ರದೀಪ್ ಈಶ್ವರ್, ಕರ್ನಾಟಕದ ಏಕೈಕ ಕಾಮಿಡಿ ಪೀಸ್ - ಪ್ರತಾಪ ಸಿಂಹ

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವೈಯಕ್ತಿಕ ಟೀಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿದ ಸಿಂಹ, ತಮ್ಮ ತಾಯಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ರೀತಿ ಉತ್ತರಿಸಬೇಕಾಯಿತು ಎಂದು ಹೇಳಿದ್ದಾರೆ.

1 Min read
Sathish Kumar KH
Published : Oct 24 2025, 01:44 PM IST
Share this Photo Gallery
  • FB
  • TW
  • Linkdin
  • Whatsapp
16
ಅವಾಚ್ಯ ಪದಗಳನ್ನು ಬಳಸಿ ವಾಗ್ದಾಳಿ
Image Credit : Asianet News

ಅವಾಚ್ಯ ಪದಗಳನ್ನು ಬಳಸಿ ವಾಗ್ದಾಳಿ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಪ್ರದೀಪ್ ಈಶ್ವರ್ ವಿರುದ್ಧ ಅತ್ಯಂತ ಕಟು ಮತ್ತು ಅವಾಚ್ಯ ಪದಗಳನ್ನು ಬಳಸಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

26
ಮಾತನಾಡುವಾಗ ಎಚ್ಚರಿಕೆ ಇರಲಿ
Image Credit : Asianet News

ಮಾತನಾಡುವಾಗ ಎಚ್ಚರಿಕೆ ಇರಲಿ

ಶಾಸಕ ಪ್ರದೀಪ್ ಈಶ್ವರ್ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಪ್ರತಾಪ್ ಸಿಂಹ, ಇನ್ನೊಂದು ಬಾರಿ ತಮ್ಮ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಪ್ರದೀಪ್ ಈಶ್ವರ್‌ಗೆ ಎಚ್ಚರಿಕೆ ನೀಡಿದರು.

Related Articles

Related image1
ಖರ್ಗೆ ಪಿಯುಸಿ ಫೇಲಾದ ಮಗನಿಗೆ ಐಟಿ-ಬಿಟಿ ಖಾತೆ ಕೊಡಿಸಿ ಬೆಂಗಳೂರಿಗೆ ಕೆಟ್ಟ ಹೆಸರು ತಂದ್ರು; ಪ್ರತಾಪ್ ಸಿಂಹ!
Related image2
ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ
36
ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ
Image Credit : Asianet News

ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ

ಪ್ರದೀಪ್ ಈಶ್ವರ್ ಅವರ ಬಾಹ್ಯ ರೂಪದ ಬಗ್ಗೆಯೂ ಪ್ರತಾಪ್ ಸಿಂಹ ವೈಯಕ್ತಿಕ ಟೀಕೆಗಳನ್ನು ಮಾಡಿದರು. 'ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್' ಎಂದು ಹರಿಹಾಯ್ದರು.

46
ಮುಳ್ಳಂದಿ ಮುಖದ ಕಾಮಿಡಿ ಪೀಸ್:
Image Credit : Asianet News

ಮುಳ್ಳಂದಿ ಮುಖದ ಕಾಮಿಡಿ ಪೀಸ್:

ಮುಳ್ಳು ಹಂದಿ ಮುಖದ ಕಾಮಿಡಿ ಪೀಸ್ ಹುಟ್ಟೋದು ನಿಮ್ಮ ಅಪ್ಪನಿಗೆ ಮಾತ್ರ. ನನ್ನ ತಂದೆ ವಯಸ್ಸಿನಲ್ಲಿದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ದರೆ ನೀನು ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ" ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

56
ಭಾಷೆ ಬಳಕೆ ಬಗ್ಗೆ ಕ್ಷಮೆಯಾಚನೆ:
Image Credit : Asianet News

ಭಾಷೆ ಬಳಕೆ ಬಗ್ಗೆ ಕ್ಷಮೆಯಾಚನೆ:

ಪ್ರದೀಪ್ ಈಶ್ವರ್‌ಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಹೇಳಿದ ಪ್ರತಾಪ್ ಸಿಂಹ, ಈ ರೀತಿ ಕಠಿಣ ಪದಗಳನ್ನು ಬಳಸಿದ್ದಕ್ಕಾಗಿ ಕರ್ನಾಟಕದ ಜನರ ಬಳಿ ಕ್ಷಮೆ ಕೇಳುತ್ತೇನೆ ಎಂದರು.

66
ನನ್ನ ತಾಯಿ ಬಗ್ಗೆ ಅವಹೇಳನ:
Image Credit : Asianet News

ನನ್ನ ತಾಯಿ ಬಗ್ಗೆ ಅವಹೇಳನ:

ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ್ ಅವಹೇಳನವಾಗಿ ಮಾತಾಡಿದ್ದಾನೆ. ಇನ್ನೊಂದು ಬಾರಿ ಎಚ್ಚರಿಕೆ ಇರಲಿ. ರಾಜಕೀಯವಾಗಿ, ಚಿಕ್ಕಬಳ್ಳಾಪುರದ ಗೌಡರ ಸಣ್ಣ ಮುನಿಸಿನ ಕಾರಣದಿಂದಾಗಿ ಪ್ರದೀಪ್ ಈಶ್ವರ್ ಗೆದ್ದಿದ್ದಾರೆ ಅಷ್ಟೇ ಎಂದು ಗೆಲುವಿನ ಬಗ್ಗೆಯೂ ಟೀಕಿಸಿದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಪ್ರತಾಪ್ ಸಿಂಹ
ಕರ್ನಾಟಕ ರಾಜಕೀಯ
ರಾಜಕೀಯ ಸುದ್ದಿ
ಮೈಸೂರು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved