ಕುಮಾರಸ್ವಾಮಿ ನಿವಾಸಕ್ಕೆ ಶ್ರೀಗಳ ದಿಢೀರ್ ಭೇಟಿ, ನಿಖಿಲ್ ಹೇಳಿದ್ದು ಹೀಗೆ..!
ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಎಲ್ಲರ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ. ಇದರ ಮಧ್ಯೆ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ. ಮತ್ತೊಂದೆಡೆ ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ದಿಢೀರ್ ಅಂತ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಉಪ ಚುನಾವಣೆ ಮುಗಿದ ಬೆನ್ನಲ್ಲೇ ಶ್ರೀ ನಂಜಾವಧೂತ ಸ್ವಾಮೀಜಿ ದಿಢೀರ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ನಂಜಾವಧೂತ ಸ್ವಾಮೀಜಿ ಇಂದು (ಶುಕ್ರವಾರ) ಬೆಂಗಳೂರಿನ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಸ್ವಾಮಿಯವರ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ನಿಖಿಲ್ ಹಾಗೂ ರೇವತಿಯವರು ಆಶೀರ್ವಾದವನ್ನು ಪಡೆದರು.
ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್ ಕುಮಾರಸ್ವಾಮಿ ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ಇಂದು ನಮ್ಮ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಣ್ಣನವರ ಕುಶಲೋಪರಿಯನ್ನು ವಿಚಾರಿಸಿದ್ದು, ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದೆ ಎಂದು ಬರೆದುಕೊಂಡಿದ್ದಾರೆ
ಮನೆಗೆ ಬಂದ ಶ್ರೀಗಳಿಗೆ ನಿಖಿಲ್ ಹಾಗೂ ರೇವತಿ ಸೇರಿ ಸನ್ಮಾನಿಸಿದರು.
ಈ ವೇಳೆ ಶ್ರೀಗಳು ನಿಖಿಲ್ ಕುಮಾರಸ್ವಾಮಿಯವರ ಕುಶಲೋಪರಿಯನ್ನು ವಿಚಾರಿಸುತ್ತಿರುವುದು