MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಪ್ರಿಯಾಂಕ್ ಖರ್ಗೆಗೆ ಡಿಸಿಎಂ ನೀಡುವಂತೆ ದೇಗುಲದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!

ಪ್ರಿಯಾಂಕ್ ಖರ್ಗೆಗೆ ಡಿಸಿಎಂ ನೀಡುವಂತೆ ದೇಗುಲದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ವಿಶೇಷ ಪೂಜೆ!

ಪ್ರಿಯಾಂಕ್ ಖರ್ಗೆ ಅವರಿಗೆ ಹೊಸ ಸರ್ಕಾರ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲೇಬೇಕು ಎಂದು ಬೀದರ್‌ನಲ್ಲಿ ಅಭಿಮಾನಿಗಳು ದೇಗುಲಗಳಲ್ಲಿ 101 ತೆಂಗಿನಕಾಯಿಗಳನ್ನ ಹೊಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಹೈಕಮಾಂಡ್‌ಗೆ  ಒತ್ತಾಯಿಸಿದರು.

2 Min read
Author : Ravi Janekal
Published : May 31 2026, 12:48 PM IST
Share this Photo Gallery
  • FB
  • TW
  • Linkdin
  • Whatsapp
15
ಈ ಬಾರಿ ಪ್ರಿಯಾಂಕ್ ಖರ್ಗೆ ಸಿಗುತ್ತಾ ಡಿಸಿಎಂ ಪಟ್ಟ?
Image Credit : Asianet News

ಈ ಬಾರಿ ಪ್ರಿಯಾಂಕ್ ಖರ್ಗೆ ಸಿಗುತ್ತಾ ಡಿಸಿಎಂ ಪಟ್ಟ?

ರಾಜ್ಯದಲ್ಲಿ ಸಿಎಲ್‌ಪಿ ನಾಯಕನ ಆಯ್ಕೆಯ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಉಪಮುಖ್ಯಮಂತ್ರಿ (ಡಿಸಿಎಂ), ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಹುದ್ದೆಗಳಿಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ವಿವಿಧ ಬಣಗಳ ನಾಯಕರು ತಮಗೆ ಬೇಕಾದ ಸ್ಥಾನಗಳಿಗಾಗಿ ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ. ಕೆಲ ಪ್ರಭಾವಿ ನಾಯಕರು ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಲಾಬಿ ನಡೆಸುತ್ತಿದ್ದರೆ, ಇನ್ನು ಹಲವರು ರಾಜ್ಯದ ಪ್ರಮುಖ ನಾಯಕರಾದ ಸಿದ್ದರಾಮಯ್ಯ(Siddaramaiah) ಮತ್ತು ಡಿ.ಕೆ. ಶಿವಕುಮಾರ್(DK Shivakumar) ಅವರಿಗೆ ದುಂಬಾಲು ಬಿದ್ದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಈ ಬಾರಿ ಪ್ರಿಯಾಂಕ್ ಖರ್ಗೆ(Priyank kharge) ಅವರಿಗೆ ಡಿಸಿಎಂ(DCM) ಹುದ್ದೆ ನೀಡಬೇಕು ಎಂಬ ತೀವ್ರ ಒತ್ತಾಯ ಕೇಳಿಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ವೀರಭದ್ರೇಶ್ವರ ದೇವಸ್ಥಾನದಲ್ಲಿ 101 ಕಾಯಿ ಒಡೆದ ಅಭಿಮಾನಿಗಳು
Image Credit : Asianet News

ವೀರಭದ್ರೇಶ್ವರ ದೇವಸ್ಥಾನದಲ್ಲಿ 101 ಕಾಯಿ ಒಡೆದ ಅಭಿಮಾನಿಗಳು

ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಪಟ್ಟ ಹಾಗೂ ಎಂಎಲ್‌ಸಿ ಚಂದ್ರಶೇಖರ್ ಪಾಟೀಲ್(MLC Chandrashekhar patil) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯಲ್ಲಿ ಅಭಿಮಾನಿಗಳು ಹಲವು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆಗಳನ್ನು ಆರಂಭಿಸಿದ್ದಾರೆ. ಬೀದರ್‌ನ ಹುಮನಾಬಾದ್‌ನಲ್ಲಿರುವ ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಬಳಿಕ ಪ್ರಿಯಾಂಕ್ ಖರ್ಗೆ ಡಿಸಿಎಂ ಸಿಗಲೆಂದು ಬರೋಬ್ಬರಿ 101 ತೆಂಗಿನಕಾಯಿಗಳನ್ನು ಒಡೆದು ಈಡೇರಿಕೆಗಾಗಿ ದೇವರಲ್ಲಿ ಮೊರೆ ಇಟ್ಟಿದ್ದಾರೆ.

Related Articles

Related image1
Priyank kharge DCM: ಪ್ರಿಯಾಂಕ್‌ ಖರ್ಗೆ ಡಿಸಿಎಂ ಏಕೆ ಆಗಬೇಕು ಗೊತ್ತಾ?
Related image2
ಡಿಕೆಶಿ ಸಿಎಂ ಆಗಲೆಂದು ಒಬ್ಬೊಬ್ಬರದು ಒದೊಂದು ಸರಣಿ ಹರಕೆಗಳು, ಪ್ರಿಯಾಂಕ್ ಖರ್ಗೆ ಸಚಿವರಾಗಲಿ ಎಂದು ಈಡುಗಾಯಿ!
35
ರಾಜರಾಜೇಶ್ವರಿ ಸನ್ನಿಧಿ ವಿಶೇಷ ಪೂಜೆ
Image Credit : Asianet News

ರಾಜರಾಜೇಶ್ವರಿ ಸನ್ನಿಧಿ ವಿಶೇಷ ಪೂಜೆ

ಹುಮನಾಬಾದ್‌ನ ಮತ್ತೊಂದು ಪುರಾತನ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲೂ ಅಭಿಮಾನಿಗಳು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ವಿಶೇಷ ಅರ್ಚನೆ ಮಾಡಿಸಿದರು. ಪ್ರಿಯಾಂಕ್ ಖರ್ಗೆ ಮತ್ತು ಚಂದ್ರಶೇಖರ್ ಪಾಟೀಲ್ ಅವರ ಭಾವಚಿತ್ರಗಳನ್ನು ಹಿಡಿದು ದೇವಸ್ಥಾನದ ಆವರಣದಲ್ಲಿ ಜಯಘೋಷಗಳನ್ನು ಕೂಗಲಾಯಿತು. ಇಬ್ಬರೂ ನಾಯಕರು ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಉನ್ನತ ಜವಾಬ್ದಾರಿಗಳನ್ನು ನಿಭಾಯಿಸಲು ಸಮರ್ಥರಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕೆಂದು ಒತ್ತಾಯಿಸಿದರು.

45
ಚಂದ್ರಶೇಖರ್ ಪಾಟೀಲ್‌ಗೆ ಸಿಗುತ್ತಾ ಸಚಿವ ಸ್ಥಾನ?
Image Credit : Asianet News

ಚಂದ್ರಶೇಖರ್ ಪಾಟೀಲ್‌ಗೆ ಸಿಗುತ್ತಾ ಸಚಿವ ಸ್ಥಾನ?

ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರ ಸಹೋದರ ಹಾಗೂ ಪ್ರಸ್ತುತ ಎಂಎಲ್‌ಸಿ ಆಗಿರುವ ಚಂದ್ರಶೇಖರ್ ಪಾಟೀಲ್ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಕಡ್ಡಾಯವಾಗಿ ಸ್ಥಾನ ನೀಡಬೇಕು ಎಂಬ ಒತ್ತಾಯ ಜಿಲ್ಲೆಯಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಂಎಲ್‌ಸಿ ಚಂದ್ರಶೇಖರ್ ಪಾಟೀಲ್ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಯುವಕರ, ಪದವೀಧರರ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಬೆಂಬಲಿಗರು ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

55
ಡಿಸಿಎಂ ಹುದ್ದೆಗೆ ಪ್ರಿಯಾಂಕ್ ಖರ್ಗೆ ಸಮರ್ಥರು
Image Credit : Asianet News

ಡಿಸಿಎಂ ಹುದ್ದೆಗೆ ಪ್ರಿಯಾಂಕ್ ಖರ್ಗೆ ಸಮರ್ಥರು

ಮತ್ತೊಂದೆಡೆ, ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ನಾಯಕ ಪ್ರಿಯಾಂಕ್ ಖರ್ಗೆ ಅವರ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಅಭಿಮಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕ್ಷೇತ್ರದಾದ್ಯಂತ ಮತ್ತು ರಾಜ್ಯ ಮಟ್ಟದಲ್ಲಿ ಅವರು ಮಾಡುತ್ತಿರುವ ಜನಪರ ಕೆಲಸಗಳನ್ನು ಗಮನಿಸಿ, ಅವರಿಗೆ ಈ ಬಾರಿ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಯನ್ನು ನೀಡಲೇಬೇಕು ಎಂದು ಬೀದರ್ ನಾಯಕರು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಇಡೀ ಉತ್ತರ ಕರ್ನಾಟಕ ಭಾಗಕ್ಕೆ ದೊಡ್ಡ ರಾಜಕೀಯ ಬಲ ಸಿಗಲಿದ್ದು, ಪಕ್ಷದ ಸಂಘಟನೆಗೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಕರ್ನಾಟಕ ರಾಜಕೀಯ
ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್
ಬೀದರ್

Latest Videos
Recommended Stories
Recommended image1
2028ರಿಂದ ಡಿಕೆಶಿಗೆ ಡೇಂಜರ್​: ವಿಜಯ್​ ಪಿಎಂ ಆಗೋ ಮೊದಲು ಜೈಲಿಗೆ- ತ್ರಿಷಾ ಸಿಎಂ; ಗುರೂಜಿ ಭವಿಷ್ಯವಾಣಿ ಏನಿದೆ
Recommended image2
Pralhad Joshi: ಡಿಕೆ ಶಿವಕುಮಾರ್ ಸಿಎಂ ಆಗುವುದರಿಂದ ಏನೂ ಬದಲಾಗೋಲ್ಲ; ಕಾಂಗ್ರೆಸ್ ವಿರುದ್ಧ ಜೋಶಿ ವಾಗ್ದಾಳಿ
Recommended image3
ಸಿಎಲ್‌ಪಿ ನಾಯಕನ ಆಯ್ಕೆ ಬೆನ್ನಲ್ಲೇ ಮತ್ತೆ ಹೈಕಮಾಂಡ್ ಬುಲಾವ್, ಡಿಕೆಶಿ, ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ? ಡಿಸಿಎಂ ಹುದ್ದೆಯೇ ಬೇಡ ಅಂದಿದ್ದು ಯಾರು?
Related Stories
Recommended image1
Priyank kharge DCM: ಪ್ರಿಯಾಂಕ್‌ ಖರ್ಗೆ ಡಿಸಿಎಂ ಏಕೆ ಆಗಬೇಕು ಗೊತ್ತಾ?
Recommended image2
ಡಿಕೆಶಿ ಸಿಎಂ ಆಗಲೆಂದು ಒಬ್ಬೊಬ್ಬರದು ಒದೊಂದು ಸರಣಿ ಹರಕೆಗಳು, ಪ್ರಿಯಾಂಕ್ ಖರ್ಗೆ ಸಚಿವರಾಗಲಿ ಎಂದು ಈಡುಗಾಯಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved