MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ

ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೋಲಾರದಲ್ಲಿ 21 ಎಕರೆ ಸ್ಮಶಾನ ಮತ್ತು ಕೆರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ ಎಂದು ವಿಪಕ್ಷ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಇದು ತಮ್ಮ ಪಿತ್ರಾರ್ಜಿತ ಆಸ್ತಿ  ಎಂದು ಸ್ಪಷ್ಟನೆ ನೀಡಿದ್ದಾರೆ.

3 Min read
Gowthami K
Published : Dec 17 2025, 05:06 PM IST
Share this Photo Gallery
  • FB
  • TW
  • Linkdin
  • Whatsapp
16
ಕೃಷ್ಣಬೈರೇಗೌಡ ವಿರುದ್ಧ ಜಮೀನು ನುಂಗಿದ ಆರೋಪ
Image Credit : Social Media

ಕೃಷ್ಣಬೈರೇಗೌಡ ವಿರುದ್ಧ ಜಮೀನು ನುಂಗಿದ ಆರೋಪ

ಬೆಂಗಳೂರು: ಕಂದಾಯ ಸಚಿವ ಕೃಷ್ಣಬೈರೇಗೌಡ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ನರಸಾಪುರ ಹೋಬಳಿ ಗರುಡನಪಾಳ್ಯ ದಲ್ಲಿ 21 ಎಕರೆ ಜಮೀನು ನುಂಗಿದ ಆರೋಪವಿದೆ. ನಕಲಿ ದಾಖಲೆ ಸೃಷ್ಟಿ ಮಾಡಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮುಖಂಡ ತಮ್ಮೇಶ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸ್ವತಃ ಸಚಿವರೇ ಸ್ಪಷ್ಟನೆ ಕೂಡ ನೀಡಿದ್ದಾರೆ.

26
ಛಲವಾದಿ ನಾರಾಯಣ ಸ್ವಾಮಿ ಆರೋಪವೇನು?
Image Credit : Asianet News

ಛಲವಾದಿ ನಾರಾಯಣ ಸ್ವಾಮಿ ಆರೋಪವೇನು?

ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಸರ್ಕಾರದ ಮುಖ್ಯಮಂತ್ರಿಗಳೇ ಕೂಡ ಹಗರಣದಲ್ಲಿ 14 ಸೈಟು ಪಡೆದು ವಾಪಸ್ ಕೊಟ್ಟರು. ಪ್ರಿಯಾಂಕ್ ಖರ್ಗೆ ಐದು ಎಕರೆ ಜಾಗ ಪಡೆದು ವಾಪಸ್ ನೀಡಿದರು. ಈ ಎರಡೂ ಕೇಸ್ ಕೇಸೇ ಅಲ್ಲ. ಕದ್ದ ಮಾಲು ವಾಪಸ್ ಕೊಟ್ಟರೆ ಅದು ಕಳ್ಳತನವೇ ಅಲ್ಲ ಎಂಬಂತೆ ಪ್ರದರ್ಶನ ಮಾಡಿದೆ. ಸರ್ವೆ ನಂ. 47 , 1 ಎಕರೆ ಜಾಗ,ಗರುಡನಪಾಳ್ಯ ಗ್ರಾಮ ಕೋಲಾರ ಜಿಲ್ಲೆ . ಮತ್ತು ಸರ್ವೆ 46, 20.16 ಎಕರೆ ಜಾಗ. ಗರುಡನಪಾಳ್ಯ, ನರಸಾಪುರ ಹೋಬಳಿ ಕೋಲಾರ. ಒಟ್ಟು 21.16 ಎಕರೆ. ಇದು ಕೋಟ್ಯಾಂತರ ಮೌಲ್ಯದ ಜಾಗ, ಇದು ಸ್ಮಶಾನದ ಜಮೀನು. ಯಾರೂ ಕೂಡ ತಮ್ಮ ಹೆಸರಿಗೆ ಮಾಡಿಕೊಳ್ಳಲು ಆಗಲ್ಲ. ಆದರೆ ಅಕ್ರಮ ಎಸಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಕೃಷ್ಣ ಭೈರೇಗೌಡರು ತಮ್ಮ ಹೆಸರಿಗೆ ಸ್ಮಶಾನ ಜಮೀನು ಬರೆಸಿಕೊಂಡಿದ್ದಾರೆ. ದಾಖಲೆ ಪ್ರಕಾರ ಕೆರೆ ಜಮೀನು ಇದು, ಸ್ಮಶಾನಕ್ಕೆ ಬಿಡಲಾಗಿದೆ. ಕೆರೆ ಜಾಗವನ್ನು ಕೃಷ್ಣ ಭೈರೇಗೌಡ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. 21.16 ಎಕರೆ ಜಮೀನು ಇವರ ಹೆಸರಿಗೆ ಮಾಡಿಕೊಂಡಿದ್ದಾರೆ. ಮೂಲ ದಾಖಲೆಗಳ ಪ್ರಕಾರ ಸರ್ಕಾರಿ ಸ್ಮಶಾನ ಖರಾಬು ಅಂತ ಇದೆ.

Related Articles

Related image1
Karnataka Socio Economic Survey: ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ: ಸಚಿವ ಕೃಷ್ಣಬೈರೇಗೌಡ
Related image2
ಜಿಎಸ್‌ಟಿ ಇಳಿಕೆ ಮೂಲಕ ರಾಜ್ಯಕ್ಕೆ ನಷ್ಟ ಮಾಡಿಸಿ ಕೇಂದ್ರ ಲಾಭ ಮಾಡಿಕೊಳ್ಳುತ್ತಿದೆ: ಕೃಷ್ಣಬೈರೇಗೌಡ
36
ಇಡೀ ಕುಟುಂಬದ ಹೆಸರುಗಳು ಇಲ್ಲಿವೆ: ಛಲವಾದಿ ನಾರಾಯಣ ಸ್ವಾಮಿ
Image Credit : our own

ಇಡೀ ಕುಟುಂಬದ ಹೆಸರುಗಳು ಇಲ್ಲಿವೆ: ಛಲವಾದಿ ನಾರಾಯಣ ಸ್ವಾಮಿ

ಕಂದಾಯ ಸಚಿವರ ಖಾತೆಗೆ ಈ ಜಮೀನು ಹೇಗೆ ಬರುತ್ತದೆ ? ಯಾಕೆ ಕೃಷ್ಣ ಭೈರೇಗೌಡ ಹೆಸರಿಗೆ ಸ್ಮಶಾನ ಖರಾಬು ಜಮೀನು ಬಂದಿದೆ? ಮ್ಯುಟೇಷನ್ ನಲ್ಲಿ ಖರಾಬ್ ಅಂತ ಬ್ರ್ಯಾಕೇಟ್ ನಲ್ಲಿದೆ. ಕೃಷ್ಣ ಭೈರೇಗೌಡ ರಾಜೀನಾಮೆ ಕೊಡಬೇಕು. ಮಿಸ್ಟರ್ ಕ್ಲೀನ್ ಅಂತ ಬಿಂಬಿತವಾಗಿದೆ. ಹೀ ಈಸ್ ನಾಟ್ ಮಿಸ್ಟರ್ ಕ್ಲೀನ್. ಹೀ ಶುಡ್ ರಿಸೈನ್. ಸರ್ಕಾರ ಇದನ್ನು ತನಿಖೆಗೆ ಒಳಪಡಿಸಬೇಕು. ತಕ್ಷಣ ಇದನ್ನು ತನಿಖೆ ಮಾಡಬೇಕು. 6-11- 1978 ರಲ್ಲಿ ಕೆರೆ ಅಂತ ಇದೆ. ಈಗ ಎಲ್ಲ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿದೆ. ಎರಡೂ ಕೂಡ 20-4-2024 ರಲ್ಲಿ ಕೃಷ್ಣ ಭೈರೇಗೌಡ ಹೆಸರಲ್ಲಿಯೇ ಇದೆ. ಮಾರುಕಟ್ಟೆ ವ್ಯಾಲ್ಯು ಐದಾರು ಕೋಟಿ ಆಗುತ್ತದೆ. ಕೃಷ್ಣ ಭೈರೇಗೌಡ ಬಿನ್ ಸಿ ಭೈರೇಗೌಡ. ಅವರೇ ಅಲ್ಲ ಅನ್ನೋದಾದರೆ ಹೇಳಿಕೆ ಕೊಡಲಿ. ಅವರ ಇಡೀ ಕುಟುಂಬದ ಹೆಸರುಗಳು ಇಲ್ಲಿವೆ ಎಂದು ಆರೋಪಿಸಿದ್ದಾರೆ.

46
ತನಿಖೆಗೆ ಒಳಪಡಿಸಬೇಕು: ಎನ್ ರವಿಕುಮಾರ್
Image Credit : our own

ತನಿಖೆಗೆ ಒಳಪಡಿಸಬೇಕು: ಎನ್ ರವಿಕುಮಾರ್

ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಹೇಳಿಕೆ. 14 ಸೈಟು ವಾಪಸ್ ಕೊಟ್ಟರು, ಹ್ಯುಬ್ಲೊಟ್ ವಾಚ್ ವಾಪಸ್ ಕೊಟ್ಟರು. ಈಗಿನ ಸರದಿ ಕೃಷ್ಣ ಭೈರೇಗೌಡ ಸರದಿ. ಕೆರೆಯ ಜಮೀನನ್ನು ಸ್ಮಶಾನದ ಜಮೀನನ್ನು ಕೃಷ್ಣ ಭೈರೇಗೌಡ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಕೆರೆ ಹಾಗೂ ಸ್ಮಶಾನ ಖಾಸಗಿ ವ್ಯಕ್ತಿ ಗಳ ಹೆಸರಿಗೆ ಮಾಡಿಕೊಳ್ಳಲು ಆಗುವುದಿಲ್ಲ. ಕೆರೆಗೆ ಮಾರ್ಕ್ ಮಾಡಿ ಖರಾಬು ಅಂತ ಹೇಗೆ ಮಾಡಿದ್ರು? ಸಿಲ್ವರ್ ಟೀಕ್ ಬೆಳೆಯುತ್ತಾರಂತೆ ಅಲ್ಲ. ಇದನ್ನು ತನಿಖೆಗೆ ಒಳಪಡಿಸಬೇಕು, ಸಿಎಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದಾರೆ.

56
ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾಡಿಕೊಂಡಿದ್ದಾರೆ: ತಮ್ಮೇಶ್ ಗೌಡ
Image Credit : our own

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾಡಿಕೊಂಡಿದ್ದಾರೆ: ತಮ್ಮೇಶ್ ಗೌಡ

ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ಹೇಳಿಕೆ ನೀಡಿ, ವೈಟ್ ಕಾಲರ್ ರಾಜಕಾರಣಿ ಭ್ರಷ್ಟಾಚಾರ ಇಲ್ಲ ಎನ್ನುವ ಮಂತ್ರಿ ಕೃಷ್ಣ ಭೈರೇಗೌಡ. ನಕಲಿ ದಾಖಲೆ ಸೃಷ್ಟಿಸಿ ಕಂದಾಯ ಸಚಿವರು ಖರಾಬ್ ಜಮೀನನ್ನು ಅವರ ಹೆಸರಿಗೆ ಮಾಡಿಕೊಂಡಿದ್ದಾರೆ. ಫೋರ್ಜರಿ ದಾಖಲೆಗಳನ್ನು ಸೃಷ್ಟಿ ಮಾಡಿ ತಮ್ಮ ಹೆಸರಿಗೆ ಖರಾಬ್ ಜಮೀನು ಮಾಡಿಸಿಕೊಂಡಿದ್ದಾರೆ. ಸರ್ಕಾರಿ ಜಮೀನು ಉಳಿಸಲು ಹೋರಾಟ ಮಾಡ್ತೀವಿ ಅಂತ ಹೇಳುವ ಅವರ ನಿಯತ್ತು ಏನು ಎಂಬುದು ಈಗ ಹೊರಗೆ ಬಂದಿದೆ. ಮೂಲ ದಾಖಲೆಗಳೇ ಫೋರ್ಜರಿ ಮಾಡಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಕಂದಾಯ ಸಚಿವರು ಯಾವ ರೀತಿ ಪ್ರಭಾವ ಬಳಸಿದರು...? ಕಂದಾಯ ಸಚಿವರು ಆ ಸ್ಥಾನದಲ್ಲಿ ಇರಲು ಯೋಗ್ಯತೆ ಅರ್ಹತೆ ಇದೆಯಾ? ಸ್ವಜನಪಕ್ಷಪಾತದಲ್ಲಿ ಇರಬೇಕಾದರೆ ಅವರು ಆ ಸ್ಥಾನದಲ್ಲಿ ಮುಂದುವರಿಯಲು ಅರ್ಹರಾ?ಕೃಷ್ಣ ಭೈರೇಗೌಡ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

66
ಕೃಷ್ಣಭೈರೇಗೌಡ ಸ್ಪಷ್ಟನೆ
Image Credit : our own

ಕೃಷ್ಣಭೈರೇಗೌಡ ಸ್ಪಷ್ಟನೆ

ಸರ್ಕಾರಿ ಸ್ಮಶಾನ, ಕೆರೆ ಜಾಗ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಇಲ್ಲದೇ ಇರೋದನ್ನ ಹುಡುಕಿ ಆರೋಪ ಮಾಡೋದು ಅವರ ಸಂಸ್ಕೃತಿ. ನಮ್ಮ ತಾತನವರಿಂದ ನಮಗೆ ವಿಭಾಗದ ಮೂಲಕ ಬಂದಿರುವ ಆಸ್ತಿ. ಗ್ರ್ಯಾಂಟ್ ಮಾಡಿಸಿಕೊಂಡಿರೋದು ಅಲ್ಲ. ಕ್ರಮದ ಮೂಲಕ ತೆಗೆದುಕೊಂಡು, ಕುಟುಂಬದಲ್ಲಿ ಭಾಗ ಆಗಿ ಬಂದಿದೆ. ಹಿಂದೆ ಏನಾಗಿದೆ ಅಂತಾ ಅವ್ರು ಚೆಕ್ ಮಾಡಲಿ. ನಮ್ಮ ತಾತನವರು ಖರೀದಿ ಮಾಡಿ ಬಂದಿರೋದು ಅಲ್ವಾ ಅಂತಾ ಚೆಕ್ ಮಾಡಲಿ. ಲೋಕಾಯುಕ್ತದಿಂದ ಬೇಕಾದ್ರೆ ದೂರು ಕೊಡಲಿ. ಇಲ್ಲದೇ ಇದ್ರೆ ಬೇರೆ ತನಿಖಾ ಸಂಸ್ಥೆಯಿಂದ ಮಾಡಿಸಲಿ. 78 ರಲ್ಲಿ ನಾನು ಹುಟ್ಟಿ ಐದು ವರ್ಷ. ತಪ್ಪಾಗಿದ್ರೆ ಕಂಪ್ಲೇಂಟ್ ಕೊಡಲಿ, ತನಿಖೆ ಮಾಡಿಸಲಿ. ಯಾವುದೋ ಪಿತ್ರಾರ್ಜಿತ ಆಸ್ತಿ ನಮಗೆ ಬಂದಿರೋದು. ಅದನ್ನ ರಾಜಕೀಯವಾಗಿ ಕೆಸರೆರಚಾಟ ಮಾಡೋದು ಅವ್ರು ವೃತ್ತಿ ಇರಬಹುದು. ಕಾನೂನು ಪ್ರಕಾರ ನಾನು ನಡೆದುಕೊಳ್ಳಬೇಕು, ಅವರೂ ನಡೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳಿಂದಲೂ ಮಾಡಿಸಲಿ. ಆರೋಪ ಮಾಡೋರು‌ ಮಾಡ್ತಾರೆ. ತನಿಖೆ ಮಾಡುವಾಗ ಕಾನೂನು ಇರುತ್ತೆ, ಸ್ವತಂತ್ರವಾಗಿ ತನಿಖೆ ಮಾಡಲಿ. 2000 ಇಸವಿಗೂ ಮೊದಲು ಕೈ ಬರಹ ಇದಿದ್ದು, ಎಲ್ಲಾ ದಾಖಲೆಗಳನ್ನ ತೆಗೆದು ನೋಡಲಿ ಎಂದು ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕೋಲಾರ
ಕೃಷ್ಣ ಬೈರೇಗೌಡ
ಆಸ್ತಿ ವಿವಾದ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ
Recommended image2
ಗೃಹಲಕ್ಷ್ಮಿ ಹಣ ಬಾಕಿ ಗದ್ದಲ: ತಪ್ಪೊಪ್ಪಿಕೊಂಡ ಸಚಿವೆ, ವಿಪಕ್ಷಗಳು ಆಕ್ರೋಶ, ಪ್ರಿಯಾಂಕ್ ಖರ್ಗೆಗೆ ಸ್ಫೀಕರ್ ತರಾಟೆ!
Recommended image3
ಕೇಂದ್ರದ ಗಾಂಧೀಜಿ ದ್ವೇಷ ಬಯಲಾಗುತ್ತಿದೆ
Related Stories
Recommended image1
Karnataka Socio Economic Survey: ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ: ಸಚಿವ ಕೃಷ್ಣಬೈರೇಗೌಡ
Recommended image2
ಜಿಎಸ್‌ಟಿ ಇಳಿಕೆ ಮೂಲಕ ರಾಜ್ಯಕ್ಕೆ ನಷ್ಟ ಮಾಡಿಸಿ ಕೇಂದ್ರ ಲಾಭ ಮಾಡಿಕೊಳ್ಳುತ್ತಿದೆ: ಕೃಷ್ಣಬೈರೇಗೌಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved