MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ತಮ್ಮ ಅಧಿಕಾರವಧಿಯಲ್ಲಿ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ದಾಖಲೆ ಬಿಚ್ಚಿಟ್ಟ ಸಿದ್ದು

ತಮ್ಮ ಅಧಿಕಾರವಧಿಯಲ್ಲಿ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ದಾಖಲೆ ಬಿಚ್ಚಿಟ್ಟ ಸಿದ್ದು

ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಕರ್ನಾಟಕ ಬಿಜೆಪಿ ನಾಯಕರಿಗೆ ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ದಾಖಲೆ  ಬಹಿರಂಗಪಡಿಸಿದ್ದಾರೆ. 

1 Min read
Author : Ramesh B
Published : Jul 29 2022, 05:49 PM IST
Share this Photo Gallery
  • FB
  • TW
  • Linkdin
  • Whatsapp
16

ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಕರ್ನಾಟಕ ಬಿಜೆಪಿ ನಾಯಕರಿಗೆ ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ದಾಖಲೆ  ಬಹಿರಂಗಪಡಿಸಿದ್ದಾರೆ.

26

ನಮ್ಮ ಸರ್ಕಾರದ  ಐದು ವರ್ಷಗಳ ಅವಧಿಯಲ್ಲಿ ರಾಜಕೀಯ ಘರ್ಷಣೆ ಇಲ್ಲವೆ ಕೋಮುಗಲಭೆಗಳಿಗೆ ಸಂಬಂಧ ಪಟ್ಟಂತೆ ಒಟ್ಟು 23 ಹತ್ಯೆಗಳಾಗಿವೆ. ಇವುಗಳಲ್ಲಿ ಹನ್ನೆರಡು ಮೃತ ವ್ಯಕ್ತಿಗಳು ಹಿಂದೂಗಳು, ಉಳಿದ ಹನ್ನೊಂದು ಮಂದಿ ಮುಸ್ಲಿಮರು.

36

ಹನ್ನೆರಡು ಹಿಂದೂಗಳ ಹತ್ಯೆಯ ಎಂಟು ಪ್ರಕರಣಗಳಲ್ಲಿ ಪಿ.ಎಫ್.ಐ/ಎಸ್.ಡಿ.ಪಿ.ಐ ಸಂಘಟನೆಯ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. ಒಂದು ಪ್ರಕರಣದಲ್ಲಿ ಮಾತ್ರ ಕಾಂಗ್ರೆಸ್ ಕಾರ್ಯಕರ್ತ ಆರೋಪಿಯಾಗಿದ್ದಾನೆ. ಇವರಲ್ಲಿ 99 ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಡೆಯುತ್ತಿದೆ. 

46

2013 ರಿಂದ 2017ರ ವರೆಗಿನ ಅವಧಿಯಲ್ಲಿ ನಡೆದ ಹನ್ನೊಂದು ಮುಸ್ಲಿಮರ ಹತ್ಯೆಗಳ ಎಂಟು ಪ್ರಕರಣಗಳಲ್ಲಿ ಬಜರಂಗದಳ, ತಲಾ ಒಂದು ಪ್ರಕರಣಗಳಲ್ಲಿ ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆ ಮತ್ತು ವಿಶ್ವ ಹಿಂದೂ ಪರಿಷತ್‌ ನ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. 115 ಆರೋಪಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗಿದೆ. 

56

ವೈಯಕ್ತಿಕ ಕಾರಣಗಳಿಗಾಗಿ ಹತ್ತು ಹತ್ಯೆಗಳಾಗಿದ್ದು 61 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಹತ್ಯೆಯ ಕಾರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ತನಿಖೆ ಪೂರ್ಣಗೊಂಡಿರಲಿಲ್ಲ. ಈ ಎಲ್ಲ ಪ್ರಕರಣಗಳ ಮೊಕದ್ದಮೆಗಳ ಸಂಖ್ಯೆ ಸಮೇತ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.

66

ಈ ಹತ್ಯೆ ಪ್ರಕರಣಗಳ ತನಿಖೆಗೆ ಪೊಲೀಸರು ಸಮರ್ಥರಾಗಿದ್ದರೂ ವಿರೋಧ ಪಕ್ಷಗಳ  ಒತ್ತಾಯಕ್ಕಾಗಿ ಕೆಲವು ಪ್ರಕರಣಗಳನ್ನು ಸಿಬಿಐ ಮತ್ತು ಎನ್ಐಎ ಗೆ ವಹಿಸಲಾಗಿತ್ತು. ಹೊನ್ನಾವರದ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ಮತ್ತು ಬೆಂಗಳೂರಿನ ರುದ್ರೇಶ್ ಕೊಲೆ ಪ್ರಕರಣವನ್ನು ಎನ್ಐಎ ಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

RB
Ramesh B
ಬಿಜೆಪಿ
ಸಿದ್ದರಾಮಯ್ಯ
ಕಾಂಗ್ರೆಸ್
ಹಿಂದೂ
ಮುಸ್ಲಿಂ

Latest Videos
Recommended Stories
Recommended image1
ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ 'ಪ್ರಬುದ್ಧ ಅಕಾಡೆಮಿ' ಮೇಲ್ಚಾವಣಿ ತಿಂಗಳಲ್ಲೇ ಕುಸಿತ: ಕಳಪೆ ಕಾಂಗ್ರೆಸ್ ಎಂದ ಜೆಡಿಎಸ್!
Recommended image2
ನಟಿ ಅಮೂಲ್ಯ ಪತಿ ಜಗದೀಶ್‌ ಆರ್‌ ಚಂದ್ರಗೆ ಉತ್ತಮ ಹುದ್ದೆ ಕೊಟ್ಟ BJP ಪಕ್ಷ! ಏನದು?
Recommended image3
ಇರಾನ್-ಇಸ್ರೇಲ್‌ ಯುದ್ಧ: ಭಾರತಕ್ಕೆ ರಫ್ತು, ಆಮದು ಆಗುವ ವಸ್ತುಗಳೇನು? ನಮ್ಮಲ್ಲಿ ಬೆಲೆ ಏರಿಕೆ ಆಗುತ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved