ಬೆಳಗಾವಿಗೆ ಶಾ ಭೇಟಿ ಬೆನ್ನಲ್ಲೇ ಇವರಿಗೆ ಲೋಕಸಭಾ ಬೈ ಎಲೆಕ್ಷನ್ ಟಿಕೆಟ್ ಫಿಕ್ಸ್ ಆಯ್ತಾ?
ಕೊರೋನಾ ಮಹಾಮಾರಿಯಿಂದ ಅಕಾಲಿಕ ಸಾವು ಕಂಡ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನದ ಬಳಕ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅದಾಗಲೇ ರಾಜಕೀಯ ಗರಿಗೆದರಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಇವರು ಕ್ಷೇತ್ರದಲ್ಲಿ ಆಕ್ಟೀವ್ ಆಗಿದ್ದಾರೆ.

<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಆಕ್ಟೀವ್ ಆಗಿದ್ದಾರೆ.</p>
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಬೆಳಗಾವಿಯಲ್ಲಿ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಆಕ್ಟೀವ್ ಆಗಿದ್ದಾರೆ.
<p>ಸೋಮವಾರ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿದ್ದ ಶ್ರದ್ಧಾ, ರಾಜಹಂಸಗಡ ಗ್ರಾಮಸ್ಥರ ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.</p>
ಸೋಮವಾರ ಬೆಳಗಾವಿ ತಾಲೂಕಿನ ರಾಜಹಂಸಗಡ ಗ್ರಾಮಕ್ಕೆ ಭೇಟಿ ನೀಡಿದ್ದ ಶ್ರದ್ಧಾ, ರಾಜಹಂಸಗಡ ಗ್ರಾಮಸ್ಥರ ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.
<p>ಅಲ್ಲದೇ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಇಲ್ಲಿರುವ ಸಿದ್ದೇಶ್ವರ ದೇಗುದಲ್ಲಿ ಪೂಜೆ ಸಲ್ಲಿಸಿದ್ದಾರೆ.</p>
ಅಲ್ಲದೇ ಐತಿಹಾಸಿಕ ರಾಜಹಂಸಗಡ ಕೋಟೆಗೂ ಭೇಟಿ ನೀಡಿ ಇಲ್ಲಿರುವ ಸಿದ್ದೇಶ್ವರ ದೇಗುದಲ್ಲಿ ಪೂಜೆ ಸಲ್ಲಿಸಿದ್ದಾರೆ.
<p>ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಜಗದೀಶ ಶೆಟ್ಟರ್ ಅವರ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಡಿಸೆಂಬರ್ 25ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದರು.</p>
ಸುರೇಶ ಅಂಗಡಿ ಅವರ ಕಿರಿಯ ಪುತ್ರಿ ಹಾಗೂ ಜಗದೀಶ ಶೆಟ್ಟರ್ ಅವರ ಸೊಸೆಯಾಗಿರುವ ಶ್ರದ್ಧಾ ಶೆಟ್ಟರ್ ಬೆಳಗಾವಿ ಎಪಿಎಂಸಿ ಆವರಣದಲ್ಲಿ ಡಿಸೆಂಬರ್ 25ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದರು.
<p>ಇದೀಗ ಅಮಿತ್ ಶಾ ಅವರು ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದರು.</p>
ಇದೀಗ ಅಮಿತ್ ಶಾ ಅವರು ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದರು.
<p>ಮನೆಗೆ ಅಮಿತ್ ಶಾ ಬಂದು ಹೋದ ಬಳಿಕ ಶ್ರದ್ಧಾ ಬಹಿರಂಗವಾಗಿ ಓಡಾಡುತ್ತಿರುವುದು ನೋಡಿದ್ರೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿವೆ.</p>
ಮನೆಗೆ ಅಮಿತ್ ಶಾ ಬಂದು ಹೋದ ಬಳಿಕ ಶ್ರದ್ಧಾ ಬಹಿರಂಗವಾಗಿ ಓಡಾಡುತ್ತಿರುವುದು ನೋಡಿದ್ರೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿವೆ.
<p>ಶಾ ಮನೆ ಬಂದಿರುವ ಸಮಯದಲ್ಲಿ ಜಗದೀಶ್ ಶೆಟ್ಟರ್ ಮೂಲಕ ಟಿಕೆಟ್ ಸುಳಿವು ನೀಡಿದ್ದರಿಂದ ಶ್ರದ್ಧಾ ಅವರು ಆಕ್ಟೀವ್ ಆಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.</p>
ಶಾ ಮನೆ ಬಂದಿರುವ ಸಮಯದಲ್ಲಿ ಜಗದೀಶ್ ಶೆಟ್ಟರ್ ಮೂಲಕ ಟಿಕೆಟ್ ಸುಳಿವು ನೀಡಿದ್ದರಿಂದ ಶ್ರದ್ಧಾ ಅವರು ಆಕ್ಟೀವ್ ಆಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.