MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಎಸ್ಸಿ ಎಸ್ಟಿ ಸಮುದಾಯಕ್ಕೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಎಸ್ಸಿ ಎಸ್ಟಿ ಸಮುದಾಯಕ್ಕೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯ ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಈ ಮೂಲಕ ಭಾರತ ವಿಕಸಿತ ಆಗಬೇಕು ಎಂಬುವುದು ಏಕೈಕ ಕಲ್ಪನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.  

2 Min read
Govindaraj S
Published : Feb 15 2024, 04:00 AM IST
Share this Photo Gallery
  • FB
  • TW
  • Linkdin
  • Whatsapp
15

ಹುಬ್ಬಳ್ಳಿ (ಫೆ.15): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯ ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಈ ಮೂಲಕ ಭಾರತ ವಿಕಸಿತ ಆಗಬೇಕು ಎಂಬುವುದು ಏಕೈಕ ಕಲ್ಪನೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು. ನಗರದ ಸವಾಯಿ ಗಂಧರ್ವ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಬಲವರ್ಧನೆಗಾಗಿ ಭೀಮ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ಮೋದಿ ಅವರ ಆಶಯ ದೇಶ ಆರ್ಥಿಕವಾಗಿ ಬೆಳೆಯುವುದರ ಮೂಲಕ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಸಿಗುವುದು ಹಾಗೂ ಬಡತನ ನಿರ್ಮೂಲನೆ ಮಾಡುವುದಾಗಿದೆ ಎಂದರು.

25

ಹಿಂದೆ ದೇಶವನ್ನು ಆಳಿದ ಕಾಂಗ್ರೆಸ್ ಯಾರಿಗೂ ಒಳ್ಳೆಯದು ಮಾಡಿಲ್ಲ. ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾಧಿಗೆ ಜಾಗವನ್ನು ನೀಡಲಿಲ್ಲ. ಅವರು ಬದುಕಿದಾಗ ಚಿತ್ರಹಿಂಸೆ ನೀಡಿದರು. ಅತ್ಯಂತ ಅಗೌರವವಾಗಿ ನಡೆದುಕೊಂಡ ಪಕ್ಷ ಕಾಂಗ್ರೆಸ್ ಎಂದು ಹರಿಹಾಯ್ದರು. ಪ್ರಮುಖ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಕಾಶ ನೀಡದಂತೆ ಮಾಡಿದ ದಲಿತ ದ್ರೋಹದ ಪಕ್ಷ ಕಾಂಗ್ರೆಸ್. ಡಾ. ಬಿ. ಆರ್. ಅಂಬೇಡ್ಕರ್ ವಿಧಾನಸಭೆ ಹಾಗೂ ಲೋಕಸಭೆ ಬರಬಾರದು ಎಂದು ತಡೆದಿದ್ದರು. ದಲಿತರಿಗೆ ಭೂಮಿ ಕೊಡುವುದಕ್ಕೆ ವಿರೋಧಿಸಿದ್ದರು ಎಂದು ಹೇಳಿದರು.

35

ಸಂವಿಧಾನ ಉಳಿಸಿ ಎಂಬ ಜಾಗೃತಿ ಮಾಡುತ್ತಿರುವ ಕಾಂಗ್ರೆಸ್ ನವರು ಹಿಂದೆ ದೇಶದಲ್ಲಿ ಬಾರಿ ಬಹುಮತವಿರುವ ಸರ್ಕಾರ ಕೆಡವಿ ಅದಕ್ಕೆ ವಿರೋಧ ಮಾಡಿದ್ದಾರೆ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದವರಿಗೆ ಪದ್ಮಭೂಷಣ ನೀಡಿ ಅವಮಾನಿಸಿದರು. ಈ ಎಲ್ಲ ವಿಷಯಗಳು ಪ್ರತಿಯೊಬ್ಬರಿಗೂ ತಿಳಿಸುವ ಕಾರ್ಯ ಮಾಡಬೇಕಿದೆ ಎಂದರು. ಮುಂಬರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಕ್ಕೆ ಇಳಿಯಲಿದೆ. ಐಎನ್‌ಡಿಐಎ ಒಕ್ಕೂಟ ಛಿದ್ರ ಛಿದ್ರವಾಗಿದೆ. ರಾಜ್ಯದ ಜನರು ಸಹ ಕಾಂಗ್ರೆಸ್‌ನವರನ್ನು ಮನೆಗೆ ಕಳುಹಿಸಬೇಕು. ದೇಶ ಅಭಿವೃದ್ಧಿಗೆ ಪ್ರಧಾನಿ ಮೋದಿ ಗೆಲ್ಲಿಸಬೇಕು ಎಂದರು.

45

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಕಾಂಗ್ರೆಸ್‌ನಂತೆ ಬಿಜೆಪಿ ಯಾವತ್ತು ಜಾತಿ ರಾಜಕಾರಣ ಮಾಡಿಲ್ಲ. ರಾಜಕಾರಣಕ್ಕಾಗಿ ಕಾಂಗ್ರೆಸ್‌ನವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಸಹ ಮುಚ್ಚಿಟ್ಟು ಅವಮಾನ ಮಾಡಿದ್ದರು. ಈಗ ಮತ್ತೆ ಮತ ಬ್ಯಾಂಕ್‌ಗಾಗಿ ಅಂಬೇಡ್ಕರ್ ಗೌರವಿಸುವ ನಾಟಕ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಿಜೆಪಿ ಚಿಂತನೆಗಳು ಒಂದೇ ನಾಣ್ಯದ ಎರಡು ಮುಖಗಳಿದಂತೆ. ಅಂಬೇಡ್ಕರ್ ಅವರು ದೇಶದ ಒಗ್ಗಟ್ಟಿಗೆ ಶ್ರಮಿಸಿದ್ದಾರೆ. 

55

ಆದರೆ, ಕಾಂಗ್ರೆಸ್ ಈಗಲೂ ದೇಶದ ವಿಭಜನೆ ಬಗ್ಗೆ ಮಾತನಾಡುತ್ತದೆ. ಎಸ್.ಸಿ. ಎಸ್‌ಟಿಗಳಿಗೆ ಸೇರಬೇಕಾದ 11 ಸಾವಿರ ಕೋಟಿ ಗ್ಯಾರಂಟಿ ಬಳಸಿಕೊಂಡು ಮೋಸ ಮಾಡಿದೆ ಎಂದರು. ಕೋಲಾರ ಸಂಸದ ಎ. ಮುನಿಸ್ವಾಮಿ ಮಾತನಾಡಿದರು. ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಶಾಸಕ ಸಿಮೆಂಟ್ ಮಂಜು, ರಾಜು ಕೊಟ್ಟೇನ್ನವರ, ತಿಪ್ಪಣ್ಣ ಮಜ್ಜಗಿ, ಡಾ. ಕ್ರಾಂತಿ ಕಿರಣ, ವಾದಿರಾಜ, ಭಾರ್ಗವಿ ದ್ರಾವಿಡ ಇದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಹುಬ್ಬಳ್ಳಿ
ಪ್ರಲ್ಹಾದ್ ಜೋಶಿ
Latest Videos
Recommended Stories
Recommended image1
ಡಿಕೆಶಿ ಭವಿಷ್ಯ ಅಂದೇ ಸದನದಲ್ಲಿ ನುಡಿದಿದ್ರಾ ಯಡಿಯೂರಪ್ಪ? ಹಲ್​ಚಲ್ ಸೃಷ್ಟಿಸ್ತಿರೋ ಈ ವಿಡಿಯೋದಲ್ಲಿ ಏನಿದೆ?
Recommended image2
ಯಾರು ಸಿಎಂ ಆಗಬೇಕು ಎಂಬ ಪ್ರಶ್ನೆಗೆ 'ನಾನೇ ಮುಂದಿನ ಮುಖ್ಯಮಂತ್ರಿ' ಎಂದ ಜಾರಕಿಹೊಳಿ!
Recommended image3
Belagavi: ದುಖಃದಿಂದ ಸುದ್ದಿಗೋಷ್ಠಿ ಮಾಡ್ತಿದ್ದೇನೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved