MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಭಾರತದ ಮೊದಲ ಪ್ರಧಾನಿ ಯಾರು? ಬಿಜೆಪಿ ಅಭ್ಯರ್ಥಿ ನಟಿ, ಕಂಗನಾ ಉತ್ತರಕ್ಕೆ ಶಾಕ್ ಆದ ನೆಟ್ಟಿಗರು

ಭಾರತದ ಮೊದಲ ಪ್ರಧಾನಿ ಯಾರು? ಬಿಜೆಪಿ ಅಭ್ಯರ್ಥಿ ನಟಿ, ಕಂಗನಾ ಉತ್ತರಕ್ಕೆ ಶಾಕ್ ಆದ ನೆಟ್ಟಿಗರು

ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಗೆ ಕಣಕ್ಕೆ ಇಳಿದಿರುವ ಬಾಲಿವುಡ್ ನಟಿ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಕಂಗನಾ ರಣಾವತ್ ಅವರು ಈಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ.

2 Min read
Anusha Kb
Published : Apr 06 2024, 01:01 PM IST| Updated : Apr 06 2024, 01:02 PM IST
Share this Photo Gallery
  • FB
  • TW
  • Linkdin
  • Whatsapp
19

ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಗೆ ಕಣಕ್ಕೆ ಇಳಿದಿರುವ ಬಾಲಿವುಡ್ ನಟಿ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಕಂಗನಾ ರಣಾವತ್ ಅವರು ಈಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. 

29

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕಂಗನಾ, ಭಾರತದ ಮೊದಲ ಪ್ರಧಾನ ಮಂತ್ರಿ ಸುಭಾಷ್ ಚಂದ್ರ ಬೋಸ್ ಎಂದು ಹೇಳುವ ಮೂಲಕ ನೋಡುಗರನ್ನು ಅಚ್ಚರಿಗೆ ತಳ್ಳಿದ್ದಾರೆ. 

39

ನಟಿಯಾಗಿದ್ದು, ಪ್ರಸ್ತುತ ರಾಜಕಾರಣಿಯಾಗಿ ಬದಲಾಗಿರುವ  ಪದ್ಮಶ್ರೀ ಪುರಸ್ಕೃತ ಕಂಗನಾ ರಣಾವತ್, ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

49

ಜೂನ್ 1 ರಂದು 7ನೇ ಹಂತದಲ್ಲಿ ಇಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಕಂಗನಾ ಅವರು ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ಹೇಳುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. 

59

'ಮೊದಲು ಇದನ್ನು ಸ್ಪಷ್ಟಪಡಿಸಲು ನನಗೆ ಬಿಡಿ, ನಾವು ಸ್ವಾತಂತ್ರ್ಯ ಪಡೆದಾಗ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಲ್ಲಿ ಹೋಗಿದ್ದರು?' ಎಂದು ಕಂಗನಾ ಕೇಳಿದ್ದಾರೆ.

69

ಈ ವೇಳೆ ಸಂದರ್ಶನ ಮಾಡುತ್ತಿದ್ದವರು ಮಧ್ಯ ಪ್ರವೇಶಿಸಿ ಆಕೆಯನ್ನು ಸರಿಪಡಿಸಲು ಪ್ರಯತ್ನಿಸಿದರೂ ಅವರಿಗೆ ಮಾತನಾಡಲು ಅವಕಾಶ ನೀಡದೇ ಮುಂದುವರೆಸಿದ ಕಂಗನಾ 'ಇಲ್ಲ, ದಯವಿಟ್ಟು ಇದನ್ನು ಇಂದು ಸ್ಪಷ್ಟಪಡಿಸಿ. ಅವರು ಎಲ್ಲಿಗೆ ಹೋಗಿದ್ದರು' ಎಂದು ಪ್ರಶ್ನಿಸಿದ್ದಾರೆ.

79

ಈ ವೀಡಿಯೋ ವೈರಲ್ ಆಗಿದ್ದು, ಕೆಲವರು ಕಂಗನಾರನ್ನ ಬೆಂಬಲಿಸಿ ಅವಿಭಜಿತ ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಆಗಿದ್ದರು ಎಂದಿದ್ದಾರೆ. ಆದರೆ ಬಹುತೇಕರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಂಗನಾ ಅಜ್ಞಾನಕ್ಕೆ ಬೆಚ್ಚಿಬಿದ್ದಿದ್ದಾರೆ. 

89

ಆಕೆ ಎಲ್ಲಿ ಓದಿದ್ದಾಳೆ ಎಂದು ಒಬ್ಬರು ಪ್ರಶ್ನೆ ಮಾಡಿದ್ದಾರೆ.  ಮಂಡಿ ಲೋಕಸಭಾ ಕ್ಷೇತ್ರದ ಜನ ಯೋಚಿಸಿ ಮತ ಚಲಾಯಿಸುವಂತೆ ನಾನು ದೇವರಲ್ಲಿ ಪ್ರಾರ್ಥಿಸುವೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. 

99

ಅಂದಹಾಗೆ ಸ್ವಾತಂತ್ರ ಹೋರಾಟಗಾರ, ಅಪ್ರತಿಮ ದೇಶ ಭಕ್ತ ಸುಭಾಷ್ ಚಂದ್ರ ಬೋಸ್ ಅವರು ಭಾರತಕ್ಕೆ ಸ್ವಾತಂತ್ರ ಬರುವುದಕ್ಕೂ ಮೊದಲೇ 1945ರ ಆಗಸ್ಟ್ 18 ರಂದು ಸಾವನ್ನಪ್ಪಿದ್ದಾರೆ. ಭಾರತಕ್ಕೆ ಸ್ವಾತಂತ್ರ ಸಿಕ್ಕಿದ್ದು, 1947ರ ಆಗಸ್ಟ್ 15 ರಂದು ಹಾಗೂ 1951ರಲ್ಲಿ ಜವಾಹರ್ ಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು ಹಾಗೂ 1964ರವರೆಗೆ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಕಂಗನಾ ರಣಾವತ್

Latest Videos
Recommended Stories
Recommended image1
ಕುರ್ಚಿಗಾಗಿ ಕಿತ್ತಾಟ, ಅಭಿವೃದ್ಧಿ ಶೂನ್ಯ: ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಎನ್.ರವಿಕುಮಾರ್ ಟೀಕೆ
Recommended image2
ಟೀಕಾಕಾರರನ್ನು ಬಂಧಿಸಲು ದ್ವೇಷದ ಬಿಲ್‌ ತಂದಿದ್ದೇವೆ ಎಂಬುದು ಸುಳ್ಳು: ಡಿ.ಕೆ.ಶಿವಕುಮಾರ್ ಲೇಖನ
Recommended image3
ವಿರೋಧಿಗಳನ್ನು ಹತ್ತಿಕ್ಕಲು ಅಸ್ತ್ರ ಆಗುತ್ತೆ ದ್ವೇಷದ ಬಿಲ್‌: ಸಂಸದ ಬೊಮ್ಮಾಯಿ ಲೇಖನ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved