MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • Why Vote for Modi? : ಮೋದಿ ಸರ್ಕಾರಕ್ಕೆ ಯಾವ ಪುರುಷಾರ್ಥಕ್ಕೆ ಮತ ಹಾಕಬೇಕು?: ಸಲೀಂ ಅಹ್ಮದ್‌

Why Vote for Modi? : ಮೋದಿ ಸರ್ಕಾರಕ್ಕೆ ಯಾವ ಪುರುಷಾರ್ಥಕ್ಕೆ ಮತ ಹಾಕಬೇಕು?: ಸಲೀಂ ಅಹ್ಮದ್‌

ಬ್ಯಾಡಗಿ(ಡಿ.02):  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಬದುಕನ್ನು ಬೀದಿಗೆ ತಂದಿರುವ ನರೇಂದ್ರ ಮೋದಿ(Narendra Modi) ಸರ್ಕಾರಕ್ಕೆ ಯಾವ ಪುರುಷಾರ್ಥಕ್ಕಾಗಿ ಮತ ಹಾಕಬೇಕು ಎಂದು ವಿಧಾನ ಪರಿಷತ್‌ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹ್ಮದ್‌(Saleem Ahmed) ಪ್ರಶ್ನಿಸಿದ್ದಾರೆ.

1 Min read
Kannadaprabha News | Asianet News
Published : Dec 02 2021, 12:07 PM IST| Updated : Dec 02 2021, 12:54 PM IST
Share this Photo Gallery
  • FB
  • TW
  • Linkdin
  • Whatsapp
14

ಪಟ್ಟಣದ ಕಾಂಗ್ರೆಸ್‌(Congress) ಭವನದಲ್ಲಿ ನಡೆದ ವಿಪ ಚುನಾವಣೆ(Vidhan Parishat Election) ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಗೆ(BJP) ಏಕೆ ಮತದಾನ(Vote) ಮಾಡಬೇಕು ಎನ್ನುವುದನ್ನು ಈದೀಗ ದೇಶದ ಪ್ರತಿಯೊಬ್ಬ ನಾಗರಿಕರು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಹೇಳಿದ ಸಲೀಂ ಅಹ್ಮದ್‌

24

ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ಬಡವರಿಗೆ ನೀಡಿಲ್ಲ. ಕಳೆದ ಎಂಟು ತಿಂಗಳಿನಿಂದ ಗ್ರಾಪಂ ಅಧಿಕಾರಿಗಳಿಗೆ ವೇತನ ನೀಡಿಲ್ಲ. ಸದಸ್ಯರಿಗೆ ಗೌರವಧನ ನೀಡಿಲ್ಲ. ಇಂತಹ ಸರ್ಕಾರ​ಗಳು ನಮಗೇ ಬೇಕಾ? ನೀವೇ ಯೋಚಿಸಿ ಮತ ಹಾಕಿ ಎಂದು ಮನವಿ ಮಾಡಿದ ಸಲೀಂ

34

ಹಾನಗಲ್‌ ಶಾಸಕ ಶ್ರೀನಿವಾಸ್‌ ಮಾನೆ(Shrinivas Mane) ಮಾತನಾಡಿ, ಹಾನಗಲ್‌ ಚುನಾವಣೆ ಕೇವಲ ಹಾನಗಲ್‌ಗೆ ಸೀಮಿತವಾಗಿರಲಿಲ್ಲ. ಬದಲಾಗಿ ದೇಶದಲ್ಲಿ ಬೆಲೆ ಏರಿಕೆ(Price Hike) ಮಾಡಿ, ಬಡವರ ಜೀವ ಹಿಂಡುತ್ತಿದ್ದ ಸರ್ಕಾರದ ವಿರುದ್ಧ ನಡೆದ ಯುದ್ಧವಾಗಿತ್ತು. ಆ ಯುದ್ಧದಲ್ಲಿ ಗೆದ್ದಿರುವುದು ಈಗ ಇತಿಹಾಸ. ಮತ್ತೆ ಬಿಜೆಪಿಯನ್ನು ಸೋಲಿಸಲು ಅವಕಾಶ ಬಂದಿದ್ದು, ಎಲ್ಲರೂ ಸಲೀಂ ಅಹ್ಮದ್‌ಗೆ ಮತ ಹಾಕುವಂತೆ ಮನವಿ ಮಾಡಿದರು.

44

ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್‌ ಮುಖಂಡ ಎಸ್‌.ಆರ್‌. ಪಾಟೀಲ ಮಾತನಾಡಿದರು. ಸಭೆಯಲ್ಲಿ ವೀಕ್ಷಕ ಟಿ.ಎನ್‌. ಶಾಹೀದ್‌, ತಾಂಡಾ ನಿಗಮದ ಮಾಜಿ ಅಧ್ಯಕ್ಷ ಬಾಲರಾಜ, ಮಂಜುನಾಥ, ರಾಬರ್ಟ್‌, ಮಲ್ಲಿಕಾರ್ಜುನ ಕರಿಲಿಂಗಣ್ಣವರ, ದಾನಪ್ಪ ಚೂರಿ, ರಮೇಶ ಸುತ್ತಕೋಟಿ, ಯುನಸ್‌ ಅಹ್ಮದ್‌ ಸವಣೂರ, ಪ್ರೇಮಾ ಅಂಗಡಿ, ಎಪಿಎಂಸಿ ಸದಸ್ಯ ದಾನನಗೌಡ ತೋಟದ, ಚೆನ್ನಬಸಪ್ಪ ಹುಲ್ಲತ್ತಿ, ಶಂಕರಗೌಡ ಪಾಟೀಲ, ಪ್ರಕಾಶ ಬನ್ನಿಹಟ್ಟಿ, ಡಿ.ಎಚ್‌. ಬುಡ್ಡನಗೌಡರ, ದುರುಗೇಶ ಗೋಣೆಮ್ಮನವರ, ಮಂಜುನಾಥ ಭೋವಿ, ಜಗದೀಶ ಪಾಟೀಲ, ರಮೇಶ ಮೋಟೆಬೆನ್ನೂರ ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬಿಜೆಪಿ
ನರೇಂದ್ರ ಮೋದಿ
ಚುನಾವಣೆ
ಕಾಂಗ್ರೆಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved