MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Raichur
  • ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ: 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು

ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ: 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು

ರಾಯಚೂರಿನ ಲಿಂಗಸೂಗೂರಿನಲ್ಲಿ, ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲೆಂದು ಹೋದ 15 ವರ್ಷದ ಕಾರ್ತಿಕ್ ಎಂಬ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಆತನ ಸಾವಿನಿಂದ ಹೆದರಿದ ಆತನ ಸ್ನೇಹಿತರು, ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಕೆರೆಗೆ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ.

1 Min read
Author : Anusha Kb
Published : Mar 10 2026, 06:58 AM IST
Share this Photo Gallery
  • FB
  • TW
  • Linkdin
  • Whatsapp
15
ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲು ಹೋದ ಬಾಲಕನ ದಾರುಣ ಸಾವು
Image Credit : Asianet News

ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲು ಹೋದ ಬಾಲಕನ ದಾರುಣ ಸಾವು

ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ.

25
10ನೇ ಕ್ಲಾಸ್‌ನ ಇಬ್ಬರು ಸ್ನೇಹಿತರ ಜೊತೆ ಹೋದ 9ನೇ ಕ್ಲಾಸ್‌ನ ಕಾರ್ತಿಕ್
Image Credit : Asianet News

10ನೇ ಕ್ಲಾಸ್‌ನ ಇಬ್ಬರು ಸ್ನೇಹಿತರ ಜೊತೆ ಹೋದ 9ನೇ ಕ್ಲಾಸ್‌ನ ಕಾರ್ತಿಕ್

ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಹೊಸಬಟ್ಟೆ ತರುವುದಕ್ಕೆ ತನ್ನ ಇಬ್ಬರು 10ನೇ ತರಗತಿಯ ಸ್ನೇಹಿತರ ಜೊತೆಗೆ 9ನೇ ತರಗತಿಯಲ್ಲಿ ಓದುತ್ತಿದ್ದ ಕಾರ್ತಿಕ್ ಕೂಡ ಹೋಗಿದ್ದರು. ದಾರಿ ಮಧ್ಯೆ ಬಾಯಾರಿಕೆಯಾಗಿದ್ದು, ಬಾವಿಯಲ್ಲಿ ನೀರು ಕುಡಿಯಲು ಹೋದಾಗ ಕಾರ್ತಿಕ್‌ಗೆ ಕರೆಂಟ್ ಶಾಕ್ ತಗುಲಿದ್ದು, ಕಾರ್ತಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Related Articles

Related image1
ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
Related image2
ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
35
ದಾರಿಮಧ್ಯೆ ಬಾವಿಗೆ ನೀರು ಕುಡಿಯಲು ಹೋದಾಗ ಕರೆಂಟ್ ಶಾಕ್
Image Credit : Asianet News

ದಾರಿಮಧ್ಯೆ ಬಾವಿಗೆ ನೀರು ಕುಡಿಯಲು ಹೋದಾಗ ಕರೆಂಟ್ ಶಾಕ್

ಕಾರ್ತಿಕ್ ಸಾವಿನಿಂದ ಭಯಗೊಂಡ ಸ್ನೇಹಿತರು ಈ ವಿಚಾರವನ್ನು ಯಾರಿಗೂ ತಿಳಿಸದೇ ಸಾವಿನ ಆರೋಪದಿಂದ ತಪ್ಪಿಸಿಕೊಳ್ಳಲು ಗೋಣಿ ಚೀಲದಲ್ಲಿ ಕಾರ್ತಿಕ್ ಶವ ಹಾಕಿ ಸಾಗಿಸಿದ್ದಾರೆ. ಬೈಕ್‌ನಲ್ಲಿ ಶವ ತೆಗೆದುಕೊಂಡು ಕರಡಕಲ್ ಕೆರೆಯಲ್ಲಿ ‌ಕಾರ್ತಿಕ್‌ ಶವಕ್ಕೆ ಕಲ್ಲು ಕಟ್ಟಿ ಎಸೆದು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಆ ಬಳಿಕ ಕಾರ್ತಿಕ್ ಸ್ನೇಹಿತರು ಗ್ರಾಮಕ್ಕೆ ತೆರಳಿ ಯಾರಿಗೂ ವಿಚಾರ ತಿಳಿಸದೇ ಸುಮ್ಮನೇ ಕುಳಿತಿದ್ದಾರೆ.

45
ಕಾರ್ತಿಕ್ ಶವ ಗೋಣಿಚೀಲಕ್ಕೆ ತುಂಬಿಸಿ ಕೆರೆಗೆಸೆದ ಸ್ನೇಹಿತರು
Image Credit : Asianet News

ಕಾರ್ತಿಕ್ ಶವ ಗೋಣಿಚೀಲಕ್ಕೆ ತುಂಬಿಸಿ ಕೆರೆಗೆಸೆದ ಸ್ನೇಹಿತರು

ಇತ್ತ ರಾತ್ರಿಯಾದರೂ ಕಾರ್ತಿಕ್ ಮನೆಗೆ ಬಾರದೇ ಹೋದಾಗ ಕಾರ್ತಿಕ್ ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ಕಾರ್ತಿಕ್‌ನನ್ನು ಜೊತೆಗೆ ಕರೆದೊಯ್ದು ಆತನ ಇಬ್ಬರು ಸ್ನೇಹಿತರ ಬಳಿ ಒತ್ತಡ ಹಾಕಿ ವಿಚಾರಿಸಿದಾಗ ಬಾಲಕರು ಸತ್ಯ ಬಾಯ್ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.

55
ಕೆರೆಯಿಂದ ಶವ ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು
Image Credit : Asianet News

ಕೆರೆಯಿಂದ ಶವ ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು

ಈ ಮಾಹಿತಿ ತಿಳಿದು ಕರಡಕಲ್ ಕೆರೆ ಬಳಿ ಪೊಲೀಸರು ಭೇಟಿ ನೀಡಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶವಕ್ಕಾಗಿ ಕರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಕರೆಯಲ್ಲಿ ಗೋಣಿ ಚೀಲದಲ್ಲಿ ಕಾರ್ತಿಕ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧಿಸಿದಂತೆ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ರಾಯಚೂರು
ಕ್ರೈಮ್ ನ್ಯೂಸ್

Latest Videos
Recommended Stories
Recommended image1
ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
Recommended image2
ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
Recommended image3
ದೇಶಾದ್ಯಂತ ದೇಗುಲಗಳು ಬಾಗಿಲು ಮುಚ್ಚಿದ್ರೂ, ಮಂತ್ರಾಲಯದ ರಾಯರ ಮಠಕ್ಕೆ ಗ್ರಹಣ ದೋಷವಿಲ್ಲ ಏಕೆ? ಎಂದಿನಂತೆ ಸಿಗಲಿದೆ ಭಕ್ತರಿಗೆ ದರ್ಶನ
Related Stories
Recommended image1
ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ಶೆಡ್‌ಗೆ ಬೆಂಕಿ: 700ಕ್ಕೂ ಹೆಚ್ಚು ಕುರಿಗಳು ಸಜೀವ ದಹನ
Recommended image2
ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved