MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Ramanagara
  • ರಾಮನಗರದಲ್ಲಿ ತಂತಿಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯ ರಕ್ಷಣೆ

ರಾಮನಗರದಲ್ಲಿ ತಂತಿಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯ ರಕ್ಷಣೆ

ಕನಕಪುರ ತಾಲೂಕಿನ ತುಳಸಿದೊಡ್ಡಿ ಗ್ರಾಮದಲ್ಲಿ ತಂತಿಬೇಲಿಗೆ ಸಿಲುಕಿದ್ದ ಚಿರತೆಯನ್ನು ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ. 

1 Min read
Sathish Kumar KH
Published : May 23 2025, 04:26 PM IST
Share this Photo Gallery
  • FB
  • TW
  • Linkdin
  • Whatsapp
13
Image Credit : Asianet News

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತುಳಸಿದೊಡ್ಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಒಂದು ದುರಂತಕರ ಘಟನೆಯು ಅರಣ್ಯ ಮತ್ತು ಪ್ರಕೃತಿ ಪ್ರೇಮಿಗಳ ಗಮನ ಸೆಳೆಯಿತು. ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಕಬ್ಬಿಣದ ತಂತಿಬೇಲಿಗೆ ಸಿಲುಕಿದ ಚಿರತೆ ನರಳಾಡುತ್ತಿದ್ದು, ಗ್ರಾಮಸ್ಥರ ನೆರವಿನಿಂದ ರಕ್ಷಣೆಗೊಂಡಿದೆ.

23
Image Credit : Asianet News

ಪ್ರತಿದಿನದಂತೆ ಬೆಳಿಗ್ಗೆ ತಮ್ಮ ಜಮೀನಿಗೆ ಹೋದ ಗ್ರಾಮಸ್ಥರು ಒಂದು ಚಿರತೆ ತಂತಿಬೇಲಿಗೆ ಸಿಲುಕಿಕೊಂಡು ಪೀಡಿತವಾಗಿ ಓದ್ದಾಡುತ್ತಿರುವ ದೃಶ್ಯವನ್ನು ನೋಡಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆಯ ಬಾಲ ಕಬ್ಬಿಣದ ತಂತಿಗೆ ಸಿಕ್ಕಿಕೊಂಡಿದ್ದು, ಅದು ಹೊರಬರಲಾಗದೆ ನೋವಿನಿಂದ ಕಿರುಚುತ್ತಿದ್ದುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.

Related Articles

Related image1
Now Playing
Ramanagara: ಡಿಸಿಎಂ ಡಿಕೆಶಿ ವಿರುದ್ಧ ಸಿಡಿದೆದ್ದ ರೈತರು
Related image2
Now Playing
ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅಗ್ನಿ ದುರಂತ | Ramanagara | Kannada News
33
Image Credit : Asianet News

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತಕ್ಷಣ ಧಾವಿಸಿ ಚಿರತೆಯ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಎಚ್ಚರಿಕೆಯಿಂದ ತಂತಿಬೇಲಿಯನ್ನು ಕತ್ತರಿಸಿ ಚಿರತೆಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದರು. ಬಳಿಕ ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಯಿತು.

ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ಕಾಳಜಿಯನ್ನು ಶ್ಲಾಘಿಸಿದರು. 'ಗ್ರಾಮಸ್ಥರು ತಕ್ಷಣ ನಮಗೆ ಮಾಹಿತಿ ನೀಡಿದ ಕಾರಣ, ಚಿರತೆಯನ್ನು ಸಮಯಕ್ಕೆ ಸರಿಯಾಗಿ ರಕ್ಷಣೆ ಮಾಡಿದ್ದೇವೆ. ಇಂತಹ ಪ್ರಾಣಿಗಳ ರಕ್ಷಣೆಗೆ ನಾಗರಿಕ ಜವಾಬ್ದಾರಿ ಕೂಡ ಅಗತ್ಯ ಎಂದು ಹೇಳಿದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ರಾಮನಗರ
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved