MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Relationship
  • ಮದುವೆಯಾಗುವುದಾಗಿ ಯುವತಿಯನ್ನು ಗರ್ಭಿಣಿ ಮಾಡಿದ, ಇದೀಗ ಬೇರೆ ಹುಡುಗಿ ಮದುವೆಯಾಗಿ ಕೈಕೊಟ್ಟ ಹೋದ

ಮದುವೆಯಾಗುವುದಾಗಿ ಯುವತಿಯನ್ನು ಗರ್ಭಿಣಿ ಮಾಡಿದ, ಇದೀಗ ಬೇರೆ ಹುಡುಗಿ ಮದುವೆಯಾಗಿ ಕೈಕೊಟ್ಟ ಹೋದ

ಭಟ್ಕಳದಲ್ಲಿ ಯುವತಿಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ದೈಹಿಕವಾಗಿ ಬಳಸಿಕೊಂಡು ಗರ್ಭಪಾತ ಮಾಡಿಸಿ ಬೇರೊಬ್ಬಳನ್ನು ವಿವಾಹವಾದ ಘಟನೆ ನಡೆದಿದೆ. ಸಂತ್ರಸ್ತ ಯುವತಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

1 Min read
Sathish Kumar KH
Published : Aug 07 2025, 04:59 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : Asianet News

ಉತ್ತರಕನ್ನಡ (ಆ.07): ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬಳಿಗೆ ದೈಹಿಕವಾಗಿ ಬಳಕೆ ಮಾಡಿಕೊಂಡು, ನಂತರ ಗರ್ಭಪಾತ ಮಾಡಿಸಿ ಬೇರೊಬ್ಬ ಯುವತಿಯೊಂದಿಗೆ ಮದುವೆಯಾಗಿರುವ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

24
Image Credit : Asianet News

ಪ್ರಕರಣದ ವಿವರ:

ಭಟ್ಕಳ ತಾಲ್ಲೂಕಿನ ಮಾರುಕೇರಿ ನಿವಾಸಿ 'ಗಣೇಶ ಕೃಷ್ಣ ಗೊಂಡ' ಎಂಬಾತನೇ ಈ ವಂಚನೆ ಮಾಡಿರುವ ಆರೋಪಿ. ಭಟ್ಕಳ ಬಾರ್ಡರ್ ನೂಝ ಮೂಲದ ಯುವತಿಯೊಂದಿಗೆ ಗಣೇಶ ಎರಡು ವರ್ಷಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಈ ಪರಿಚಯ ಮುಂದೆ ಪ್ರೀತಿಗೆ ತಿರುಗಿ, ಇಬ್ಬರೂ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಒಂದು ದಿನ ದೇವಸ್ಥಾನಕ್ಕೆ ಹೋಗುವ ನೆಪ ಹೇಳಿ, ಗಣೇಶ ಆ ಯುವತಿಯನ್ನು ಮಾರುಕೇರಿಯ ಹೋಮ್‌ಸ್ಟೇಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದನು.

Related Articles

Related image1
11 ವರ್ಷಗಳ ಪ್ರೀತಿ, ಮದುವೆಗೂ ಮುನ್ನ ಗರ್ಭಿಣಿ: ದಿವ್ಯಾ ಸಾವಿಗೆ ಕಾರಣವಾಯ್ತಾ ಗರ್ಭ ನಿರೋಧಕ ಮಾತ್ರೆ!
Related image2
10 ವರ್ಷ ಲವ್ ಮಾಡಿ ಮದ್ವೆಯಾದ್ರೂ ಬದಲಾಗುತ್ತೆ ಸಂಬಂಧ: ಹಾರ್ಶ್ ಅಂದ್ರೂ ಸಿಂಪಲ್ ಟಿಪ್ಸ್ ಹೇಳಿದ್ದಾರೆ ಇಲ್ ಕೇಳಿ
34
Image Credit : Asianet News

ಇದಾದ ನಂತರ ಆಕೆಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರಿಂದಾಗಿ ಯುವತಿ ಗರ್ಭಿಣಿಯಾಗಿದ್ದಾಳೆ. ಈ ವಿಚಾರವನ್ನು ತನ್ನ ಪ್ರಿಯತಮ ಗಣೇಶನಿಗೆ ಹೇಳಿದಾಗ ಆಕೆಯನ್ನು ಭಟ್ಕಳದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ನಂತರ ಆ ಯುವತಿಯನ್ನು ವಿವಿಧ ರೀತಿಯಲ್ಲಿ ಬಳಸಿಕೊಂಡು, ಕೊನೆಗೆ ಮದುವೆಯಾಗುವ ಭರವಸೆ ಈಡೇರಿಸದೆ ಬೇರೊಬ್ಬ ಹುಡುಗಿಯನ್ನು ಮದುವೆಯಾಗಿದ್ದಾನೆ.

44
Image Credit : Asianet News

ಆರು ಜನರ ವಿರುದ್ಧ ದೂರು ದಾಖಲು:

ಈ ಘಟನೆಯಿಂದ ಮನನೊಂದ ಯುವತಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಣೇಶ ಗೊಂಡನ ವಿರುದ್ಧ ಮಾತ್ರವಲ್ಲದೆ, ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಕೃಷ್ಣಿಗೊಂಡ, ಹರೀಶ ಗೊಂಡ, ಭಾಸ್ಕರ ಗೊಂಡ, ನಾಗೇಂದ್ರ ಗೊಂಡ, ಭಟ್ಕಳದ ನಾಗೇಶ್ ಹಾಗೂ ಎಂ.ಡಿ.ನಾಯ್ಕ ಎಂಬವರ ವಿರುದ್ಧವೂ ದೂರು ದಾಖಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಉತ್ತರ ಕನ್ನಡ
ಪ್ರೇಮ ವಿವಾಹ
ಪ್ರೀತಿ
ಸಂಬಂಧಗಳು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved