ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಕಿಚ್ಚ
ಸಿಎಂ ಭೇಟಿ ಮಾಡಿದ ಕಿಚ್ಚ ಸುದೀಪ್ | ಬಿಎಸ್ವೈ ಜೊತೆ ಕಿಚ್ಚ ಮಾತುಕತೆ
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ವೈ ಅವರನ್ನು ಭೇಟಿಯಾಗಿ ತೆರಳಿದ್ದಾರೆ ಸುದೀಪ್.
ಸುದೀಪ್ ಸಿನಿಪಯಣದ 25 ವರ್ಷದ ಸಂಭ್ರಮಾಚರಣೆಯಲ್ಲಿ ಸಿಎಂ ಬಿಎಸ್ ವೈ ಭಾಗಿಯಾಗಿದ್ದರು.
ಇಂದು ಬೆಳಗ್ಗೆ ಸಿಎಂ ಅವರನ್ನು ಭೇಟಿಯಾಗಿ ತಮ್ಮ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ ಸುದೀಪ್.
ಈ ವೇಳೆ ವಿಜಯೇಂದ್ರ ಸಹ ಹಾಜರಿದ್ದರು.
ಕಿಚ್ಚ ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣಕ್ಕಾಗಿ ಕಾಯುತ್ತಿದ್ದಾರೆ ಅಭಿಮಾನಿಗಳು.
ಸದ್ಯ ನಟ ಕನ್ನಡ ಬಿಗ್ಬಾಸ್ ಸೀಸನ್ 8 ಕಾರ್ಯಕ್ರಮ ನಡೆಸಿಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ