MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • 'ಪೇಮೆಂಟ್‌ ಬಂದಿಲ್ಲ, ಪುಷ್ಪ ಅರುಣ್‌ಕುಮಾರ್‌ಗೆ ಹೇಳಿ ಪ್ಲೇಸ್':‌ ಕೊತ್ತಲವಾಡಿ ಸಿನಿಮಾ ನಟ ಮಹೇಶ್‌ ಗುರು

'ಪೇಮೆಂಟ್‌ ಬಂದಿಲ್ಲ, ಪುಷ್ಪ ಅರುಣ್‌ಕುಮಾರ್‌ಗೆ ಹೇಳಿ ಪ್ಲೇಸ್':‌ ಕೊತ್ತಲವಾಡಿ ಸಿನಿಮಾ ನಟ ಮಹೇಶ್‌ ಗುರು

ಕೊತ್ತಲವಾಡಿ ಸಿನಿಮಾಕ್ಕೆ ಪುಷ್ಪ ಅರುಣ್‌ ಕುಮಾರ್‌ ಅವರು ಹಣ ಹೂಡಿದ್ದರು. ಅಷ್ಟೇ ಅಲ್ಲದೆ ‘ಘಾಟಿ’ ಸಿನಿಮಾದ ವಿತರಣೆ ಕೂಡ ಮಾಡಿದ್ದರು. ಈಗ ಸಿನಿಮಾದ ಸಂಭಾವನೆ ಕೊಟ್ಟಿಲ್ಲ ಅಂತ ನಟ ಮಹೇಶ್‌ ಗುರು ಅವರು ಆರೋಪ ಮಾಡಿದ್ದಾರೆ. 

1 Min read
Padmashree Bhat
Published : Sep 16 2025, 01:01 PM IST
Share this Photo Gallery
  • FB
  • TW
  • Linkdin
  • Whatsapp
15
ವಿಡಿಯೋ ಡಿಲಿಟ್
Image Credit : instagram

ವಿಡಿಯೋ ಡಿಲಿಟ್

ವಿಡಿಯೋ ಮೂಲಕ ಸಂಭಾವನೆ ಬಂದಿಲ್ಲ ಅಂತ ನಟ ಮಹೇಶ್ ಗುರು ಆರೋಪ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಅವರು ಹಾಕಿದ್ದ ವಿಡಿಯೋ ವೈರಲ್ ಆಗಿತ್ತು, ಈಗ ನೋಡಿದ್ರೆ ವಿಡಿಯೋ ಡಿಲೀಟ್ ಮಾಡಿದ್ದಾರೆ. ನಿರ್ಮಾಪಕಿ ಪುಷ್ಪ ಅವರ ಗಮನಕ್ಕೆ ತರೋದಿಕ್ಕೆ ವಿಡಿಯೋ ಮಾಡಿದ್ದೆ ಎಂದು ಮಹೇಶ್‌ ಹೇಳಿದ್ದಾರೆ.

25
ವಿಡಿಯೋ ಮೂಲಕ ಆರೋಪ
Image Credit : Asianet News

ವಿಡಿಯೋ ಮೂಲಕ ಆರೋಪ

ನಟ ಮಹೇಶ್ ಗುರು ಅವರು ಖಳನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಿರ್ದೇಶಕರ ಕಡೆಯಿಂದ ನಮಗೆ ಚಾನ್ಸ್ ಸಿಕ್ತು, ಆಗ ಒಂದು ಪ್ಯಾಕೇಜ್ ಮಾತಾಡಿದ್ರು, ಅಡ್ವಾನ್ಸ್ ದುಡ್ಡುಕೊಡ್ತೀವಿ ಅಂದ್ರು ಓಕೆ ಅಂತ ಒಪ್ಪಿಕೊಂಡೆ ಎಂದು ಮಹೇಶ್‌ ಹೇಳಿದ್ದಾರೆ.

Related Articles

Related image1
Yash's Signature: ಬಾಲಿವುಡ್ ಸಿನಿಮಾಗೆ ಕನ್ನಡದಲ್ಲೇ ಸಹಿ ಮಾಡಿ ಯಶ್ ಭಾಷಾ ಪ್ರೇಮ
Related image2
Rocking Star Yash: ಮಗದೊಂದು ಕಾರ್ ಖರೀದಿಸಿದ ಯಶ್, ಯಾವ್ದು ಕಾರು, ಏನ್ ಸಮಾಚಾರ?
35
ಪೇಮೆಂಟ್‌ ಆಗಿಲ್ಲ
Image Credit : Asianet News

ಪೇಮೆಂಟ್‌ ಆಗಿಲ್ಲ

“ಅದಾದ ನಂತ್ರ ಮುಹೂರ್ತ ಅಯ್ತು, ದುಡ್ಡು ಕೊಡ್ಲಿಲ್ಲ ಮೂರು ತಿಂಗಳು ಕೆಲಸ ಮಾಡಿದ್ವಿ, ಶೂಟಿಂಗ್ ಮುಗಿದ ಮೇಲೆಯೂ ಪೇಮೆಂಟ್ ಕೊಡ್ಲಿಲ್ಲ. ಡಬ್ಬಿಂಗ್ ಮಾಡಿ ಬಂದು ಮುಗಿದ್ಮೇಲೆ ಪೇಮೆಂಟ್ ಕೊಡ್ತೀನಿ ಅಂದ್ರು, ಆಮೇಲೆ ಪೇಮೆಂಟ್ ಕೊಡ್ಲಿಲ್ಲ” ಎಂದು ಮಹೇಶ್‌ ಹೇಳಿದ್ದಾರೆ.

45
ಫೋನ್‌ ನಂಬರ್‌ ಸಿಗಲಿಲ್ಲ
Image Credit : Asianet News

ಫೋನ್‌ ನಂಬರ್‌ ಸಿಗಲಿಲ್ಲ

ಸಿನಿಮಾ ಪ್ರಮೋಷನ್ ಜೋರಾಗಿ ಮಾಡಿದ್ರು, ನಮ್ಮನ್ನು ಎಲ್ಲಿಗೂ ಕರೀಲಿಲ್ಲ, ದುಡ್ಡು ಕೊಡ್ಲಿಲ್ಲ. ಈಗ ಸಿನಿಮಾ ಒಟಿಟಿಗೆ ಬಂದಿದೆ ಆದ್ರು ದುಡ್ಡು ಕೊಟ್ಟಿಲ್ಲ, ಇದು ನಿರ್ಮಾಪಕರಿಗೆ ಗೊತ್ತೋ ಗೊತ್ತಿಲ್ಲವೋ, ಗೊತ್ತಿಲ್ಲ. ಪುಷ್ಪ ಅರುಣ್‌ ಕುಮಾರ್ ಅವರಿಗೆ ಹೇಳೋಣ ಅಂದ್ರೆ ಯಾರು ಕೂಡ ನಂಬರ್ ಕೂಡ ಕೊಡ್ತಿಲ್ಲ. ನಮಗೆ ಆಗಿರೋ ಮೋಸವನ್ನು ನಿರ್ಮಾಪಕಿಗೆ ತಿಳಿಸಿ ನಮಗೆ ಆಗಿರೋ ಅನ್ಯಾಯಕ್ಕೆ ನ್ಯಾಯ ಸಿಗ್ಬೇಕು ಅನ್ನೋದೇ ನಾನು ಈ ವಿಡಿಯೋ ಮಾಡಿರೋ ಉದ್ದೇಶ ಅಷ್ಟೇ ಎಂದು ಮಹೇಶ್‌ ಹೇಳಿದ್ದಾರೆ.

55
ಪುಷ್ಪ ನಿರ್ಮಾಣದ ಮೊದಲ ಸಿನಿಮಾ
Image Credit : Asianet News

ಪುಷ್ಪ ನಿರ್ಮಾಣದ ಮೊದಲ ಸಿನಿಮಾ

ಆಗಸ್ಟ್ 1 ರಂದು ಕೊತ್ತಲವಾಡಿ ಸಿನಿಮಾ ಬಿಡುಗಡೆ ಆಗಿತ್ತು. ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಅವ್ರ ಪಿಎ ಪ್ರೊಡಕ್ಷನ್ನಲ್ಲಿ ಸಿನಿಮಾ ಮೂಡಿ ಬಂದಿತ್ತು. ಶ್ರೀರಾಜ್ ನಿರ್ದೇಶನದ ಸಿನಿಮಾ ಇದಾಗಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಸಿನಿಮಾ
ಸ್ಯಾಂಡಲ್ವುಡ್ ಫಿಲ್ಮ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved