MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಅಪ್ಪುಗೆ ಕರ್ನಾಟಕ ರತ್ನ; ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಅದ್ದೂರಿ ಸ್ವಾಗತ

ಅಪ್ಪುಗೆ ಕರ್ನಾಟಕ ರತ್ನ; ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಅದ್ದೂರಿ ಸ್ವಾಗತ

ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ  ರಜನಿಕಾಂತ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ.  

1 Min read
Shruiti G Krishna
Published : Nov 01 2022, 01:45 PM IST
Share this Photo Gallery
  • FB
  • TW
  • Linkdin
  • Whatsapp
17

ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಇಂದು (ನವೆಂಬರ್ 1) ಸಂಜೆ 4 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ  ಸಮಾರಂಭ  ನಡೆಯುತ್ತಿದೆ.

27

ಈ ಸಮಾರಂಭದಲ್ಲಿ ಸಾಕಷ್ಟು ಗಣ್ಯರು ಹಾಜರಿರುತ್ತಾರೆ. ರಾಜಕೀಯ ಮತ್ತು ಸಿನಿಮಾ ಗಣ್ಯರು ಅಪ್ಪುಗೆ ಕರ್ನಾಟಕ ರತ್ನ ಪ್ರದಾನಕ್ಕೆ ಸಾಕ್ಷಿಯಾಗುತ್ತಿದ್ದಾರೆ. ವಿಶೇಷ ಎಂದರೆ ಈ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗು ಸ್ಟಾರ್ ಜೂ.ಎನ್ ಟಿ ಆರ್ ವಿಶೇಷ ಅತಿಥಿಗಲಾಗಿದ್ದಾರೆ. 

37

ಅಂದಹಾಗೆ ಸೂಪರ್ ಸ್ಟಾರ್ ರಜನಿಕಾಂತ್ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ. 

47

ತಲೈವಾರನ್ನು ಆರೋಗ್ಯ ಸಚಿವ ಸುಧಾಕರ್, ಮುನಿರತ್ನ ಸೇರಿದಂತೆ ಅನೇಕರು ಅದ್ದೂರಿಯಾಗಿ ಬರಮಾಡಿಕೊಂಡರು. ಹೂ ಗುಚ್ಛ ನೀಡಿ ಸ್ವಾಗತಿಸಿದ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 

57

ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಸ್ವೀಕರಿಸಲಿದ್ದಾರೆ. ಈ ಸಮಯದಲ್ಲಿ ಇಡೀ ರಾಜ್ ಕುಟುಂಬ ಹಾಜರಿರಲಿದೆ. 

67

ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗ ಪ್ರಶಸ್ತಿ ಸಮಾರಂಭ ನಡೆಯುತ್ತಿದೆ. ಬಳಿಕ 5.30ರಿಂದ 6.30ರವರೆಗೆ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.

77

ಇಂದು ಸಂಜೆ 4 ಗಂಟೆಗೆ ತೆಲುಗು ಸ್ಟಾರ್ ಜೂ ಎನ್ ಟಿ ಆರ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರಜನಿಕಾಂತ್, ಜೂ.ಎನ್‌ಟಿಆರ್ ಮತ್ತು ಸುಧಾ ಮೂರ್ತಿ ಈ ವಿಶೇಷ ಕ್ಷಣಕ್ಕೆ ವಿಶೇಷ ಅತಿಥಿಗಳಾಗಿ ಸಾಕ್ಷಿಯಾಗುತ್ತಿದ್ದಾರೆ. 
 

About the Author

SG
Shruiti G Krishna
ರಜನೀಕಾಂತ್
ಪುನೀತ್ ರಾಜ್‌ಕುಮಾರ್
ಸ್ಯಾಂಡಲ್‌ವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved