MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಬಿಬಿಎಂಪಿಯಲ್ಲಿ ಕೈ-ಕೈ ಹಿಡಿದುಕೊಂಡು ಕುಣಿದಾಡಿದ ಮಾಲಾಶ್ರೀ-ರವಿಚಂದ್ರನ್ ಜೋಡಿ!

ಬಿಬಿಎಂಪಿಯಲ್ಲಿ ಕೈ-ಕೈ ಹಿಡಿದುಕೊಂಡು ಕುಣಿದಾಡಿದ ಮಾಲಾಶ್ರೀ-ರವಿಚಂದ್ರನ್ ಜೋಡಿ!

ಬೆಂಗಳೂರು (ಮಾ.07): ರಾಮಾಚಾರಿ ಸಿನಿಮಾದ ಮೂಲಕ ಎಲ್ಲರ ಮನೆಮಾತಾದ ಜೋಡಿ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಮಾಲಾಶ್ರೀ ಜೋಡಿ. ಸುಧೀರ್ಘ 30 ವರ್ಷಗಳ ಬಳಿಕ ರವಿಚಂದ್ರನ್ ಮತ್ತು ಮಾಲಾಶ್ರೀ ಬಿಬಿಎಂಪಿಯಲ್ಲಿ ಕಾಣಿಸಿಕೊಂಡಿದ್ದು, ಕೈ-ಕೈ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. 

2 Min read
Sathish Kumar KH
Published : Mar 07 2024, 03:39 PM IST
Share this Photo Gallery
  • FB
  • TW
  • Linkdin
  • Whatsapp
18

ಸುಮಾರು 30 ವರ್ಷಗಳ ಹಿಂದೆ ರಾಮಾಚಾರಿ ಸಿನಿಮಾದಲ್ಲಿ 'ಆಕಾಶದಾಗೆ ಯಾರೋ ಮಾಯಗಾರನು ಚಿತ್ತಾರ ಮಾಡಿ ಹೋಗೋನೇ..., ಈ ಭೂಮಿ ಮ್ಯಾಗೆ ಯಾರೋ ತೋಟಗಾರನು ಮಲೆನಾಡ ಮಾಡಿ ಹೋಗೊನೇ...' ಎಂದು ಹಾಡಿ ಕುಣಿದವರು ಮತ್ತೆ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್ ಕುಮಾರ್ ಸಭಾಂಗಣದಲ್ಲಿ ಹಾಡಿ ಕುಣಿದಿದ್ದಾರೆ.
 

28

ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರವಿಚಂದ್ರನ್ ಮತ್ತು ಮಾಲಾಶ್ರೀ ಇಬ್ಬರೂ ಒಟ್ಟಿಗೆ ವೇದಿಕೆಯನ್ನು ಹಂಚಿಕೊಂಡಿದ್ದಾರೆ.
 

38

ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ ರವಿಚಂದ್ರನ್ ಅವರು, ಪ್ರೇಮಲೋಕ ಭಾಗ-2 ಶೀಘ್ರದಲ್ಲಿ ಆರಂಭವಾಗಲಿದೆ. ನಾನು ಚಿತ್ರರಂಗದಲ್ಲಿ ಬೆಳೆಯಲು ಡಾ.ರಾಜ್ ಕುಮಾರ್, ಅಂಬರೀಷ್, ಶಿವಣ್ಣ, ಪುನೀತ್ ರಾಜ್ ಕುಮಾರ್ ಒಡನಾಟ ಅತ್ಯಂತ ಸಹಕಾರಿಯಾಗಿದೆ ಎಂದರು.
 

48

ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಮಾಡುವ 'ದಿಟ್ಟ ಮಹಿಳಾ ಪ್ರಶಸ್ತಿ' ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳೆಯರಿಗೆ ಒಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಿದರು.
 

58

ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೆ ಸಾಧನೆ ಮಾಡುತ್ತಾರೆ. ಮಹಿಳೆಯರು ಸಮಾಜದ ಕಣ್ಣು ಮತ್ತು ಮಹಿಳೆಯರಿಗೆ ಗೌರವ ಕೊಟ್ಟರೆ ದೇವರೆ ಒಲಿಯುತ್ತಾನೆ ಎಂದು ನಟಿ ಮಾಲಾಶ್ರೀ ಹೇಳಿದರು.
 

68

ಇನ್ನು ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರವಿಚಂದ್ರನ್ ಅವರು 'ಹೆಣ್ಣು ಸ್ಪೂರ್ತಿ ಅವಳು ಇಲ್ಲದೇ ಹೋದರೆ ಜೀವನ ವ್ಯರ್ಥ. ಹೆಣ್ಣು ಇಲ್ಲವೆಂದರೆ ಸಮಾಜದಲ್ಲಿ ಏನು ಇಲ್ಲ, ಪುರುಷರಗಿಂತ ಮಹಿಳೆಯರೇ ಹೆಚ್ಚು ಶಕ್ತಿಶಾಲಿಗಳು' ಎಂದು ಹೇಳಿದರು.

78

ನಾವು ಎಷ್ಟೆ ಡೊಡ್ಡವರಾದರು, ತಾಯಿಗೆ ನಮ್ಮ ಚಿಕ್ಕ ಮಕ್ಕಳಾಗಿ ಇರುತ್ತೇವೆ. ನಾನು ಮನೆಯಿಂದ ಹೊರಗೆ ಹೋಗುವಾಗ ಹೆಂಡತಿ ಅಥವಾ ಮಗಳ ಮುಖ ನೋಡಿಕೊಂಡೇ ಹೊರಡುತ್ತೇನೆ. ಆದರೆ, ಮಹಿಳೆಯರು ಕಷ್ಟ, ಆಳು ದುಖಃ ಹಂಚಿಕೊಳ್ಳುವುದಿಲ್ಲ. ನಗುವು ಮೂಲಕ ಎಲ್ಲರ ಮನಸ್ಸನ ಗೆಲ್ಲುತ್ತಾರೆ ಎಂದು ರವಿಚಂದ್ರನ್ ಹೇಳಿದರು.
 

88

ಈ ವೇದಿಕೆಯಲ್ಲಿ ನಟಿ ವಿನಯಪ್ರಸಾದ್, ಖ್ಯಾತ ಹಿನ್ನಲೆ ಗಾಯಕಿ ಎಂ.ಡಿ.ಪಲ್ಲವಿ, ಯುನೈಟೆಡ್ ಆಸ್ಪತ್ರೆ ನಿರ್ದೇಶಕಿ ಡಾ.ವೀಣಾ ಸಿದ್ದಾರೆಡ್ಡಿ, ಸಹಾಯಕ ಪೊಲೀಸ್ ಆಯುಕ್ತೆ ಎಂ.ಸಿ.ಕವಿತಾ, ನಿರ್ದೇಶಕಿ ಶೀತಲ್ ಶೆಟ್ಟಿ, ಹಿರಿಯ ವಕೀಲೆ ಶೀದೇವಿ ಪಾಟೀಲ್, ಟಿವಿ-9 ನಿರೂಪಕಿ ಶುಭಶ್ರೀ ಜೈನ್, ಹಿರಿಯ ಪತ್ರಕರ್ತೆ ಮಮತಾ ಮಾರ್ದಾಳ್ ಮತ್ತಿತರರಿಗೆ ದಿಟ್ಟ ಮಹಿಳಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
 

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬಿಬಿಎಂಪಿ
ರವಿಚಂದ್ರನ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved