MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟಿ ಪ್ರಣಿತಾ ಸುಭಾಷ್‌: ಯಾಕೆ ಗೊತ್ತಾ?

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನಟಿ ಪ್ರಣಿತಾ ಸುಭಾಷ್‌: ಯಾಕೆ ಗೊತ್ತಾ?

ದರ್ಶನ್‌ ಅಭಿನಯದ 'ಪೊರ್ಕಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಪ್ರವೇಶಿಸಿದ ನಟಿ ಪ್ರಣಿತಾ ಸುಭಾಷ್‌ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮಧ್ಯೆ ತಮ್ಮ ಮಗನ ನಾಮಕರಣ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

1 Min read
Govindaraj S
Published : Apr 20 2025, 11:13 PM IST| Updated : Apr 20 2025, 11:14 PM IST
Share this Photo Gallery
  • FB
  • TW
  • Linkdin
  • Whatsapp
15

ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಸದ್ಯ ನಟನೆಗೆ ಬ್ರೇಕ್‌ ಕೊಟ್ಟು ಇಬ್ಬರು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ನಟಿಸದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
 

25

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರಣಿತಾ ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೇಕೆ? ಎಂಬ ಮಾತು ಬರುತ್ತದೆ.

35

ಪ್ರಣಿತಾ ಅವರು ಮಗನ ನಾಮಕರಣ ಹಿನ್ನೆಲೆಯಲ್ಲಿ ಅವರು ಖುದ್ದಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದ್ದಾರೆ. ಈ ವೇಳೆ ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಅವರ ಆರೋಗ್ಯವನ್ನೂ ನಟಿ ವಿಚಾರಿಸಿದ್ದಾರೆ.
 

45

ಪ್ರಣಿತಾ 2021ರಲ್ಲಿ ಮದುವೆಯಾದರು. ನಿತಿನ್‌ ರಾಜು ಎಂಬವರನ್ನು ವರಿಸಿದ ಪ್ರಣಿತಾ ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ. 2022ರ ಜೂನ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಣಿತಾ-ನಿತಿನ್‌ ದಂಪತಿಗೆ ಗಂಡು ಮಗು ಜನಿಸಿತ್ತು.
 

55

2 ಮಕ್ಕಳ ತಾಯಿಯಾದರೂ ಪ್ರಣಿತಾ ಫಿಟ್‌ನೆಸ್‌ ಕಾಯ್ದುಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಸಂತೂರ್‌ ಮಮ್ಮಿ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಅವರು ಫ್ರಾನ್ಸ್‌ನಲ್ಲಿ ನಡೆದ ಜಗತ್ತಿನ ಪ್ರತಿಷ್ಠಿತ ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಭಾಗಿಯಾಗಿದ್ದರು. 

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್‌ವುಡ್
ನಟಿ
ಕನ್ನಡ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved