MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಹಳೆಯ ಹಾಡುಗಳ ಮೂಲಕ ನೆನಪು ಹಂಚುತ್ತೇವೆ: ಅನಂತ್‌ ನಾಗ್ ಸಂಗೀತ ಯಾನ

ಹಳೆಯ ಹಾಡುಗಳ ಮೂಲಕ ನೆನಪು ಹಂಚುತ್ತೇವೆ: ಅನಂತ್‌ ನಾಗ್ ಸಂಗೀತ ಯಾನ

ಅನಂತ್‌ ನಾಗ್ 77ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಾನಾ ಕಡೆಯಿಂದ ಶುಭ ಹಾರೈಕೆಯ ಫೋನ್‌ಗಳು ಬಂದಿವೆ. ಅವರೆಲ್ಲರೂ ಪ್ರೀತಿಯಿಂದ ನಮ್ಮ ಊರಿಗೊಮ್ಮೆ ಬನ್ನಿ ಅಂತ ಕರೆಯುತ್ತಾರೆ.

1 Min read
Govindaraj S
Published : Sep 05 2025, 02:00 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Social Media

ನಿನ್ನೆಯಷ್ಟೇ 77ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಅನಂತ್‌ ನಾಗ್ ಹೊಸ ಹುರುಪಿನಲ್ಲಿದ್ದಾರೆ. ತಮಗೆ ಅಪಾರ ಪ್ರೀತಿ ತೋರಿಸುತ್ತಿರುವ ಜನರ ಬಳಿಗೆ ಹೋಗಲು ನಿರ್ಧಾರ ಮಾಡಿದ್ದಾರೆ. ಆ ಯೋಚನೆಯ ಫಲವೇ ಅನಂತನಾಗ್‌ ಸಂಗೀತ ಯಾನ ಯೋಚನೆ.

26
Image Credit : Social Media

ಅನಂತನಾಗ್‌ ಅವರಿಗೆ ಪದ್ಮಭೂಷಣ ಪ್ರಶಸ್ತಿ ಬಂದ ಸಂದರ್ಭದಲ್ಲಿ ಕನ್ನಡಪ್ರಭ ಮತ್ತು ಸುವರ್ಣನ್ಯೂಸ್‌ ಅನಂತನಾಗ್‌ ಅವರ ಜೊತೆ ಸಂಗೀತ ಸಂಜೆ ಆಯೋಜಿಸಿತ್ತು. ಅದರ ಯಶಸ್ಸಿನಿಂದ ದೊರೆತ ಸ್ಫೂರ್ತಿಯಿಂದ ಅನಂತನಾಗ್‌ ಈಗ ಬೇರೆ ಬೇರೆ ಊರುಗಳಿಗೆ ಹೋಗಿ ಸಂಗೀತದ ಮೂಲಕ ಪ್ರೀತಿ ಹಂಚುವ ನಿರ್ಧಾರ ಮಾಡಿದ್ದಾರೆ.

Related Articles

Related image1
ಶಂಕರ್‌ ನಾಗ್ ಸಾವು ಪೂರ್ವ ನಿರ್ಧಾರಿತ, ಅವ್ರು ಮುನ್ಸೂಚನೆ ಕೊಟ್ಟಿದ್ದರು: ಅನಂತ್‌ ನಾಗ್!
Related image2
ಇದು ಎಂಥ ಲೋಕವಯ್ಯಾ ಅಂತಿರೋ ಅನಂತ್‌ ನಾಗ್: ಹಿರಿಯ ನಟ ಮತ್ತೇನ್ ಅಂದ್ರು ನೋಡಿ!
36
Image Credit : Social Media

ಈ ಯೋಜನೆ ಇನ್ನೂ ಯೋಚನೆಯ ಹಂತದಲ್ಲಿದ್ದು, ಮೊದಲ ಕಾರ್ಯಕ್ರಮ ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ನಡೆಯಲಿದೆ. ರಾಮಚಂದ್ರ ಹಡಪದ ತಂಡ ಇದನ್ನು ಆಯೋಜಿಸಿದೆ.

46
Image Credit : Social Media

ಈ ಕುರಿತು ಅನಂತನಾಗ್‌ ಅವರು, 77ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಾನಾ ಕಡೆಯಿಂದ ಶುಭ ಹಾರೈಕೆಯ ಫೋನ್‌ಗಳು ಬಂದಿವೆ. ಅವರೆಲ್ಲರೂ ಪ್ರೀತಿಯಿಂದ ನಮ್ಮ ಊರಿಗೊಮ್ಮೆ ಬನ್ನಿ ಅಂತ ಕರೆಯುತ್ತಾರೆ.

56
Image Credit : Social Media

ಅವರೆಲ್ಲರ ಹಂಬಲದಂತೆ ಒಂದು ವಿವಾದವಿಲ್ಲದ, ಪ್ರೀತಿ ಹಂಚುವ ಕಾರ್ಯಕ್ರಮ ಮಾಡುವ ಆಸೆ ನಮ್ಮದು. ಎಲ್ಲಾ ಕಡೆ ಹೋಗಿ ಹಳೆಯ ಹಾಡುಗಳ ಕಾರ್ಯಕ್ರಮ ಮಾಡಲಿದ್ದೇವೆ. ಹೊಸ ಪೀಳಿಗೆಗೆ ಹಳೆಯ ಹಾಡಿನ ರುಚಿ ಹತ್ತಿಸುವ ಆಸೆ ಇದೆ. ಜೊತೆಗೆ ಹಾಡುಗಳ ಮೂಲಕವೇ ಹಳೆಯ ನೆನಪುಗಳನ್ನು ಹಂಚಲಿದ್ದೇವೆ.

66
Image Credit : Social Media

ಆ ಕಾಲದ ಸಂಗೀತ ನಿರ್ದೇಶಕರು, ಸಾಹಿತಿಗಳು ಎಲ್ಲರನ್ನೂ ಸಂಭ್ರಮಿಸಲಿದ್ದೇವೆ. ನಕರಾತ್ಮಕತೆ ಎಲ್ಲಾ ಕಡೆ ಹರಡಿರುವ ಈ ಕಾಲದಲ್ಲಿ ಸಕರಾತ್ಮಕತೆ ಹಂಚುವ ಪ್ರಯತ್ನ ಇದು ಎನ್ನುತ್ತಾರೆ. ಸದ್ಯ ಈ ಯೋಜನೆಯ ರೂಪುರೇಷೆಗಳು ತಯಾರಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೊಂದು ಸ್ಪಷ್ಟರೂಪ ದೊರೆಯಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಅನಂತ್ ನಾಗ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved