ಹಳೆಯ ಹಾಡುಗಳ ಮೂಲಕ ನೆನಪು ಹಂಚುತ್ತೇವೆ: ಅನಂತ್ ನಾಗ್ ಸಂಗೀತ ಯಾನ
ಅನಂತ್ ನಾಗ್ 77ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಾನಾ ಕಡೆಯಿಂದ ಶುಭ ಹಾರೈಕೆಯ ಫೋನ್ಗಳು ಬಂದಿವೆ. ಅವರೆಲ್ಲರೂ ಪ್ರೀತಿಯಿಂದ ನಮ್ಮ ಊರಿಗೊಮ್ಮೆ ಬನ್ನಿ ಅಂತ ಕರೆಯುತ್ತಾರೆ.

ನಿನ್ನೆಯಷ್ಟೇ 77ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಅನಂತ್ ನಾಗ್ ಹೊಸ ಹುರುಪಿನಲ್ಲಿದ್ದಾರೆ. ತಮಗೆ ಅಪಾರ ಪ್ರೀತಿ ತೋರಿಸುತ್ತಿರುವ ಜನರ ಬಳಿಗೆ ಹೋಗಲು ನಿರ್ಧಾರ ಮಾಡಿದ್ದಾರೆ. ಆ ಯೋಚನೆಯ ಫಲವೇ ಅನಂತನಾಗ್ ಸಂಗೀತ ಯಾನ ಯೋಚನೆ.
ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಬಂದ ಸಂದರ್ಭದಲ್ಲಿ ಕನ್ನಡಪ್ರಭ ಮತ್ತು ಸುವರ್ಣನ್ಯೂಸ್ ಅನಂತನಾಗ್ ಅವರ ಜೊತೆ ಸಂಗೀತ ಸಂಜೆ ಆಯೋಜಿಸಿತ್ತು. ಅದರ ಯಶಸ್ಸಿನಿಂದ ದೊರೆತ ಸ್ಫೂರ್ತಿಯಿಂದ ಅನಂತನಾಗ್ ಈಗ ಬೇರೆ ಬೇರೆ ಊರುಗಳಿಗೆ ಹೋಗಿ ಸಂಗೀತದ ಮೂಲಕ ಪ್ರೀತಿ ಹಂಚುವ ನಿರ್ಧಾರ ಮಾಡಿದ್ದಾರೆ.
ಈ ಯೋಜನೆ ಇನ್ನೂ ಯೋಚನೆಯ ಹಂತದಲ್ಲಿದ್ದು, ಮೊದಲ ಕಾರ್ಯಕ್ರಮ ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ನಡೆಯಲಿದೆ. ರಾಮಚಂದ್ರ ಹಡಪದ ತಂಡ ಇದನ್ನು ಆಯೋಜಿಸಿದೆ.
ಈ ಕುರಿತು ಅನಂತನಾಗ್ ಅವರು, 77ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಾನಾ ಕಡೆಯಿಂದ ಶುಭ ಹಾರೈಕೆಯ ಫೋನ್ಗಳು ಬಂದಿವೆ. ಅವರೆಲ್ಲರೂ ಪ್ರೀತಿಯಿಂದ ನಮ್ಮ ಊರಿಗೊಮ್ಮೆ ಬನ್ನಿ ಅಂತ ಕರೆಯುತ್ತಾರೆ.
ಅವರೆಲ್ಲರ ಹಂಬಲದಂತೆ ಒಂದು ವಿವಾದವಿಲ್ಲದ, ಪ್ರೀತಿ ಹಂಚುವ ಕಾರ್ಯಕ್ರಮ ಮಾಡುವ ಆಸೆ ನಮ್ಮದು. ಎಲ್ಲಾ ಕಡೆ ಹೋಗಿ ಹಳೆಯ ಹಾಡುಗಳ ಕಾರ್ಯಕ್ರಮ ಮಾಡಲಿದ್ದೇವೆ. ಹೊಸ ಪೀಳಿಗೆಗೆ ಹಳೆಯ ಹಾಡಿನ ರುಚಿ ಹತ್ತಿಸುವ ಆಸೆ ಇದೆ. ಜೊತೆಗೆ ಹಾಡುಗಳ ಮೂಲಕವೇ ಹಳೆಯ ನೆನಪುಗಳನ್ನು ಹಂಚಲಿದ್ದೇವೆ.
ಆ ಕಾಲದ ಸಂಗೀತ ನಿರ್ದೇಶಕರು, ಸಾಹಿತಿಗಳು ಎಲ್ಲರನ್ನೂ ಸಂಭ್ರಮಿಸಲಿದ್ದೇವೆ. ನಕರಾತ್ಮಕತೆ ಎಲ್ಲಾ ಕಡೆ ಹರಡಿರುವ ಈ ಕಾಲದಲ್ಲಿ ಸಕರಾತ್ಮಕತೆ ಹಂಚುವ ಪ್ರಯತ್ನ ಇದು ಎನ್ನುತ್ತಾರೆ. ಸದ್ಯ ಈ ಯೋಜನೆಯ ರೂಪುರೇಷೆಗಳು ತಯಾರಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೊಂದು ಸ್ಪಷ್ಟರೂಪ ದೊರೆಯಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

