MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಡೆವಿಲ್ ಸಿನಿಮಾದ ನಾಯಕ ದರ್ಶನ್, ಖಳನಾಯಕ ವಿನಯ್ ಗೌಡಗೆ ರಿಯಲ್ ಡೆವಿಲ್ ಆದ ಎಸಿಪಿ ಚಂದನ್!

ಡೆವಿಲ್ ಸಿನಿಮಾದ ನಾಯಕ ದರ್ಶನ್, ಖಳನಾಯಕ ವಿನಯ್ ಗೌಡಗೆ ರಿಯಲ್ ಡೆವಿಲ್ ಆದ ಎಸಿಪಿ ಚಂದನ್!

ಡೆವಿಲ್ ಸಿನಿಮಾದ ರೀಲ್ ನಟರಾದ ನಾಯಕ ದರ್ಶನ್ ತೂಗುದೀಪ ಮತ್ತು ಖಳನಾಯಕ ವಿನಯ್ ಗೌಡ ಅವರಿಗೆ ಎಸಿಪಿ ಚಂದನ್ ಅವರು ನಿಜ ಜೀವನದಲ್ಲಿ ಡೆವಿಲ್ ಆಗಿದ್ದಾರೆ. ಕೊಲೆ ಕೇಸಿನಲ್ಲಿ ದರ್ಶನ್‌ನನ್ನು ಬಂಧಿಸಿ, ನಂತರ ವಿನಯ್ ಗೌಡ ಅವರನ್ನು ಮಾರಕಾಸ್ತ್ರ ರೀಲ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

2 Min read
Sathish Kumar KH
Published : Mar 25 2025, 02:26 PM IST| Updated : Mar 25 2025, 02:29 PM IST
Share this Photo Gallery
  • FB
  • TW
  • Linkdin
  • Whatsapp
16

ಡೆವಿಲ್ ಸಿನಿಮಾದ ರೀಲ್ ನಾಯಕನಾದ ದರ್ಶನ್ ತೂಗುದೀಪ ಹಾಗೂ ಇದೇ ಸಿನಿಮಾದ ಖಳನಾಯಕನಾಗಿರುವ ಬಿಗ್ ಬಾಸ್ ಖ್ಯಾತಿಯ ನಟ ವಿನಯ್ ಗೌಡ ಅವರಿಗೆ ನಿಜ ಜೀವನದಲ್ಲಿ ಬೆಂಗಳೂರು ನಗರದ ಎಸಿಪಿ ಚಂದನ್ ಅವರು ರಿಯಲ್ ಡೆವಿಲ್ ಆಗಿದ್ದಾರೆ.

26

ಡೆವಿಲ್ ಸಿನಿಮಾದ ಚಿತ್ರೀಕರಣದ ವೇಳೆ ಈ ಸಿನಿಮಾದ ನಾಯಕ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಎಸಿಪಿ ಚಂದನ್ ಅವರು ಮೈಸೂರಿಗೆ ಹೋಗಿ ಹೋಟೆಲ್‌ನಲ್ಲಿ ಜಿಮ್ ಮಾಡುತ್ತಿದ್ದ ನಟ ದರ್ಶನ್‌ನನ್ನು ಬಂಧಿಸಿ ಪೊಲೀಸ್ ಠಾಣೆಗೆ ಎತ್ತಾಕಿಕೊಂಡು ಬಂದಿದ್ದರು.

36

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಪ್ರಮುಖ ಆರೋಪಿ ಎಂಬುದು ಸಾಬೀತಾಗುತ್ತಿದ್ದಂತೆ ದರ್ಶನ್‌ನನ್ನು ವಿಚಾರಣೆ ಮಾಡಿ, ಹಲವು ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರ್ ಕೂಡ ಮಾಡಿಸಿದ್ದರು. ಇದಾದ ನಂತರ ದರ್ಶನ್ ತೂಗುದೀಪ ಹಲವು ತಿಂಗಳ ಕಾಲ ಜೈಲು ಪಾಲಾಗಿದ್ದು, ಇದೀಗ ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಾಗಿ, ಡೆವಿಲ್ ಸಿನಿಮಾದ ನಾಯಕ ದರ್ಶನ್‌ಗೆ ನಿಜ ಜೀವನದಲ್ಲಿ ಎಸಿಪಿ ಚಂದನ್ ಡೆವಿಲ್ ಆಗಿ ಕಾಡಿದ್ದರು ಎಂದರೂ ತಪ್ಪಾಗಲಾರದು.

46

ಇದೀಗ ಇದೇ ಡೆವಿಲ್ ಸಿನಿಮಾದ ಖಳನಾಯಕನಾಗಿರುವ ವಿನಯ್‌ ಗೌಡ ಅವರನ್ನೂ ಎಸಿಪಿ ಚಂದನ್ ಅವರೇ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ರಜತ್ ಕಿಶನ್ ಜೊತೆಗೆ ಸೇರಿಕೊಂಡು ದರ್ಶನ್ ನಟನೆಯ ಕಾಟೇರ ಸಿನಿಮಾದ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು.

ಆದರೆ, ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದರಿಂದ ಅವರ ಮೇಲೆ ಎಫ್‌ಐಆರ್ ದಾಖಲಿಸಿ ವಿಚಾರಣೆಗೆ ಕರೆಸಲಾಗಿತ್ತು. ಎಸಿಪಿ ಚಂದನ್ ಅವರು ವಿಚಾರಣೆ ಮಾಡುವ ವೇಳೆ ಅದು ಪ್ಲಾಸ್ಟಿಕ್ ಮಚ್ಚು ಎಂದಿದ್ದರಿಂದ ವಿನಯ್ ಹಾಗೂ ರಜತ್‌ನಲ್ಲಿ ಬಂಧಿಸಿ ಸೆಲ್‌ನಲ್ಲಿ ಇಡಲಾಗಿತ್ತು.

56

ಇದಾದ ನಂತರ ರೀಲ್ಸ್ ಮಾಡಿದ ಮಚ್ಚು ತಂದು ಒಪ್ಪಿಸುವಂತೆ ಸೂಚನೆ ನೀಡಲಾಗಿತ್ತು. ರಾತ್ರಿ ವೇಳೆ ರೀಲ್ಸ್ ಮಾಡಿದ ಮಚ್ಚು ಎಂದು ಒಂದು ಪ್ಲಾಸ್ಟಿಕ್ ಮಚ್ಚನ್ನು ತಂದುಕೊಟ್ಟು ವಿನಯ್ ಗೌಡ ಹಾಗೂ ರಜತ್ ಕಿಶನ್ ಪೊಲೀಸರ ಬಂಧನದಿಂದ ಬಿಡುಗಡೆ ಆಗಿ ಮನೆಗೆ ಹೋಗಿದ್ದರು.

66

ಇದೀಗ ರೀಲ್ಸ್ ಮಾಡಿದ ಮಚ್ಚು ಹಾಗೂ ಅವರು ಒಪ್ಪಿಸಿದ ಮಚ್ಚು ಎರಡಕ್ಕೂ ತಾಳೆಯಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಇದೀಗ ಪುನಃ ಪೊಲೀಸರು ಈ ಇಬ್ಬರ ಮೇಲೆ ಸಾಕ್ಷ್ಯ ನಾಶದ ಕೇಸ್ ದಾಖಲಿಸಿ ವಿಚಾರಣೆಗೆ ಕರೆದು ಮತ್ತೆ ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ. ವಿಚಾರಣೆಗೆ ಹೋಗುವುದಾಗಿ ಮನೆಯಿಂದ ಹೊರಟ ರಜತ್ ಕಿಶನ್ ಪೊಲೀಸ್ ಠಾಣೆಗೆ ಹೋಗದೇ ಫೀನ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಸ್ಯಾಂಡಲ್‌ವುಡ್
ದರ್ಶನ್ ತೂಗುದೀಪ
ಕ್ರೈಮ್ ನ್ಯೂಸ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved