ಕೊರಗಜ್ಜನ ಆಶೀರ್ವಾದ ಪಡೆದ ದರ್ಶನ್, ಜತೆಗೆ ಯಾರಿದ್ದರು?
ಮಂಗಳೂರು(ಸೆ. 27) ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ.
ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದ ದಾಸ ಕೊರಗಜ್ಜನ ಗುಡಿಗೆ ತೆರಳಿ ಆಶೀರ್ವಾದ ಪಡೆದುಕೊಂಡರುವ ಪೋಟೋ ವೈರಲ್ ಆಗುತ್ತಿದೆ.
ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ವೈರಲ್ ಆಗುತ್ತಿವೆ.
ಕೊರೋನಾ ಕಾರಣಕ್ಕೆ ಶೂಟಿಂಗ್ ಬಂದ್ ಆಗಿದ್ದರಿಂದ ಸೆಲೆಬ್ರಿಟಿಗಳು ಸಾಮಾಜಿಕ ಕೆಲಸದಲ್ಲಿಯೂ ನಿರತರಾಗಿದ್ದರು.
ನೆಚ್ಚಿನ ಸಾಕುಪ್ರಾಣಿಗಳೊಂದಿಗೂ ಚಾಲೆಂಜಿಂಗ್ ಸ್ಟಾರ್ ಹೆಚ್ಚಿನ ಸಮಯ ಕಳೆದಿದ್ದರು.
ಧಾರವಾಡದ ವಿನಯ್ ಕುಲಕರ್ಣಿ ಅವರ ಫಾರ್ಮ್ ಹೌಸ್ ಗೆ ಭೇಟಿ ನೀಡಿದ್ದರು.
ದಾವಣಗೆರೆ ಎಸ್ಎಸ್ ಮಲ್ಲಿಕಾರ್ಜುನ್ ಅವರ ಬಳಿಯಿಂದ ಎರಡು ಕುದುರೆ ಮರಿಗಳನ್ನು ಪಡೆದುಕೊಂಡಿದ್ದರು. ಅಭಿಮಾನಿಗಳು ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರೀಕ್ಷೆಯಲ್ಲಿ ಇದ್ದಾರೆ.