MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • 'ಅಪ್ಪನ ಬರ್ತಡೇ ಇವತ್ತು, ಪೂಜೆ ಮಾಡು' ಎಂದು ತಂಗಿಗೆ ಸೂಚಿಸಿದ ರಾಯನ್​: ಚಿರು ಸರ್ಜಾ ಕಂದನ ಮುದ್ದು ಮಾತಿಗೆ ಫ್ಯಾನ್ಸ್​ ಭಾವುಕ

'ಅಪ್ಪನ ಬರ್ತಡೇ ಇವತ್ತು, ಪೂಜೆ ಮಾಡು' ಎಂದು ತಂಗಿಗೆ ಸೂಚಿಸಿದ ರಾಯನ್​: ಚಿರು ಸರ್ಜಾ ಕಂದನ ಮುದ್ದು ಮಾತಿಗೆ ಫ್ಯಾನ್ಸ್​ ಭಾವುಕ

ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದಂದು, ಪತ್ನಿ ಮೇಘನಾ ರಾಜ್ ಮತ್ತು ಪುತ್ರ ರಾಯನ್ ರಾಜ್ ಸರ್ಜಾ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ಅಪ್ಪನ ಕುರಿತು ರಾಯನ್ ಆಡಿದ ಮುದ್ದು ಮಾತುಗಳು ಎಲ್ಲರನ್ನೂ ಭಾವುಕರನ್ನಾಗಿಸಿದೆ.

2 Min read
Suchethana D
Published : Oct 18 2025, 04:09 PM IST
Share this Photo Gallery
  • FB
  • TW
  • Linkdin
  • Whatsapp
17
ಚಿರಂಜೀವ ಸರ್ಜಾ ಹುಟ್ಟುಹಬ್ಬ
Image Credit : our own

ಚಿರಂಜೀವ ಸರ್ಜಾ ಹುಟ್ಟುಹಬ್ಬ

ಯುವ ಸಾಮ್ರಾಟ್ ಎಂದೇ ಫೇಮಸ್​ ಆಗಿದ್ದ ಚಿರಂಜೀವಿ ಸರ್ಜಾ ಚಿರಂಜೀವಿ ಸರ್ಜಾ ಅವರು ಎಲ್ಲರನ್ನೂ ಅಗಲಿ ಐದು ವರ್ಷಗಳೇ ಕಳೆದಿವೆ. 2020ರ ಜೂನ್​ 7ರಂದು ಹೃದಯಾಘಾತದಿಂದ ಅಗಲಿದಾಗ ಇಡೀ ಚಿತ್ರರಂಗ ಶಾಕ್​ ಆಗಿತ್ತು. ನಿನ್ನೆ ಅಂದರೆ ಅಕ್ಟೋಬರ್ 17 ಅವರ ಹುಟ್ಟುಹಬ್ಬ. ಅವರು ಬದುಕಿದ್ದರೆ, 41ನೇ ಹುಟ್ಟುಹಬ್ಬವಾಗಿರುತ್ತಿತ್ತು. ಅವರು ಬದುಕಿದ್ದಾಗ ಮನೆ ಮುಂದೆ ಅಭಿಮಾನಿಗಳೊಂದಿಗೆ ಬರ್ತ್‌ಡೇಯನ್ನು ಜೋರಾಗಿಯೇ ಆಚರಿಸಿಕೊಳ್ಳುತ್ತಿದ್ದರು. ಹೊಸ ಹೊಸ ಸಿನಿಮಾಗಳು ಅನೌನ್ಸ್ ಆಗುತ್ತಿದ್ದವು. ಇಡೀ ಫ್ಯಾಮಿಲಿ ಜೊತೆ ಸೇರಿ ಸಂಭ್ರಮಿಸುತ್ತಿದ್ದರು.

27
ವಿಧಿಯಾಟವೇ ಬೇರೆ
Image Credit : our own

ವಿಧಿಯಾಟವೇ ಬೇರೆ

ಆದರೆ ವಿಧಿಯಾಟವೇ ಬೇರೆಯಾಗಿತ್ತು. ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಚಿರು ಅವರನ್ನು ನೆನಪಿಸಿಕೊಂಡು ಭಾವುಕರಾಗುತ್ತಿದ್ದರೆ, ಪತ್ನಿ ಮೇಘನಾ ರಾಜ್​ ತಮ್ಮ ಪುತ್ರ ರಾಯನ್​ ಜೊತೆ ಸೇರಿ ಚಿರು ಸಮಾಧಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಯನ್​ ರಾಜ್​ ಸರ್ಜಾ (Raayan Raj Sarja) ಆಡಿದ ಮಾತುಗಳು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ.

Related Articles

Related image1
'ಅಪ್ಪ ನೀವು ಆಮೇಲೆ ಬನ್ನಿ..ನಾನು Gift ಕೊಡ್ತೀನಿ..' ಚಿರಂಜೀವಿ ಸರ್ಜಾ ಬರ್ತ್‌ಡೇ ದಿನ ಸಮಾಧಿಯ ಮುಂದೆ ಹೇಳಿದ ಪುತ್ರ ರಾಯನ್‌!
Related image2
ಕೌನ್​ ಬನೇಗಾ ಕರೋರ್​ಪತಿಯಲ್ಲಿ Rishab Shetty ಗೆದ್ದ ಹಣವೆಷ್ಟು? ಎಡವಿದ್ದೆಲ್ಲಿ? ಉತ್ತರ ಗೊತ್ತಾ?
37
ತಂಗಿಗೆ ಸೂಚನೆ
Image Credit : Instagram

ತಂಗಿಗೆ ಸೂಚನೆ

ತಂಗಿ ಅಂದರೆ ಚಿರು ಅವರ ಸಹೋದರ ಧ್ರುವ ಸರ್ಜಾ (Dhruva Sarja) ಅವರ ಮಗಳು ರುದ್ರಾಕ್ಷಿ ಸರ್ಜಾ ಜೊತೆ ಅಪ್ಪನ ಸಮಾಧಿ ಬಳಿ ತೆರಳಿರುವ ರಾಯನ್​, ತಂಗಿಗೆ ತನ್ನದೇ ಮುದ್ದು ಮಾತಿನಲ್ಲಿ, 'ಅಪ್ಪ ಬರ್ತಡೇ ಇವತ್ತು, ಪೂಜೆ ಮಾಡಿ, ನಮಸ್ತೆ ಮಾಡು, ಹ್ಯಾಪಿ ಬರ್ತ್ ಡೇ ವಿಶ್ ಮಾಡಿ ಹೋಗ್ಬೇಕು ಎಂದಿದ್ದಾನೆ. ಈ ವಿಡಿಯೋ ಈಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಅಭಿಮಾನಿಗಳು ಕಣ್ಣೀರಾಗಿದ್ದಾರೆ.

47
ದಾಂಪತ್ಯದ ಕುರಿತು
Image Credit : our own

ದಾಂಪತ್ಯದ ಕುರಿತು

ಇನ್ನು ಮೇಘನಾ ಮತ್ತು ಚಿರು ಅವರ ದಾಂಪತ್ಯದ ಕುರಿತು ಹೇಳುವುದಾದರೆ, ಇಬ್ಬರೂ ಸುಮಾರು 10 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮೇಘನಾ ರಾಜ್‌ ಅವರನ್ನು ಚಿರಂಜೀವಿ ಸರ್ಜಾ ಮನೆಯವರನ್ನು ಒಪ್ಪಿಸಿ 2 ಮೇ 2018 ರಂದು ವಿವಾಹವಾಗಿದ್ದರು. ಮದುವೆಯಾದ ಎರಡೇ ವರ್ಷದಲ್ಲಿ 7 ಜೂನ್‌ 2020 ಮಧ್ಯಾಹ್ನ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾದರು. ಚಿರು ನಿಧನರಾದಾಗ ಮೇಘನಾ 5 ತಿಂಗಳ ಗರ್ಭಿಣಿಯಾಗಿದ್ದರು. 22 ಅಕ್ಟೋಬರ್‌ 2020 ರಂದು ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ್ದರು.

57
ರಾಜಮಾರ್ತಾಂಡ ಕುರಿತು
Image Credit : our own

ರಾಜಮಾರ್ತಾಂಡ ಕುರಿತು

ಈ ಹಿಂದೆ ರಾಜಮಾರ್ತಾಂಡ ಕುರಿತು ಮಾತನಾಡಿದ್ದ ಚಿರು ಪತ್ನಿ, ನಟಿ ಮೇಘನಾ ರಾಜ್‌, 'ಅದ್ಯಾಕೋ ಗೊತ್ತಿಲ್ಲ. ಚಿರಂಜೀವಿ ಸರ್ಜಾ ನಟಿಸುವ ಬೇರೆ ಚಿತ್ರಗಳ ಸಂಭಾಷಣೆಯನ್ನು ಸೆಟ್‌ನಲ್ಲಿ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗುತ್ತಿದ್ದರು. ಆದರೆ ರಾಜಮಾರ್ತಾಂಡ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು ಎಂದಿದ್ದರು.

67
ಚಿರುನ ನೆನಪಿನಲ್ಲಿ
Image Credit : our own

ಚಿರುನ ನೆನಪಿನಲ್ಲಿ

ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಈ ಚಿತ್ರವನ್ನು ಅವರು ಅಷ್ಟೊಂದು ಹಚ್ಚಿಕೊಂಡಿದ್ದರು. ಅವರು ನಮ್ಮೊಂದಿಗೆ ಇಲ್ಲದ ಈ ಸಮಯದಲ್ಲಿ ರಾಜಮಾರ್ತಾಂಡ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ' ಎಂದು ಸ್ಮರಿಸಿಕೊಂಡಿದ್ದರು.

77
ಮೇಘನಾ ವಿಷ್​
Image Credit : X

ಮೇಘನಾ ವಿಷ್​

ಇನ್ನೊಂದೆಡೆ ಮೇಘನಾ ರಾಜ್‌ ತಮ್ಮ ಇನ್ಸ್‌ಟಾಗ್ರಾಮ್‌ ಪೋಸ್ಟ್‌ಲ್ಲಿ ಚಿರು ಸರ್ಜಗೆ ಜನ್ಮದಿನದ ವಿಶ್‌ ಮಾಡಿದವರ ಫೋಟೋಗಳನ್ನು ಸ್ಟೋರಿಯಲ್ಲಿ ಶೇರ್‌ ಮಾಡಿಕೊಡಿದ್ದಾರೆ. ಧ್ರುವ ಸರ್ಜಾ ಎರಡು ಫೋಟೋಗಳನ್ನು ಪೋಸ್ಟ್‌ ಮಾಡಿ ನಮ್ಮ ಅಣ್ಣ ಎಂದು ಬರೆದುಕೊಂಡಿದ್ದಾರೆ. ಇದನ್ನು ಮೇಘನಾ ರಾಜ್‌ ಶೇರ್‌ ಮಾಡಿದ್ದಾರೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಸ್ಯಾಂಡಲ್ವುಡ್ ಫಿಲ್ಮ್
ಮೇಘನಾ ರಾಜ್
ಚಿರಂಜೀವಿ
ಧ್ರುವ ಸರ್ಜಾ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved