MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನನಗೆ ನಟನೆ ಗೊತ್ತಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ನನಗೆ ನಟನೆ ಗೊತ್ತಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ನಂಜುಂಡೇ ಗೌಡ ನಿರ್ದೇಶನದ ಕಾಸಿನ ಸರ ಚಿತ್ರದ ಆಡಿಯೋ ಬಿಡುಗಡೆ.  ವಿಜಯ್ ರಾಘವೇಂದ್ರ ಮತ್ತು ಹರ್ಷಿಕಾ ಚಿತ್ರಕ್ಕೆ ಸಾಥ್‌ ಕೊಟ್ಟ ಸಿಎಂ... 

2 Min read
Vaishnavi Chandrashekar
Published : Feb 04 2023, 12:30 PM IST
Share this Photo Gallery
  • FB
  • TW
  • Linkdin
  • Whatsapp
19

‘ನನಗೆ ರಿಯಲ್‌ ಮತ್ತು ರೀಲ್‌ ಎರಡರಲ್ಲೂ ನಟಿಸುವುದಕ್ಕೆ ಬರಲ್ಲ. ಕೆಲವರು ತೆರೆಯ ಹಿಂದೆಯೂ ಸಣ್ಣಾಟ, ದೊಡ್ಡಾಟ ಆಡ್ತಾರೆ. ನನಗದು ಬರಲ್ಲ. ಸಹಜ ಕೃಷಿ ಹಾಗೆ ನಾನು ಸಹಜವಾಗಿ ಬದುಕ್ತೀನಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

29

ನಂಜುಂಡೇ ಗೌಡ ನಿರ್ದೇಶನದ, ವಿಜಯ ರಾಘವೇಂದ್ರ ಮತ್ತು ಹರ್ಷಿಕಾ ಪೂಣಚ್ಚ ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಕಾಸಿನ ಸರ’ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಅವರು ಮಾತನಾಡಿದರು.

39

 ‘ಭರವಸೆಯೇ ಬದುಕು ಅನ್ನುವವರು ರೈತರು. ಅನಿಶ್ಚಿತತೆಯ ಮಧ್ಯೆ ಅವರಿಗೆ ಭರವಸೆ ಸಿಗುವುದು ಭೂಮಿ ತಾಯಿಯಿಂದ. ಆ ಭೂಮಿತಾಯಿ ಮಾಡೋ ಮ್ಯಾಜಿಕ್‌ ಮುಂದೆ ಬೇರೆ ಯಾವುದೂ ಇಲ್ಲ. ನಮ್ಮಲ್ಲಿ ಆಹಾರ ಅಭಿವೃದ್ಧಿ ಆಗಿದೆ. 

49

ಆದರೆ ರೈತನ ಸ್ಥಿತಿ ಹಾಗೇ ಇದೆ. ರೈತ ಕೇಂದ್ರಿತ ಕೃಷಿ ಯೋಜನೆ ಮಾಡಬೇಕು. ರೈತನಿಗೆ ಬೇಕಾದ್ದನ್ನ ಮಾಡಬೇಕು. ಹಿಂದೆ ಹೆಣ್ಣುಮಕ್ಕಳ ಭ್ರೂಣ ಹತ್ಯೆಯಾಗ್ತಿತ್ತು. ಅವ್ವ ನನ್ನನ್ಯಾಕ ಹತ್ಯೆ ಮಾಡ್ತೀಯಾ, ನಾನು ನಿಮಗೆಲ್ಲ ಆಶ್ರಯ, ಸಹಾಯ ಆಗ್ತೀನಿ. 

59

ನನ್ನ ಕೊಲ್ಲಬ್ಯಾಡವ್ವಾ ಅಂತ ಆ ಭ್ರೂಣ ಕೂಗಿ ಹೇಳುತ್ತಂತೆ. ಅದೇ ರೀತಿ ಭೂಮ್ತಾಯಿ ಆರ್ತನಾದ ಮಾಡ್ತಿದ್ದಾಳೆ. ಆಕೆಗೆ ವಿಷ ಉಣಿಸುವ ಕೆಲಸ ಮಾಡೋದು ಬೇಡ. ಸಾವಯವ ಕೃಷಿ ಮಾಡಿದ್ರೆ ಭೂಮಿ ಉಳಿಸಿ ಆರೋಗ್ಯ ಪೂರ್ಣ ಆಹಾರ ಬೆಳೆಯಬಹುದು. 

69

ಇದನ್ನೆಲ್ಲ ಕಾಸಿನ ಸರ ಸಿನಿಮಾದಲ್ಲಿ ಹೇಳಿರಬಹುದು ಎಂಬ ಊಹೆ ನನ್ನದು. ಇದರಲ್ಲಿ ನನ್ನ ಸಹೋದ್ಯೋಗಿ ಸೋಮಶೇಖರ್‌ ನಟನೆ ಮಾಡಿದ್ದಾರೆ. ಯಾವ ಪಾತ್ರ ಅಂತ ಗೊತ್ತಿಲ್ಲ. ಅವರ ಅಭಿನಯ ನೋಡಲಿಕ್ಕಾದರೂ ನಾನು ಈ ಸಿನಿಮಾ ನೋಡ್ಬೇಕು’ ಎಂದು ಅವರು ಹೇಳಿದರು.

79

ನಾಯಕ ವಿಜಯ ರಾಘವೇಂದ್ರ, ‘ರೈತನ ಪಾತ್ರ ಮಾಡೋ ಅವಕಾಶ ಎಲ್ಲಾ ನಟರಿಗೂ ಸಿಗಲ್ಲ. ನನಗೆ ಈ ಪಾತ್ರ ಮಾಡಿರೋದಕ್ಕೆ ತೃಪ್ತಿ ಇದೆ’ ಎಂದರು. ನಾಯಕಿ ಹರ್ಷಿಕಾ ಪೂಣಚ್ಚ, ‘ಶೂಟಿಂಗ್‌ ವೇಳೆ ನಿರ್ದೇಶಕರು ತೋಟದಲ್ಲಿ ಕೆಲಸ ಮಾಡಿಲ್ವಾ ಅಂತ ಕೇಳ್ತಿದ್ರು.

89

ಯೋಗಾಯೋಗ ಎಂಬಂತೆ ಕಾಫಿ ತೋಟ ಖರೀದಿಸಿದೆ. ರೈತನ ಕಷ್ಟಗೊತ್ತಾಯ್ತು’ ಎನ್ನುತ್ತಾ ತೀರಿಕೊಂಡ ತಂದೆಯನ್ನು ನೆನೆದು ಭಾವುಕರಾದರು.

99

ಹಕಾರ ಸಚಿವ ಎಸ್‌ ಟಿ ಸೋಮಶೇಖರ್‌, ನಟಿ ತಾರಾ ಅನೂರಾಧಾ, ನಿರ್ದೇಶಕ ನಂಜುಂಡೇ ಗೌಡ, ನಿರ್ಮಾಪಕ ದೊಡ್ಡ ನಾಗಯ್ಯ, ಸಂಗೀತ ನಿರ್ದೇಶಕ ಶ್ರೀಧರ್‌ ಸಂಭ್ರಮ್‌ ಹಾಗೂ ಚಿತ್ರತಂಡದವರು ಉಪಸ್ಥಿತರಿದ್ದರು.

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಬಸವರಾಜ ಬೊಮ್ಮಾಯಿ
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved