MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ರಾಜಸ್ಥಾನದಲ್ಲಿ ಡೆವಿಲ್ ಚಿತ್ರೀಕರಣ ಮುಗಿಸಿದ ದರ್ಶನ್: ಸಿನಿಮಾದ ವಿಲನ್ ಯಾರು ಗೊತ್ತಾ?

ರಾಜಸ್ಥಾನದಲ್ಲಿ ಡೆವಿಲ್ ಚಿತ್ರೀಕರಣ ಮುಗಿಸಿದ ದರ್ಶನ್: ಸಿನಿಮಾದ ವಿಲನ್ ಯಾರು ಗೊತ್ತಾ?

ರಾಜಸ್ಥಾನದ ಅಪರೂಪದ ಸ್ಥಳಗಳಲ್ಲಿ ವಾರದಿಂದ ನಡೆದ ‘ಡೆವಿಲ್‌’ ಚಿತ್ರೀಕರಣ ಮುಕ್ತಾಯ. ದರ್ಶನ್‌, ನಾಯಕಿ ರಚನಾ ರೈ ಮತ್ತಿತರರು ಭಾಗಿ. ಮಾಸಾಂತ್ಯಕ್ಕೆ ಹಾಡುಗಳ ಚಿತ್ರೀಕರಣವೂ ಅಂತ್ಯವಾಗುವ ನಿರೀಕ್ಷೆ.

1 Min read
Govindaraj S
Published : Apr 02 2025, 04:50 PM IST| Updated : Apr 02 2025, 04:52 PM IST
Share this Photo Gallery
  • FB
  • TW
  • Linkdin
  • Whatsapp
17

ರಾಜಸ್ಥಾನದಲ್ಲಿ ನಡೆಯುತ್ತಿದ್ದ ‘ಡೆವಿಲ್’ ಸಿನಿಮಾದ ಶೂಟಿಂಗ್‌ ಮುಕ್ತಾಯಗೊಂಡಿದೆ ಎನ್ನಲಾಗಿದೆ. ರಾಜಸ್ಥಾನ ಹಾಗೂ ಉದಯಪುರದ, ಈವರೆಗೆ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಳ್ಳದ ಅಪರೂಪದ ತಾಣಗಳಲ್ಲಿ ಕಳೆದೊಂದು ವಾರದಿಂದ ‘ಡೆವಿಲ್‌’ ಸಿನಿಮಾದ ಮೂರನೇ ಹಂತದ ಶೂಟಿಂಗ್‌ ಭರದಿಂದ ನಡೆದಿದೆ ಎಂದು ಮೂಲಗಳು ತಿಳಿಸಿವೆ.

27

ದರ್ಶನ್ ಜೊತೆ ನಾಯಕಿ ರಚನಾ ರೈ, ಅಚ್ಯುತ್‌ ಕುಮಾರ್‌, ಮಹೇಶ್‌ ಮಂಜ್ರೇಕರ್‌, ಶರ್ಮಿಳಾ ಮಾಂಡ್ರೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಮೂಲಗಳ ಪ್ರಕಾರ ದರ್ಶನ್‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. 

37

ಏಪ್ರಿಲ್‌ ಕೊನೆಯಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಕಾಶ್‌ ವೀರ್‌ ನಿರ್ದೇಶನ, ನಿರ್ಮಾಣದ ಚಿತ್ರವಿದು. ಮಾಸಾಂತ್ಯಕ್ಕೆ ಹಾಡುಗಳ ಚಿತ್ರೀಕರಣವೂ ಅಂತ್ಯವಾಗುವ ನಿರೀಕ್ಷೆ.

47

ಡೆವಿಲ್‌ನಲ್ಲಿ ಬಾಲಿವುಡ್‌ ವಿಲನ್‌ ಮಹೇಶ್‌ ಮಂಜ್ರೇಕರ್‌: ಖ್ಯಾತ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ದರ್ಶನ್‌ ನಟನೆಯ ‘ಡೆವಿಲ್‌’ ಸಿನಿಮಾಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ವಿಲನ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

57

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ಮಹೇಶ್‌ ಮಂಜ್ರೇಕರ್‌, ಇದೇ ಮೊದಲ ಸಲ ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ನನಗೆ ಸ್ಯಾಂಡಲ್‌ವುಡ್‌ ಚಿತ್ರಗಳಲ್ಲಿ ನಟಿಸಬಾರದು ಎಂದಿರಲಿಲ್ಲ. ಆದರೆ ಈವರೆಗೆ ಇಲ್ಲಿನವರು ನನ್ನನ್ನು ಸಂಪರ್ಕಿಸಿರಲಿಲ್ಲ. 

67

ಡೆವಿಲ್‌ ಸಿನಿಮಾದ ನಿರ್ದೇಶಕ ಪ್ರಕಾಶ್‌ ವೀರ್‌ ಸಂಪರ್ಕಿಸಿ ನರೇಶನ್‌ ನೀಡಿದರು. ಮನಸ್ಸಿಗೆ ಹಿಡಿಸಿತು. ಒಪ್ಪಿ ನಟಿಸುತ್ತಿದ್ದೇನೆ. ಒಟ್ಟು 30 ದಿನಗಳ ಕಾಲ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದೇನೆ. ಇಷ್ಟು ಹೇಳಿದರೇ ನಿಮಗೆ ನನ್ನ ಪಾತ್ರದ ಮಹತ್ವ ಏನು ಅಂತ ತಿಳಿಯಬಹುದು ಎಂದಿದ್ದಾರೆ.

77

ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಗುರುತಿಸಿಕೊಂಡ ಕಾರಣ ಕಳೆದ 9 ತಿಂಗಳಿನಿಂದ ದರ್ಶನ್‌ ವಿಮಾನ ಏರಿರಲಿಲ್ಲ. ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿ ಹೊರರಾಜ್ಯಕ್ಕೆ ಪ್ರಯಾಣಿಸುತ್ತಿದ್ದಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ದರ್ಶನ್ ತೂಗುದೀಪ
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved