MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • 2022 ರೌಂಡಪ್: ಕನ್ನಡ ಚಿತ್ರರಂಗದಲ್ಲಿ ಅಗಲಿದ ತಾರೆಯರು

2022 ರೌಂಡಪ್: ಕನ್ನಡ ಚಿತ್ರರಂಗದಲ್ಲಿ ಅಗಲಿದ ತಾರೆಯರು

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ-ನಟಿಯರು ಸಾವಿರಾರೂ ನೆನಪುಗಳನ್ನು ಸೃಷ್ಟಿ ಮಾಡಿ ನಮ್ಮನ್ನು ಅಗಲಿದ್ದಾರೆ. ಅವರುಗಳ ಪಟ್ಟಿ ಇಲ್ಲಿದೆ... 

2 Min read
Author : Vaishnavi Chandrashekar
Published : Dec 30 2022, 02:05 PM IST
Share this Photo Gallery
  • FB
  • TW
  • Linkdin
  • Whatsapp
112

ನಟಿ ಭಾರ್ಗವಿ ನಾರಾಯಣ್: ಅಭಿನಯದ ಮೂಲಕ  ಕನ್ನಡಿಗರ ಮನೆ ಮನಗಳಲ್ಲಿ ಪ್ರೀತಿ ಹಂಚಿದ್ದ ಕಿರುತೆರೆಯ ಅಜ್ಜಿಯಾಗಿದ್ದ ಭಾರ್ಗವಿ ಫೆಬ್ರವರಿ ತಿಂಗಳಿನಲ್ಲಿ ಬೆಂಗಳೂರಿನ ಜಯ ನಗರ ನ್ಯಾಶನಲ್‌ ಕಾಲೇಜ್‌ ಬಳಿ ಇರುವ ಸ್ವಗೃಹದಲ್ಲಿ ಅವರು ಇಹಲೋಕ ತ್ಯಜಿಸಿದ್ದರು.

212

ಕಲಾತಪಸ್ವಿ ರಾಜೇಶ್:   150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಫೆಬ್ರವರಿ ತಿಂಗಳಿನಲ್ಲಿ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರ ಪತ್ನಿ ಪಾರ್ವತಮ್ಮ  ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಕಳೆದ ವರ್ಷದ ನವೆಂಬರ್ ನಲ್ಲಿ ಇಹಲೋಕ ತ್ಯಜಿಸಿದ್ದರು. ಅಂದಿನಿಂದಲೂ ರಾಜೇಶ್ ಆರೋಗ್ಯ ಸ್ವಲ್ಪ ಹದಗೆಟ್ಟಿತ್ತು.  

312

ಟಿ ಆರ್‌ ಅಶ್ವತ್ಥನಾರಾಯಣ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥನಾರಾಯಣ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದರು.  600ಕ್ಕೂ ಹೆಚ್ಚು ನಾಟಕಗಳಲ್ಲಿ ಬಣ್ಣ ಹಚ್ಚಿದ್ದರು.'ಚಂದವಳ್ಳಿ ತೋಟ' ಚಿತ್ರದ ನಂತರ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದುಕೊಂಡು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.

412

ಮೋಹನ್ ಜುನೇಜ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಜನಪ್ರಿಯ ಹಾಸ್ಯ ನಟ ಮೋಜನ್ ಜುನೇಜಾ ನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೇ ತಿಂಗಳಿನಲ್ಲಿ ಕೊನೆಯುಸಿರೆಳೆದಿದ್ದರು.
 

512

ಕಿರುತೆರೆ ನಟ ಉದಯ್ ಹುತ್ತಿನಗದ್ದೆ: 1988 ರಲ್ಲಿ ಡಾ.ರಾಜ್ ಕುಮಾರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದ ದೇವತಾ ಮನುಷ್ಯ ಸೇರಿ ಹಲವು ಚಿತ್ರದಲ್ಲಿ ಇವರು ನಟಿಸಿದ ಹಿರಿಯ ನಟ ಉದಯ್ ಹುತ್ತಿನಗದ್ದೆ ಬೆಂಗಳೂರಿನ ರಾಜಾಜಿನಗರದ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು. 

612

ನಿರ್ಮಾಪಕ ನರ್ಗೀಸ್ ಬಾಬು:  ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ನರ್ಗಿಸ್ ಬಾಬು ಅನಾರೋಗ್ಯದಿಂದ ಬಳಲುತ್ತಿದ್ದು ಆಗಸ್ಟ್‌ ತಿಂಗಳಿನಲ್ಲಿ ಮೃತಪಟ್ಟಿದ್ದಾರೆ.76 ವರ್ಷದ ನರ್ಗಿಸ್ ಬಾಬುಕನ್ನಡದಲ್ಲಿ ಸುಂದರ ಪುರಷ, ಯಾರಿಗೆ ಬೇಡ ದುಡ್ಡು, ಧನ್ ಧನಾ ಧನ್, ಅನಂತ್ ಗೌಡ ವರ್ಸಸ್ ರೆಡ್ಡಿ ಸಿನಿಮಾಗಳನ್ನ ನರ್ಗಿಸ್ ಬಾಬು ನಿರ್ಮಾಣ ಮಾಡಿದ್ದಾರೆ.

712

ಕೆಜಿಎಫ್ ತಾತ ಕೃಷ್ಣ ಜಿ ರಾವ್:  ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿ ಮಾಡಿದ ಕೆಜಿಎಫ್ ಸಿನಿಮಾದಲ್ಲಿ ಪಂಚ್ ಡೈಲಾಗ್ ಹೊಡೆಯುವ ಮೂಲಕ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದ ಹಿರಿಯ ನಟ ಕೃಷ್ಣ ಜಿ.ರಾವ್ ಡಿಸೆಂಬರ್‌ ತಿಂಗಳಿನಲ್ಲಿ ಇಹಲೋಕ ತ್ಯಜಿಸಿದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

812

ನಿರ್ದೇಶಕ ಮುರಳಿ ಕೃಷ್ಣ: ನವೆಂಬರ್‌ ತಿಂಗಳಿನಲ್ಲಿ ನಿರ್ದೇಶಕ ಮುರಳಿ ಕೃಷ್ಣ ಅವರು ಬ್ರೈನ್ ಟ್ಯೂಮರ್‌ ಶಸ್ತ್ರಚಿಕಿತ್ಸೆ ಬಳಿಕ  ಹೃದಯಾಘಾತದಿಂದ ನಿಧನರಾದ್ದರು. 

912

 ಲೋಹಿತಾಶ್ವ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಲೋಹಿತಾಶ್ವ  ನವೆಂಬರ್ ತಿಂಗಳಿನಲ್ಲಿ ಅಗಲಿದ್ದರು. ನಟ ಲೋಹಿತಾಶ್ವ ಸುಮಾರು 500 ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

1012

ಕಾಸ್ಟ್ಯೂಮ್ ಡಿಸೈನರ್ ಗಂಡಸಿ ನಾಗರಾಜ್: ಸ್ಯಾಂಡಲ್‌‍ವುಡ್‌ನಲ್ಲಿ ಹಲವು ವರ್ಷಗಳ ಕಾಲ ವಸ್ತ್ರಾಲಂಕಾರ ಕಲಾವಿದನಾಗಿ ಹಾಗೂ ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ಗಂಡಸಿ ನಾಗರಾಜ್​  ಡಿಸೆಂಬರ್ 11ರಂದು ಕೊನೆಯುಸಿರು ಎಳೆದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಟ ಗಂಡಸಿ ನಾಗರಾಜ್ ಚಿಕಿತ್ಸೆ ಫಲಿಸದೆ ನಿಧನರಾದರು.

1112

ನಿರ್ಮಾಪಕ ಆನೇಕಲ್ ಬಾಲರಾಜ್‌: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆನೇಕಲ್ ಬಾಲರಾಜ್‌ ಬೆಳಗ್ಗೆ ವಾಕಿಂಗ್‌ಗೆ ತೆರಳುವಾಗಿ ವಾಹನವೊಂದು ಹಿಂದಿನಿಂದ ತಾಕಿ ಪುಟ್‌ ಪಾತ್‌ಗೆ ತಲೆ ತಾಕಿದೆ.ತಕ್ಷಣವೇ ಹತ್ತಿರವಿದ್ದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸ ಫಲಕಾರಿ ಆಗದೆ ಕೊನೆಯುಸಿರೆಳೆದರು.

1212

ನಿರ್ದೇಶಕ ಪ್ರದೀಪ್ ರಾಜ್: ಇಡೀ ಕನ್ನಡ ಚಿತ್ರರಂಗದಲ್ಲಿ ಹಳ್ಳಿ ಕಥೆ ಹಾಗೂ ಮುದ್ದಾದ ಲವ್‌ ಸ್ಟೋರಿ ಕೊಟ್ಟ ನಿರ್ದೇಶಕ ಪ್ರದೀಪ್ ರಾಜ್‌ ಜನವರಿಯಲ್ಲಿ ನಮ್ಮನ್ನು ಅಗಲಿದ್ದರು. ಹಲವು ತಿಂಗಳಿನಿಂದ ಅರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೊರೋನಾ ವೈರಸ್‌ಗೆ  ಬಲಿಯಾಗಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಒಂದೇ ದಿನದಲ್ಲಿ ಜಿಗಿದ ಫಾಲೋವರ್ಸ್ ಕೌಂಟ್‌! 'ಟಾಕ್ಸಿಕ್' ಬೋಲ್ಡ್‌ ಬ್ಯೂಟಿ ನಟಾಲಿಗೆ ಫಿದಾ ಆದ ಫ್ಯಾನ್ಸ್!
Recommended image2
ನಟಿ ಸಮಂತಾ ಹಗಲಿನಲ್ಲಿ ಬೇರೆ, ರಾತ್ರಿಯಲ್ಲಿ ಬೇರೆ ತರಹ ಇರ್ತಾರಂತೆ.. ಆ ಕನ್ನಡ ನಟನ ಮುಂದೆ ಹೀಗೇಕೆ?!
Recommended image3
'ಯಶ'ಸ್ಸೇ ಮಾನದಂಡ.. ಇಂಟರ್‌ನೆಟ್‌ಗೆ 'ಬೆಂಕಿ' ಬಿತ್ತು.. ಟಾಕ್ಸಿಕ್ ಟೀಸರ್ ಬಗ್ಗೆ ಪಬ್ಲಿಕ್ ಏನ್ ಹೇಳ್ತಿದಾರೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved