MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ರಾಗಿಣಿ ಜೊತೆ ಒಂದಾದ ಧರ್ಮ ಕೀರ್ತಿರಾಜ್: ಬನಶಂಕರಿ ದೇವಸ್ಥಾನದಲ್ಲಿ ಆಗಿದ್ದು ಮುಹೂರ್ತ!

ರಾಗಿಣಿ ಜೊತೆ ಒಂದಾದ ಧರ್ಮ ಕೀರ್ತಿರಾಜ್: ಬನಶಂಕರಿ ದೇವಸ್ಥಾನದಲ್ಲಿ ಆಗಿದ್ದು ಮುಹೂರ್ತ!

ನನ್ನ ಪಾತ್ರದಲ್ಲಿ ದುರ್ಗೆಯ ಶಕ್ತಿ, ಸರಸ್ವತಿಯ ಬುದ್ಧಿ, ಲಕ್ಷ್ಮಿಯ ಸಮೃದ್ಧಿ ಇದೆ ಎಂದರು. ಈ ಸಿನಿಮಾದಲ್ಲಿ ಧರ್ಮ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದರು ರಾಗಿಣಿ.

1 Min read
Govindaraj S
Published : May 02 2025, 05:41 PM IST| Updated : May 02 2025, 05:51 PM IST
Share this Photo Gallery
  • FB
  • TW
  • Linkdin
  • Whatsapp
15

ರಾಗಿಣಿ ದ್ವಿವೇದಿ ಹಾಗೂ ಧರ್ಮಕೀರ್ತಿರಾಜ್‌ ನಟನೆಯ ಹೊಸ ಸಿನಿಮಾ ‘ಸಿಂಧೂರಿ’. ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ಬರೆದು ನಿರ್ದೇಶಿಸಿದ್ದು, ಎಸ್ ರಮೇಶ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಮುಹೂರ್ತ ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ನಡೆದಿದೆ.

25

ಸಿನಿಮಾ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ಶಂಕರ್‌ ಕೋನಮಾನಹಳ್ಳಿ, ‘ ಈ ಸಿನಿಮಾದ ಶೀರ್ಷಿಕೆ ಕೇಳಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಡಿ ಕೆ ರವಿ ಅವರ ಕಥೆಯಾ ಅಂತ ಬಹಳ ಮಂದಿ ಕೇಳಿದ್ದಾರೆ. 

Related Articles

Related image1
ಅಮರಾವತಿ ಪೋಲೀಸ್ ಸ್ಟೇಷನ್‌ನಲ್ಲಿ ಕಾಣಿಸಿಕೊಂಡ ಧರ್ಮ ಕೀರ್ತಿರಾಜ್-ಗುರುರಾಜ್ ಜಗ್ಗೇಶ್: ಯಾಕೆ ಗೊತ್ತಾ?
Related image2
ನಮ್ಮಿಬ್ಬರ ನಡುವೆ ಲವ್ ಆಗಿಲ್ಲ, ಕಂಕಣ ಭಾಗ್ಯ ಬರಲು ಸಾಧ್ಯವೇ ಇಲ್ಲ: ಧರ್ಮ ಕೀರ್ತಿರಾಜ್ ಸ್ಪಷ್ಟನೆ
35

ಆದರೆ ಈ ಚಿತ್ರಕ್ಕೂ ಅವರಿಬ್ಬರಿಗೂ ಯಾವುದೇ ಸಂಬಂಧ ಇಲ್ಲ. ಇದೊಂದು ಕಾಲ್ಪನಿಕ ಕಥೆ. ಮರ್ಡರ್‌ ಮಿಸ್ಟ್ರಿ. ಇದರಲ್ಲಿ ರಾಗಿಣಿ ಕಥೆಯ ನಿರ್ಣಾಯಕ ಪಾತ್ರದಲ್ಲಿದ್ದಾರೆ’ ಎಂದರು. ರಾಗಿಣಿ ದ್ವಿವೇದಿ, ಸಿನಿಮಾ ಶೀರ್ಷಿಕೆಯಲ್ಲೇ ಕೆಂಪು ಬಣ್ಣವಿದೆ. 

45

ನನ್ನ ಪಾತ್ರದಲ್ಲಿ ದುರ್ಗೆಯ ಶಕ್ತಿ, ಸರಸ್ವತಿಯ ಬುದ್ಧಿ, ಲಕ್ಷ್ಮಿಯ ಸಮೃದ್ಧಿ ಇದೆ ಎಂದರು. ಈ ಸಿನಿಮಾದಲ್ಲಿ ಧರ್ಮ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ತನ್ನ ಪಾತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದರು.
 

55

ನಿರ್ಮಾಪಕ ಎಸ್‌ ರಮೇಶ್‌ ಹಿಂದಿನ ಸಿನಿಮಾಕ್ಕೆ ಬಂಡವಾಳ ಹೂಡಿ ಮೋಸ ಹೋದ ಕಥೆ ಹೇಳಿದರು. ಇನ್ನು ಮುಂದೆ ಸಿನಿಮಾ ಮಾಡಲ್ಲ ಎಂದು ದೃಢ ನಿರ್ಧಾರ ಮಾಡಿದ್ದ ಅವರನ್ನು ಈ ಸಿನಿಮಾ ಕಥೆ ಮತ್ತೆ ಇಂಡಸ್ಟ್ರಿಗೆ ಎಳೆದು ತಂದಿದೆಯಂತೆ.
 

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್ವುಡ್ ಫಿಲ್ಮ್
ಕನ್ನಡ ಚಲನಚಿತ್ರಗಳು
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved