- Home
- Entertainment
- Sandalwood
- 'ಮಹಾನಟಿ' ಪ್ರಿಯಾಂಕಾಗೆ ಅವಕಾಶ ಕೊಟ್ಟ ತರುಣ್ ಸುಧೀರ್! 'ಏಳುಮಲೆ' ಸಿನಿಮಾಗೆ ಶಿವರಾಜ್ಕುಮಾರ್ ಸಾಥ್!
'ಮಹಾನಟಿ' ಪ್ರಿಯಾಂಕಾಗೆ ಅವಕಾಶ ಕೊಟ್ಟ ತರುಣ್ ಸುಧೀರ್! 'ಏಳುಮಲೆ' ಸಿನಿಮಾಗೆ ಶಿವರಾಜ್ಕುಮಾರ್ ಸಾಥ್!
‘ಮಹಾನಟಿʼ ಶೋ ವಿಜೇತೆ ಪ್ರಿಯಾಂಕಾ ಅವರಿಗೆ ಸಿನಿಮಾದಲ್ಲಿ ಅವಕಾಶ ಕೊಡ್ತೀನಿ ಎಂದು ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಹೇಳಿದ್ದರು. ಅದರಂತೆ ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಪ್ರಿಯಾಂಕಾ ಹೀರೋಯಿನ್ ಆಗಿದ್ದಾರೆ.

ಬೆಂಗಳೂರಿನ ಒರಿಯನ್ ಮಾಲ್ನಲ್ಲಿ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ನಟ ಶಿವರಾಜ್ಕುಮಾರ್ ಅವರು ಟೈಟಲ್ ರಿವೀಲ್ ಮಾಡಿ ಇಡೀ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಜೋಗಿ ಪ್ರೇಮ್ ಕೂಡ ಈ ಕಾರ್ಯಕ್ರಮಕ್ಕೆ ವಿಶೇಷ ಅಥಿಯಾಗಿ ಆಗಮಿಸಿದ್ದರು. ತರುಣ್ ಸುಧೀರ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಏಳುಮಲೆ ಎಂಬ ಟೈಟಲ್ ಇಡಲಾಗಿದೆ. ರಕ್ಷಿತಾ ಸಹೋದರ ರಾಣಾ ಹಾಗೂ ಮಹಾನಟಿ ಶೋ ಖ್ಯಾತಿಯ ಪ್ರಿಯಾಂಕಾ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.
ಶಿವರಾಜ್ಕುಮಾರ್ ಮಾತನಾಡಿ, “ಟೈಟಲ್ ಟೀಸರ್ ತುಂಬಾ ಚೆನ್ನಾಗಿದೆ. ಒಳ್ಳೆಯವರಿಗೆ ಒಳ್ಳೆದಾಗುತ್ತದೆ ಎನ್ನುವುದಕ್ಕೆ ಈ ಟೈಟಲ್ ಟೀಸರ್ ಸಾಕ್ಷಿ. ರಾಣಾ ತುಂಬಾ ಹ್ಯಾಂಡ್ಸಮ್ ಇದ್ದಾನೆ. ವಿಲನ್ ಸಿನಿಮಾ ಸಮಯದಲ್ಲಿ ರಾಣಾಗೆ ನೀನು ಹೀರೋ ಆಗ್ತೀಯಾ ಅಂತ ಹೇಳಿದ್ದೆ. ಏಳುಮಲೆ ಸಿನಿಮಾ ಪ್ರಾಮಿಸಿಂಗ್ ಆಗಿದೆ. ಪ್ರಿಯಾಂಕಾ ಫಸ್ಟ್ ಟೈಮ್ ನಟಿಸ್ತಿದ್ದಾರೆ ಅಂತ ಅನಿಸುವುದಿಲ್ಲ. ಹೊಸಬರು ಬರಬೇಕು ಸಿನಿಮಾ ಮಾಡಬೇಕು. ಮೆಚ್ಚುಗೆ ಬಂದ ಮೇಲೆ ಹಣ ಮಾಡೋದು ಇದ್ದೇ ಇದೆ. ಅದು ತಾನಾಗಿಯೇ ಆಗಲಿದೆ. ಮೊದಲು ಮೆಚ್ಚಿಗೆ ಆಮೇಲೆ ಹೆಚ್ಚಿಗೆ” ಎಂದು ಹೇಳಿದರು.
ಜೋಗಿ ಪ್ರೇಮ್ ಮಾತನಾಡಿ, “ಜೋಗಿ ಸಿನಿಮಾ ಮಾಡುವಾಗ ಡಾ ರಾಜ್ಕುಮಾರ್ ಜೊತೆಯಲ್ಲಿ ಕಾಲ ಕಳೆದಿದ್ದೆ. ನಮ್ಮ ಕಾಡಿನವರು ಎಂದು ಹೇಳುತ್ತಿದ್ದರು. ಈಗ ನಮ್ಮ ಯಜಮಾನ್ರು ಶಿವಣ್ಣ ಲಾಂಚ್ ಮಾಡಿದ್ದಾರೆ. ನೂರಷ್ಟು ಸಿನಿಮಾ ಸಕ್ಸಸ್ ಆಗಲಿದೆ” ಎಂದು ಶುಭ ಹಾರೈಸಿದರು.
ತರುಣ್ ಸುಧೀರ್ ಮಾತನಾಡಿ, ಕರ್ನಾಟಕದ ಎಲ್ಲಾ ಭಾಗದಲ್ಲಿಯೂ ಏಳುಮಲೆ ಊರು ಹಾಗೂ ಮಲೆಮಹದೇಶ್ವರ ದೇವಸ್ಥಾನ, ಅದರ ಐತಿಹಾಸ ಸಿನಿಮಾ ಮೂಲಕ ಹೇಳುವುದರಲ್ಲಿ ಶಿವರಾಜ್ಕುಮಾರ್ ಹಾಗೂ ಪ್ರೇಮ್ ಸರ್ ನಿಸ್ಸೀಮರು. ಶಿವಣ್ಣ ಅವರಿಂದ ಟೈಟಲ್ ಲಾಂಚ್ ಆಗುತ್ತಿರುವುದು ನಮ್ಮ ಪುಣ್ಯ. ಚಿತ್ರರಂಗ ಅನ್ನೋದು ಗೋಲ್ಡ್ ಮೈನಿಂಗ್. ಕೆಲವೊಮ್ಮೆ ಬೇಗ ಚಿನ್ನ ಸಿಗುತ್ತದೆ. ಮತ್ತೆ ಕೆಲವೊಮ್ಮೆ ಲೇಟ್ ಆಗಿ ಚಿನ್ನ ಸಿಗುತ್ತದೆ. ಕನ್ನಡ ಚಿತ್ರರಂಗದಲ್ಲಿ ಚಿನ್ನ ಇದೆ. ಇವತ್ತು ಟೈಟಲ್ ಟೀಸರ್ ಲಾಂಚ್ ಮಾಡುತ್ತಿದ್ದೇವೆ. ಒಂದೊಳ್ಳೆ ಮೊತ್ತಕ್ಕೆ ಆನಂದ್ ಆಡಿಯೋ ಸೇಲ್ ಆಗಿದೆ. ಟೈಟಲ್ ರಿಲೀಸ್ಗೂ ಮೊದ್ಲೇ ಸಿನಿಮಾ ಮಾರಾಟವಾಗಿದೆ. ಒಂದೊಳ್ಳೆ ಪ್ರಾಡೆಕ್ಟ್ ಹಾಗೂ ಕಂಟೆಂಟ್ ಇರುವ ಸಿನಿಮಾ ಬಂದರೆ ಅದಕ್ಕೆ ಬೆಲೆ ಇದೆ” ಎಂದರು.
ಜೋಗಿ ಪ್ರೇಮ್ ಮಾತನಾಡಿ, “ಜೋಗಿ ಸಿನಿಮಾ ಮಾಡುವಾಗ ಡಾ ರಾಜ್ಕುಮಾರ್ ಜೊತೆಯಲ್ಲಿ ಕಾಲ ಕಳೆದಿದ್ದೆ. ನಮ್ಮ ಕಾಡಿನವರು ಎಂದು ಹೇಳುತ್ತಿದ್ದರು. ಈಗ ನಮ್ಮ ಯಜಮಾನ್ರು ಶಿವಣ್ಣ ಲಾಂಚ್ ಮಾಡಿದ್ದಾರೆ. ನೂರಷ್ಟು ಸಿನಿಮಾ ಸಕ್ಸಸ್ ಆಗಲಿದೆ” ಎಂದು ಶುಭ ಹಾರೈಸಿದರು.
ನಿರ್ದೇಶಕ ಪುನೀತ್ ರಂಗಸ್ವಾಮಿ, ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ. ಜೊತೆಗೆ ನಾವೇನು ತೆಗೆದುಕೊಂಡಿದ್ದೇವೆ ಆ ಕಾಲಘಟ್ಟದಲ್ಲಿ ನಡೆದ ಕಥೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ ಎಂದು ತಿಳಿಸಿದರು.
ಚೌಕ , ಕಾಟೇರ ಸಿನಿಮಾಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರುವಂತಿದೆ ಟೀಸರ್ ಇದಾಗಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್, ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.