MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Graamaayana Movie Trailer: ಮೇಘಾ ಶೆಟ್ಟಿ, ವಿನಯ್‌ ರಾಜ್‌ಕುಮಾರ್‌ 'ಗ್ರಾಮಾಯಣ'ಕ್ಕೆ‌ ದುನಿಯಾ ವಿಜಯ್ ಸಾಥ್

Graamaayana Movie Trailer: ಮೇಘಾ ಶೆಟ್ಟಿ, ವಿನಯ್‌ ರಾಜ್‌ಕುಮಾರ್‌ 'ಗ್ರಾಮಾಯಣ'ಕ್ಕೆ‌ ದುನಿಯಾ ವಿಜಯ್ ಸಾಥ್

Graamaayana Movie: ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ, ವಿನಯ್ ರಾಜಕುಮಾರ್, ಮೇಘಾ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ ‘ಗ್ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.  

2 Min read
Author : Padmashree Bhat
Published : Jun 29 2026, 02:30 PM IST
Share this Photo Gallery
  • FB
  • TW
  • Linkdin
  • Whatsapp
15
ದುನಿಯಾ ವಿಜಯ್‌ ಹೇಳಿದ್ದೇನು?
Image Credit : Asianet News

ದುನಿಯಾ ವಿಜಯ್‌ ಹೇಳಿದ್ದೇನು?

ದುನಿಯಾ ವಿಜಯ್ ಹಾಗೂ ನಟಿ ಅಪರ್ಣ ಅವರ ಪತಿ ನಾಗರಾಜ್ ವಸ್ತಾರೆ ಅವರಿಂದ "ಗ್ರಾಮಾಯಣ"ದ ಟ್ರೇಲರ್ ಅನಾವರಣವಾಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಸಂಗೀತ ನಿರ್ದೇಶಕ ಹಂಸಲೇಖ, ಯವ ರಾಜಕುಮಾರ್, ನಟ ನವೀನ್ ಶಂಕರ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, " ಗ್ರಾಮಾಯಣ"ಕ್ಕೆ ಶುಭ ಕೋರಿದರು.

ನನಗೆ ವಿನಯ್ ರಾಜಕುಮಾರ್ ಎಂದರೆ ಬಹಳ ಇಷ್ಟ ಎಂದು‌ ಟ್ರೇಲರ್ ಬಿಡುಗಡೆ ಮಾತನಾಡಿದ ನಟ ದುನಿಯಾ ವಿಜಯ್, ಟ್ರೇಲರ್ ಅದ್ಭುತವಾಗಿದೆ. ದೇವನೂರು ಚಂದ್ರು ಉತ್ತಮ ನಿರ್ದೇಶಕ.‌ ನಾನು ಅವರನ್ನು ಎರಡನೇ ಸೂರಿ ಅಂತಲೇ ಕರೆಯುತ್ತೇನೆ.‌ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಲಹರಿ ಸಂಸ್ಥೆಗೆ ಹಾಗೂ‌ ಇಡೀ "ಗ್ರಾಮಾಯಣ" ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ನಿರೂಪಕಿ ಅಪರ್ಣಾ ನಟಿಸಿದ್ದರು
Image Credit : Asianet News

ನಿರೂಪಕಿ ಅಪರ್ಣಾ ನಟಿಸಿದ್ದರು

ನಿರೂಪಕಿ ಅಪರ್ಣ ಅವರು "ಗ್ರಾಮಾಯಣ" ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಬಂದ‌ ಮೇಲೆ ಅಲ್ಲಿನ ವಿಷಯಗಳನ್ನು ನನ್ನ ಬಳಿ ಹಂಚಿಕೊಳ್ಳುತ್ತಿದ್ದರು. ಇಂದು ಅವರಿಲ್ಲದೆ ಅವರ ಅಭಿನಯದ ಚಿತ್ರದ ಟ್ರೇಲರ್ ಅನಾವರಣ ಮಾಡಿದ್ದು, ಬಹಳ ಬೇಸರವಾಗಿದೆ‌. "ಗ್ರಾಮಾಯಣ" ಯಶಸ್ವಿಯಾಗಲಿ ಎಂದು ನಟಿ ಅಪರ್ಣ ಪತಿ ನಾಗರಾಜ್ ವಸ್ತಾರೆ ಹೇಳಿದರು.

Related Articles

Related image1
ವೈರಲ್ ಆಯ್ತು ವಿನಯ್ ರಾಜ್‌ಕುಮಾರ್ ಗ್ರಾಮಾಯಣ ಟೀಸರ್
Related image2
Now Playing
‘ಗ್ರಾಮಾಯಣ’ ಸಿನಿಮಾಗೆ ಚಾಲನೆ: ಹಳ್ಳಿ ಹೈದನಾಗಿ ಗಾಜನೂರ ಕುಡಿ
35
ತಾರೆಯರಿಂದ ಶುಭ ಹಾರೈಕೆ
Image Credit : Asianet News

ತಾರೆಯರಿಂದ ಶುಭ ಹಾರೈಕೆ

ಈ ಚಿತ್ರದ ಬಗ್ಗೆ ನಾವು ಹೇಳುವುದಕ್ಕಿಂತ ಅಭಿಮಾನಿಗಳು ಹೇಳಬೇಕು. ಜುಲೈ 3 ಚಿತ್ರ ತೆರೆಗೆ ಬರುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ನಟ ರಾಘವೇಂದ್ರ ರಾಜಕುಮಾರ್. 

ಅಣ್ಣನ ಚಿತ್ರ ಯಶಸ್ವಿಯಾಗಲೆಂದು ಯುವ ರಾಜಕುಮಾರ್ ಹಾರೈಸಿದರು. 

ನಿರ್ದೇಶಕ ಸಿಂಪಲ್ ಸುನಿ ಚಿತ್ರದ ಮೊದಲ ಪ್ರದರ್ಶನಕ್ಕೆ ಒಂದು ಆಡಿಯನ್ನೇ ಬುಕ್ ಮಾಡುವುದಾಗಿ ಹೇಳಿದರು. 

ನಟ ನವೀನ್ ಶಂಕರ್ ಕೂಡ "ಗ್ರಾಮಾಯಣ"ಕ್ಕೆ ಶುಭ ಕೋರಿದರು.

45
ವಿನಯ್‌ 9ನೇ ಸಿನಿಮಾ
Image Credit : Asianet News

ವಿನಯ್‌ 9ನೇ ಸಿನಿಮಾ

"ಗ್ರಾಮಾಯಣ" ಟ್ರೇಲರ್ ಚೆನ್ನಾಗಿ ಬಂದಿದೆ. ಚಿತ್ರ ಇನ್ನೂ ಚೆನ್ನಾಗಿ ಬಂದಿದೆ. ಇದು ನಮ್ಮ ಲಹರಿ ಸಂಸ್ಥೆ ನಿರ್ಮಾಣದ ಒಂಭತ್ತನೇ ಚಿತ್ರ. ವಿನಯ್ ರಾಜಕುಮಾರ್ ಅವರ ಅಭಿನಯದ ಒಂಭತ್ತನೇ ಚಿತ್ರವೂ ಹೌದು. ಒಂಭತ್ತು ನಮ್ಮ ಸಂಸ್ಥೆಗೆ ಅದೃಷ್ಟದ ಸಂಖ್ಯೆ.‌ ಇಂದು ಆಗಮಿಸಿದ ಎಲ್ಲ ಅತಿಥಿಗಳಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು. ನಿರ್ಮಾಪಕ ನವೀನ್ ಮನೋಹರ್ ಅವರು ಸಹ ಎಲ್ಲರಿಗೂ ಧನ್ಯವಾದ ಹೇಳಿದರು. 

ಲಹರಿ ಸಂಸ್ಥೆಯ ಸ್ಥಾಪಕ ಮನೋಹರ್ ನಾಯ್ಡು ಹಾಗೂ ಅವರ ಸಹೋದರ ರಮೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

55
ವಿನಯ್‌ ರಾಜ್‌ಕುಮಾರ್‌ ಹೇಳಿದ್ದೇನು?
Image Credit : Asianet News

ವಿನಯ್‌ ರಾಜ್‌ಕುಮಾರ್‌ ಹೇಳಿದ್ದೇನು?

ಈ ವೇದಿಕೆ ನೋಡುತ್ತಿದ್ದರೆ, ನನಗೆ ಚಿತ್ರದ ಆರಂಭದ ದಿನಗಳು ನೆನಪಾಗುತ್ತಿದೆ. ನಮ್ಮ ಚಿತ್ರ ಶುರುವಾಗಿ ಇಷ್ಟು ವರ್ಷ ಆಯಿತು ಅಂತ ಎಲ್ಲರೂ ಹೇಳುತ್ತಿದ್ದಾರೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು. ಲಹರಿ ಸಂಸ್ಥೆಯವರು ನಮ್ಮ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಅವರಿಗೆ, ನಿರ್ದೇಶಕರಿಗೆ, ಇಡೀ ತಂಡಕ್ಕೆ ಹಾಗೂ ಆಗಮಿಸಿದ ಪ್ರತಿಯೊಬ್ಬ ಗಣ್ಯರಿಗೂ ಧನ್ಯವಾದ ಎಂದು ಮಾತನಾಡಿದ ನಾಯಕ ವಿನಯ್ ರಾಜಕುಮಾರ್, ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಈ ಚಿತ್ರದಲ್ಲಿ ಮಾಡಿರುವುದಾಗಿ ಹೇಳಿದರು.

ಚಿತ್ರದ ಬಗ್ಗೆ ನಾನು ಹೇಳುವುದೇನು ಇಲ್ಲ. ಒಂದಂತೂ ಹೇಳುತ್ತೇನೆ. ಕೊಟ್ಟ ದುಡ್ಡಿಗೆ ಮೋಸವಾಗದ ಚಿತ್ರವಿದು. ಒಂದೊಳ್ಳೆ ಚಿತ್ರ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ,‌ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದು ಹೇಳಿದ ನಿರ್ದೇಶಕ ದೇವನೂರು ಚಂದ್ರು ತುಂಬಾ ಭಾವುಕರಾದರು.

ನಟಿ ಮೇಘ ಶೆಟ್ಟಿ ಕೂಡ ಎಲ್ಲರಿಗೂ ಧನ್ಯವಾದ ತಿಳಿಸಿದರು. ನಟ ಅರುಣ್ ಸಾಗರ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ಗೀತರಚನೆಕಾರ ಪ್ರಮೋದ್ ಮರವಂತೆ ಮುಂತಾದವರು "ಗ್ರಾಮಾಯಣ" ಚಿತ್ರದ ಕುರಿತು ಮಾತನಾಡಿದರು.

ವಿನಯ್ ರಾಜಕುಮಾರ್, ಮೇಘ ಶೆಟ್ಟಿ, ಲೂಸ್ ಮಾದ ಯೋಗೀಶ್, ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಬಲ ರಾಜವಾಡಿ, ಅಪರ್ಣ ವಸ್ತಾರೆ, ಸೀತಾ ಕೋಟೆ, ಪ್ರಶಾಂತ್ ಹೊನ್ನಾಳಿ, ಅವಿನಾಶ್ ರೈ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್
ಸಿನಿಮಾ

Latest Videos
Recommended Stories
Recommended image1
ನೆದರ್ಲೆಂಡ್ಸ್‌ ಚಳಿಯಲಿ ನಲಿದಾಡಿದ 'ಕಳ್ಳಪುಟ್ಟಿ' ಸ್ಪಂದನಾ ಸೋಮಣ್ಣ
Recommended image2
Actress Krishi Thapanda: ತನ್ನ ಮನೆಯೊಳಗಡೆ ಪ್ರಾಣಬಿಟ್ಟ ಗೆಳೆಯ; ಫಸ್ಟ್‌ ರಿಯಾಕ್ಷನ್ ಕೊಟ್ಟ ಕೃಷಿ ತಾಪಂಡ
Recommended image3
ರಿಷಬ್ ಶೆಟ್ಟಿ ಮನೆಯಲ್ಲಿ ಪೂಜೆ, ಗಮನಸೆಳೆದ ಕಾಂತರ ನಟನ ಕುಣಿತ ಭಜನೆ, ಪುತ್ರನ ಯಕ್ಷಗಾನ
Related Stories
Recommended image1
ವೈರಲ್ ಆಯ್ತು ವಿನಯ್ ರಾಜ್‌ಕುಮಾರ್ ಗ್ರಾಮಾಯಣ ಟೀಸರ್
Recommended image2
Now Playing
‘ಗ್ರಾಮಾಯಣ’ ಸಿನಿಮಾಗೆ ಚಾಲನೆ: ಹಳ್ಳಿ ಹೈದನಾಗಿ ಗಾಜನೂರ ಕುಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved