MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Junior Movie: ಗಾಲಿ ಜನಾರ್ಧನ್‌ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಎಲ್ಲಿಗೆ ಬಂತು? ಗುಡ್‌ನ್ಯೂಸ್‌ ಕೊಟ್ಟ ಕಿರೀಟಿ ತಂಡ!

Junior Movie: ಗಾಲಿ ಜನಾರ್ಧನ್‌ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಎಲ್ಲಿಗೆ ಬಂತು? ಗುಡ್‌ನ್ಯೂಸ್‌ ಕೊಟ್ಟ ಕಿರೀಟಿ ತಂಡ!

ಜನಾರ್ಧನ್‌ ರೆಡ್ಡಿ ಪುತ್ರ ಕಿರೀಟಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’. ಇತ್ತೀಚಿಗೆ ಬಿಡುಗಡೆ ದಿನಾಂಕ ಘೋಷಣೆ‌ ಮಾಡಿದ್ದ ಸಿನಿಮಾ ತಂಡವು ಈಗ ಮೊದಲ ಹಾಡು ರಿಲೀಸ್ ಮಾಡಿದೆ. ಕನ್ನಡ, ತೆಲುಗು ಭಾಷೆಯಲ್ಲಿ ಈ ಹಾಡು ರಿಲೀಸ್‌ ಆಗಿದೆ.  

2 Min read
Padmashree Bhat
Published : May 20 2025, 09:05 AM IST
Share this Photo Gallery
  • FB
  • TW
  • Linkdin
  • Whatsapp
16

ʼಜೂನಿಯರ್ʼ ಸಿನಿಮಾದ ಮೊದಲ ʼಲೆಟ್ಸ್ ಲಿವ್ ದಿಸ್ ಮೊಮೆಂಟ್ʼ ಎಂಬ ಲಿರಿಕಲ್ ವಿಡಿಯೋ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಹಾಡಿನ ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ಸಮಾಂಭಕ್ಕೆ ನಟ ರವಿಚಂದ್ರನ್, ಬಾಹುಬಲಿ ಹಾಗೂ RRR Movie ಖ್ಯಾತಿಯ ಕ್ಯಾಮರಾಮ್ಯಾನ್ ಕೆ ಕೆ ಸೆಂಥಿಲ್ ಕುಮಾರ್, ಸಂಗೀತ ಸಂಯೋಜಕಿ ದೇವಿ ಶ್ರೀ ಪ್ರಸಾದ್, ನಿರ್ಮಾಪಕ ರಜನಿ ಕೊರಾಪಾಟಿ, ನಿರ್ದೇಶಕ ರಾಧಾಕೃಷ್ಣ ಸೇರಿ ಚಿತ್ರತಂಡ ಸಾಕ್ಷಿಯಾಗಿತ್ತು.
 

26

ನಟ ರವಿಚಂದ್ರನ್ ಮಾತನಾಡಿ, “ರಾಧಾಕೃಷ್ಣ ಅವರ ಬಳಿ ಒಳ್ಳೆ ಗುಣವಿದೆ. ಅವರು ಕಥೆ ಹೇಳುವಾಗ ಕಿವಿಯಲ್ಲಿ ಪಿಸುಗುಟ್ಟಿದ ರೀತಿ ಇದೆ.‌ ಆ ಕಥೆ ಮನಸ್ಸು ನಮ್ಮ ತಟ್ಟುತ್ತದೆ. ಇದು ನಿಮಗೆಲ್ಲ ಜೂನಿಯರ್. ನನಗೆ ಮಾತ್ರ ಇದು ಮೈ ಜೂನಿಯರ್. ಇದೊಂದು ಥರ ಲಾಂಗ್ ಜರ್ನಿ. ಡಬ್ ಮಾಡುವಾಗ ಇದು ಹ್ಯಾಪಿ ಜರ್ನಿ ಎನಿಸಿತು. ಒಂದು ಸಿನಿಮಾ ಎಷ್ಟು ಟೈಮ್ ತೆಗೆದುಕೊಳ್ಳುತ್ತದೆ ಎನ್ನೋದು ಮುಖ್ಯವಲ್ಲ, ಬದಲಿಗೆ ಹೇಗೆ ಪ್ರೇಕ್ಷಕರನ್ನು ಕೂರಿಸುತ್ತದೆ ಎನ್ನೋದು ಮುಖ್ಯ. ಕಿರೀಟಿಗೆ ಕಥೆ ಆರಿಸಿಕೊಳ್ಳುವ ಧೈರ್ಯ ಇದೆ, ತಾನು ಹೀರೋ ಆಗಬೇಕು ಎನ್ನೋದಿದೆ. ಪಾತ್ರದ ಮೇಕಿಂಗ್ ಮೂಲಕ ಹೀರೋ ಆಗಬೇಕು ಎನ್ನುವುದು ಕಿರೀಟಿಯಲ್ಲಿ ಇದೆ.‌ ಹೊಸಬರು ಈ ರೀತಿ ಸ್ಟ್ರಿಪ್ ಆಯ್ಕೆ ಮಾಡಿಕೊಳ್ಳುವುದು ತುಂಬಾ ಕಡಿಮೆ” ಎಂದರು.

Related Articles

Related image1
ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಬರ್ತಿದಾರೆ, 'ಜೂನಿಯರ್' ರೆಡ್ಡಿಗೆ ಜಾಗ ಬಿಡಿ!
Related image2
14ನೇ ವಯಸ್ಸಲ್ಲಿ ಅಮ್ಮನನ್ನು ಕಳೆದುಕೊಂಡ ಕೆಜಿಎಫ್ ನಟಿ... ಬಿಚ್ಚಿಟ್ರು ಕಣ್ಣೀರ ಕಥೆ
36

ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಮಾತನಾಡಿ, “ಈ ಸಿನಿಮಾದ ಭಾಗವಾಗಿರುವುದು ಖುಷಿ ಕೊಟ್ಟಿದೆ. ಕಿರೀಟಿ ಒಳ್ಳೆ ಕಥೆ ಆಯ್ಕೆ ಮಾಡಿದ್ದಾರೆ.‌ ಎಮೋಷನಲ್ ಕಥೆಯಿದೆ” ಎಂದರು.
 

46

ನಟ ಕಿರೀಟಿ ಮಾತನಾಡಿ, “ ನಮ್ಮ ಸಿನಿಮಾ ಮೂರು ವರ್ಷ ತಡವಾಗಿದೆ. ಫೈಟ್ ಮಾಡುವಾಗುವಾಗ ನನಗೆ ಬೆನ್ನು ಇಂಜೂರಿ ಆಗಿದ್ದರಿಂದ ಲೇಟ್‌ ಆಗಿದೆ. ಅದು ಬಿಟ್ಟು ಬೇರೆ ಕಾರಣವಿಲ್ಲ. ನನಗೆ ರವಿಚಂದ್ರನ್ ಸರ್ ಜೊತೆ 25 ದಿನ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಇದು ನನ್ನ ಪುಣ್ಯ. ಅವರ ಜೊತೆ ತುಂಬಾ ಕಲಿತುಕೊಂಡೆ. ಶ್ರೀಲೀಲಾ, ಜೆನಿಲಿಯಾ ಚಿತ್ರದಲ್ಲಿ ಒಳ್ಳೆ ಮಾತ್ರ ಮಾಡಿದ್ದಾರೆ” ಎಂದು ಹೇಳಿದ್ದಾರೆ. 

56

ʼಲೆಟ್ಸ್ ಲೀವ್ ದಿಸ್ ಮೂವೆಂಟ್ʼ ಎಂದು ಕಿರೀಟಿ, ನಟಿ ಶ್ರೀಲೀಲಾ ಹೆಜ್ಜೆ ಹಾಕಿದ್ದಾರೆ. ದೇವಿಶ್ರೀ ಪ್ರಸಾದ್ ಸಂಗೀತ  ಒದಗಿಸಿರುವ ಹಾಡಿಗೆ ಕನ್ನಡದಲ್ಲಿ ಪವನ್ ಭಟ್ ಸಾಹಿತ್ಯ ಬರೆದಿದ್ದು,‌ ನಕುಲ್ ಅಭಯಂಕರ್ ಧ್ವನಿಯಾಗಿದ್ದಾರೆ.

66

ʼಮಾಯಾಬಜಾರ್ʼ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಜೂನಿಯರ್ ಸಿನಿಮಾ ತಯಾರಾಗಿದೆ.‌ ಕಿರೀಟಿ ಮೊದಲ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣಗೊಂಡಿದೆ. ಈ ಸಿನಿಮಾ ಜುಲೈ 18ರಂದು ರಿಲೀಸ್‌ ಆಗಲಿದೆ. 
 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್
ಬ್ಯಾಂಕ್ ಜನಾರ್ದನ್
ಮನರಂಜನಾ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved