- Home
- Entertainment
- Sandalwood
- Pinaka Movie: ಯಾವ ಸಿನಿಮಾದಲ್ಲೂ ಇರದ ಕ್ಲೈಮ್ಯಾಕ್ಸ್ 'ಪಿನಾಕ'ದಲ್ಲಿ ಇರುತ್ತೆ: Golden Star Ganesh
Pinaka Movie: ಯಾವ ಸಿನಿಮಾದಲ್ಲೂ ಇರದ ಕ್ಲೈಮ್ಯಾಕ್ಸ್ 'ಪಿನಾಕ'ದಲ್ಲಿ ಇರುತ್ತೆ: Golden Star Ganesh
Golden Star Ganesh Pinaka Kannada Movie: ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ, ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಮಕ್ಕಳ ಜೊತೆ ಜನ್ಮದಿನ ಆಚರಣೆ ಮಾಡಿದ 'ಗಣಿ'
ಖಾಸಗಿ ಶಾಲೆಯೊಂದರಲ್ಲಿ ಸಾವಿರಾರು ಮಕ್ಕಳೊಂದಿಗೆ ಗಣೇಶ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದರೊಟ್ಟಿಗೆ ‘ಪಿನಾಕ’ ಸಿನಿಮಾದ ಟೀಸರ್ ಸಹ ಅನಾವರಣವಾಯಿತು. ಗೋಲ್ಡನ್ ಮೆಗಾ ಸ್ಟಾರ್ ಅಭಿಮಾನಿಗಳು ಟೀಸರ್ ನೋಡಿ ಗಣೇಶ್ ಅವರ ಹೊಸ ಲುಕ್ಗೆ ಫಿದಾ ಆಗಿದ್ದಾರೆ. ಟೀಸರ್ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಿರ್ದೇಶಕ ಧನಂಜಯ್ ಏನಂದ್ರು?
ನಿರ್ದೇಶಕ ಧನಂಜಯ್ ಮಾತನಾಡಿ, “ನಾನು ಹಲವು ವರ್ಷಗಳಿಂದ ನೃತ್ಯ ನಿರ್ದೇಶಕನಾಗಿ ಚಿತ್ರರಂಗದಲ್ಲಿದ್ದೇನೆ. ಈ ಸಿನಿಮಾ ಮೂಲಕ ನಿರ್ದೇಶಕನಾಗಿ ಪಾದಾರ್ಪಣೆ ಮಾಡುತ್ತಿದ್ದೇನೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಗಣೇಶ್ ಅವರಿಗೆ ಧನ್ಯವಾದ. ಇನ್ನೂ, ನಾನು ಈವರೆಗೂ ಪಿನಾಕ ಸಿನಿಮಾ ಕರಿತು ಹೆಚ್ಚು ಮಾತನಾಡಿರಲಿಲ್ಲ. ಏಕೆಂದರೆ ನಾನು ಮಾತಾಡುವುದು ಬೇಡ ಕೆಲಸ ಮಾತನಾಡಲಿ ಎಂದು. ಈಗ ಟೀಸರ್ಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ಮನತುಂಬಿ ಬಂದಿದೆ. ಟೀಸರ್ ನಲ್ಲಿ ಹೆಚ್ಚು ಹೇಳಿಲ್ಲ. ಕೇವಲ 30% ಮಾತ್ರ ಚಿತ್ರದ ಕುರಿತು ಹೇಳಿದ್ದೇವೆ. ಚಿತ್ರದಲ್ಲಿ ಇನ್ನೂ ಬಹಳಷ್ಟಿದೆ. ಅಧ್ಯಾತ್ಮಿಕತೆಗೆ ಹೆಚ್ಚು ಒತ್ತು ಕೊಡಲಾಗಿದೆ. ಮುಂಬರುವ ಟ್ರೇಲರ್ನಲ್ಲೂ ಚಿತ್ರದ ಕುರಿತು ಇನ್ನಷ್ಟು ತಿಳಿಸುವುದಾಗಿ ಹೇಳಿದರು.
ಗೋಲ್ಡನ್ ಸ್ಟಾರ್ ಗಣೇಶ್ ಏನಂದ್ರು?
ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, "ಮುಂಗಾರು ಮಳೆ ಸಿನಿಮಾದಿಂದ ನಾಯಕನಾಗಿ ಶುರುವಾದ ನನ್ನ ಸಿನಿ ಜರ್ನಿ ಈ ಹಂತ ತಲುಪಲು ದೇವರ, ತಂದೆ - ತಾಯಿ ಹಾಗೂ ಅಭಿಮಾನಿಗಳ ಆಶೀರ್ವಾದವೇ ಕಾರಣ. ಇನ್ನೂ, ನನ್ನ ಮಕ್ಕಳು " ಕಾರ್ತಿಕೇಯ 2" ಸಿನಿಮಾವನ್ನು ನೋಡಿದಾಗ, ನೀವು ಈತರಹದ ಚಿತ್ರದಲ್ಲಿ ಅಭಿನಯಿಸಬೇಕೆಂದು ಹೇಳುತ್ತಿದ್ದರು. ನಾನು ಶಿವ ಭಕ್ತ. "ಪಿನಾಕ" ಸಹ ಶಿವನ ಕುರಿತಾದ ಸಿನಿಮಾ. ಇಂತಹ ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ. ಈ ಚಿತ್ರದ ಕುರಿತು ನಿರ್ಮಾಪಕರು ನನ್ನ ಬಳಿ ಮಾತನಾಡಿದಾಗ, ಈ ಕಥೆ ಬಹಳ ಬಜೆಟ್ ಕೇಳುತ್ತದೆ. ನಿಮಗೆ ಹೊರೆಯಾಗಬಾರದು ಎಂದು ಹೇಳಿದೆ. ಅವರು ಇಲ್ಲ ಕಥೆ ಕೇಳುವ ಬಜೆಟ್ ಹಾಕಲು ನಾವು ಸಿದ್ದರಿದ್ದೇವೆ ಎಂದು ಹೇಳಿದರು.
ಈ ಚಿತ್ರದ ಚಿತ್ರೀಕರಣದಲ್ಲಿ ಸಾವಿರಾರು ಜನರು ಭಾಗಿಯಾಗುತ್ತಿದ್ದರು. ಕ್ಲೈಮ್ಯಾಕ್ಸ್ ಅಂತು ನಾನು ಈವರೆಗೂ ಯಾವ ಚಿತ್ರದಲ್ಲೂ ನೋಡಿರದ ಕ್ಲೈಮ್ಯಾಕ್ಸ್ ಎನ್ನಬಹುದು. 12 ನಿಮಿಷಗಳ ಕ್ಲೈಮ್ಯಾಕ್ಸ್ ಗೆ 22 ದಿನಗಳ ಚಿತ್ರೀಕರಣ ಮಾಡಿದ್ದೇವೆ. "ಪಿನಾಕ", ಚಾರುಕೇಶ ರಾಜನ ಕಥೆ. ಈ ಚಿತ್ರ ಚೆನ್ನಾಗಿ ಮೂಡಿಬರಲು ತಂಡದ ಸಹಕಾರವೇ ಕಾರಣ. ಈ ಚಿತ್ರದಲ್ಲಿ ನಟಿಸಿರುವ ಶ್ರೀನಿವಾಸಮೂರ್ತಿ, ರಂಗಾಯಣ ರಘು, ಸಾಧುಕೋಕಿಲ ಅವರಂತಹ ಹಿರಿಯ ಕಲಾವಿದರಿಂದ ಸಾಕಷ್ಟು ಕಲಿತಿದ್ದೇನೆ. ಅಕ್ಟೋಬರ್ 2ರಂದು ತೆರೆಗೆ ಬರುತ್ತಿರುವ ಈ ಚಿತ್ರ ನೋಡುಗರಿಗೆ ಮನೋರಂಜನೆಯ ರಸದೌತಣ ನೀಡಲಿದೆ ಎಂದರು.
ಪೌರಾಣಿಕ ಹಿನ್ನೆಲೆಯಿರುವ ಸಿನಿಮಾ
ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ರಾಜೇಶ್ ಮಾತನಾಡಿ, ‘ಗಣೇಶ್ ಜೊತೆಗೆ ಸಿನಿಮಾ ಮಾಡಬೇಕು ಎಂಬುದು ನನ್ನ ಹಾಗೂ ನನ್ನ ಸಹೋದರನ (ವಿಶ್ವಪ್ರಸಾದ್) ಆಸೆಯಾಗಿತ್ತು. ನಮ್ಮ ಸಂಸ್ಥೆಯ "ಕಾರ್ತಿಕೇಯ 2" ಚಿತ್ರದ ಬಗ್ಗೆ ಗಣೇಶ್ ಅವರು ತುಂಬಾ ಮೆಚ್ಚುಗೆಯ ಮಾತುಗಳಾಡಿದರು. ಅವರ ಮಗ ವಿಹಾನ್ಗೂ ಆ ಚಿತ್ರ ಬಹಳ ಇಷ್ಟವಾಯಿತಂತೆ. ಹಾಗಾಗಿ ನಾವು ಸಹ ಪೌರಾಣಿಕ ಹಿನ್ನೆಲೆಯಿರುವ, ಶಿವನ ಕುರಿತಾದ ಕಥಾಹಂದರವಿರುವ ಈ ಕಥೆ ಆಯ್ಕೆ ಮಾಡಿಕೊಂಡೆವು. ಚಿತ್ರತಂಡದ ಸದಸ್ಯರ ಶ್ರಮದಿಂದ "ಪಿನಾಕ" ಚಿತ್ರ ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಜನರಿಗೂ ಈ ಚಿತ್ರ ಮೆಚ್ಚುಗೆಯಾಗುವ ಭರವಸೆ ಇದೆ ಎಂದರು. ವಿಜಯ ರಾಜೇಶ್ ಅವರು ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದಾರೆ. ಸಹ ನಿರ್ಮಾಪಕಿ ಕೃತಿ ಪ್ರಸಾದ್ ಅವರು ಮಾತನಾಡಿ, ಉತ್ತಮ ಚಿತ್ರ ಮೂಡಿಬರಲು ಸಹಕಾರ ನೀಡಿದ "ಪಿನಾಕ" ಚಿತ್ರತಂಡದವರಿಗೆ ಧನ್ಯವಾದ ಹೇಳಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

