MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಎದೆ ತುಂಬಿ ಹಾಡುವ ಗಾಯಕ ಎಸ್ ಪಿ ಬಿ ಅವರ ಬಗ್ಗೆ ನಿಮಗೆ ತಿಳಿಯದ ವಿಚಾರಗಳು!

ಎದೆ ತುಂಬಿ ಹಾಡುವ ಗಾಯಕ ಎಸ್ ಪಿ ಬಿ ಅವರ ಬಗ್ಗೆ ನಿಮಗೆ ತಿಳಿಯದ ವಿಚಾರಗಳು!

ಎಸ್ ಪಿ ಬಾಲಸುಬ್ರಮಣ್ಯಂ ಈ ಹೆಸರು ಕಿವಿಗೆ ಬಿದ್ದ ಕೇಳಿದ ಕೂಡಲೇ ಯಾರೇ ಆಗಲಿ ಒಂದು ಕ್ಷಣ ರೋಮಾಂಚಿತರಾಗುತ್ತಾರೆ. ಭಾರತೀಯ ಚಿತ್ರರಂಗದ ಅದೆಷ್ಟೋ ನಟರ ಅಭಿನಯದಲ್ಲಿ ತಮ್ಮ ಧ್ವನಿಯ ಮೂಲಕ ಬೆರೆತಿದ್ದ ಅಪರೂಪದ ಕಲಾವಿದ.ಎಲ್ಲರೂ ಪ್ರೀತಿಯಿಂದ ಕರೆಯುವ ಈ ಎಸ್ ಪಿ ಬಿ ಗಾಯಕನಾಗಿ, ನಟನಾಗಿ ಮತ್ತು ಸಂಗೀತ ನಿರ್ದೇಶಕನಾಗಿ ಬಹುಭಾಷೆಯಲ್ಲಿ ಗುರುತಿಸಿಕೊಂಡಿದ್ದಾರೆ.ಇವರ ಸಾಧನೆಗಳು ಅಪೂರ್ವ ಮತ್ತು ಅವರ್ಣನೀಯ.ದೇಶ ಕಂಡ ಶ್ರೇಷ್ಠ ಸಂಗೀತ ದಿಗ್ಗಜನಿಗೆ ಹುಟ್ಟು ಹಬ್ಬದ ಶುಭಾಶಯಗಳು. 

2 Min read
Author : Suvarna News | Asianet News
| Updated : Sep 25 2020, 01:48 PM IST
Share this Photo Gallery
  • FB
  • TW
  • Linkdin
  • Whatsapp
110
<p>ಬಾಲಸುಬ್ರಹ್ಮಣ್ಯಂ ಅವರು 1946,ಜೂನ್ 4ರಂದು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು.&nbsp;</p>

<p>ಬಾಲಸುಬ್ರಹ್ಮಣ್ಯಂ ಅವರು 1946,ಜೂನ್ 4ರಂದು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು.&nbsp;</p>

ಬಾಲಸುಬ್ರಹ್ಮಣ್ಯಂ ಅವರು 1946,ಜೂನ್ 4ರಂದು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. 

210
<p>ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ.ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿ ಯವರೇ ಅವರಿಗೆ ಇವರಿಗೆ ಪ್ರೇರಣೆ. ಹಾಡುವುದನ್ನು,ಹಾರ್ಮೋನಿಯಂ,ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು.ಆನಂತರ ಶಾಸ್ತ್ರೀಯ ಸಂಗೀತ ಕಲಿತು ಅನೇಕರಿಗೆ ಮಾದರಿಯಾದರು.&nbsp;</p>

<p>ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ.ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿ ಯವರೇ ಅವರಿಗೆ ಇವರಿಗೆ ಪ್ರೇರಣೆ. ಹಾಡುವುದನ್ನು,ಹಾರ್ಮೋನಿಯಂ,ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು.ಆನಂತರ ಶಾಸ್ತ್ರೀಯ ಸಂಗೀತ ಕಲಿತು ಅನೇಕರಿಗೆ ಮಾದರಿಯಾದರು.&nbsp;</p>

ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ.ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿ ಯವರೇ ಅವರಿಗೆ ಇವರಿಗೆ ಪ್ರೇರಣೆ. ಹಾಡುವುದನ್ನು,ಹಾರ್ಮೋನಿಯಂ,ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು.ಆನಂತರ ಶಾಸ್ತ್ರೀಯ ಸಂಗೀತ ಕಲಿತು ಅನೇಕರಿಗೆ ಮಾದರಿಯಾದರು. 

310
<p>ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರಾಗಿದ್ದಾಗ ಬಂದ ಎಸ್ ಪಿಬಿ ಅವರು ಮಾಧುರ್ಯದ ಅಲೆಯಾಗಿ ಇಂದಿಗೂ ಹರಿಯುತ್ತಿದ್ದಾರೆ.&nbsp;</p>

<p>ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರಾಗಿದ್ದಾಗ ಬಂದ ಎಸ್ ಪಿಬಿ ಅವರು ಮಾಧುರ್ಯದ ಅಲೆಯಾಗಿ ಇಂದಿಗೂ ಹರಿಯುತ್ತಿದ್ದಾರೆ.&nbsp;</p>

ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರಾಗಿದ್ದಾಗ ಬಂದ ಎಸ್ ಪಿಬಿ ಅವರು ಮಾಧುರ್ಯದ ಅಲೆಯಾಗಿ ಇಂದಿಗೂ ಹರಿಯುತ್ತಿದ್ದಾರೆ. 

410
<p>ಎಸ್‍ಪಿಬಿ ಗಾಯಕರಾಗಿ ಸರಿಸುಮಾರು ನಲವತ್ತು ಸಾವಿರ ಹಾಡುಗಳನ್ನ ಹಾಡಿದ್ದಾರೆ ದಾಖಲೆ ಬರೆದಿರುವ ಇವರು ಕನ್ನಡ ,ತಮಿಳು, ತೆಲುಗು, ಮಲಯಾಳಂ,ಹಿಂದಿ,ತುಳು,ಕೊಂಕಣಿ,ಒರಿಯಾ,ಬೆಂಗಾಲಿ,ಮರಾಠಿ,ಪಂಜಾಬಿ ಸೇರಿದಂತೆ ಹದಿನೈದು ಭಾಷೆಗಳಲ್ಲಿ ಹಾಡಿದ್ದಾರೆ. ಎಸ್‍ಪಿಬಿ ಚಿತ್ರ ಗೀತೆಗಳನ್ನೂ ಮಾತ್ರವಲ್ಲ ಸಿನಿಮಾ ಹಾಡುಗಳ ಜೊತೆ ಜೊತೆಗೆ &nbsp;ದೇವರ ನಾಮ,ಆಲ್ಬಂ ಹಾಡುಗಳು ,ಭಾವ ಗೀತೆ,ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಗೀತೆಗಳನ್ನ ಹಾಡಿದ್ದಾರೆ.</p>

<p>ಎಸ್‍ಪಿಬಿ ಗಾಯಕರಾಗಿ ಸರಿಸುಮಾರು ನಲವತ್ತು ಸಾವಿರ ಹಾಡುಗಳನ್ನ ಹಾಡಿದ್ದಾರೆ ದಾಖಲೆ ಬರೆದಿರುವ ಇವರು ಕನ್ನಡ ,ತಮಿಳು, ತೆಲುಗು, ಮಲಯಾಳಂ,ಹಿಂದಿ,ತುಳು,ಕೊಂಕಣಿ,ಒರಿಯಾ,ಬೆಂಗಾಲಿ,ಮರಾಠಿ,ಪಂಜಾಬಿ ಸೇರಿದಂತೆ ಹದಿನೈದು ಭಾಷೆಗಳಲ್ಲಿ ಹಾಡಿದ್ದಾರೆ. ಎಸ್‍ಪಿಬಿ ಚಿತ್ರ ಗೀತೆಗಳನ್ನೂ ಮಾತ್ರವಲ್ಲ ಸಿನಿಮಾ ಹಾಡುಗಳ ಜೊತೆ ಜೊತೆಗೆ &nbsp;ದೇವರ ನಾಮ,ಆಲ್ಬಂ ಹಾಡುಗಳು ,ಭಾವ ಗೀತೆ,ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಗೀತೆಗಳನ್ನ ಹಾಡಿದ್ದಾರೆ.</p>

ಎಸ್‍ಪಿಬಿ ಗಾಯಕರಾಗಿ ಸರಿಸುಮಾರು ನಲವತ್ತು ಸಾವಿರ ಹಾಡುಗಳನ್ನ ಹಾಡಿದ್ದಾರೆ ದಾಖಲೆ ಬರೆದಿರುವ ಇವರು ಕನ್ನಡ ,ತಮಿಳು, ತೆಲುಗು, ಮಲಯಾಳಂ,ಹಿಂದಿ,ತುಳು,ಕೊಂಕಣಿ,ಒರಿಯಾ,ಬೆಂಗಾಲಿ,ಮರಾಠಿ,ಪಂಜಾಬಿ ಸೇರಿದಂತೆ ಹದಿನೈದು ಭಾಷೆಗಳಲ್ಲಿ ಹಾಡಿದ್ದಾರೆ. ಎಸ್‍ಪಿಬಿ ಚಿತ್ರ ಗೀತೆಗಳನ್ನೂ ಮಾತ್ರವಲ್ಲ ಸಿನಿಮಾ ಹಾಡುಗಳ ಜೊತೆ ಜೊತೆಗೆ  ದೇವರ ನಾಮ,ಆಲ್ಬಂ ಹಾಡುಗಳು ,ಭಾವ ಗೀತೆ,ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಗೀತೆಗಳನ್ನ ಹಾಡಿದ್ದಾರೆ.

510
<p>ಶಂಕರಾಭರಣಂ,ಪಂಚಾಕ್ಷರಿ ಗವಾಯಿ,ಸಾಗರ ಸಂಗಮಂ,ಸ್ವಾತಿ ಮುತ್ಯಂ,ರುದ್ರವೀಣ,ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇಷ್ಟೇ ಅಲ್ಲದೆ ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ.</p>

<p>ಶಂಕರಾಭರಣಂ,ಪಂಚಾಕ್ಷರಿ ಗವಾಯಿ,ಸಾಗರ ಸಂಗಮಂ,ಸ್ವಾತಿ ಮುತ್ಯಂ,ರುದ್ರವೀಣ,ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇಷ್ಟೇ ಅಲ್ಲದೆ ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ.</p>

ಶಂಕರಾಭರಣಂ,ಪಂಚಾಕ್ಷರಿ ಗವಾಯಿ,ಸಾಗರ ಸಂಗಮಂ,ಸ್ವಾತಿ ಮುತ್ಯಂ,ರುದ್ರವೀಣ,ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇಷ್ಟೇ ಅಲ್ಲದೆ ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ.

610
<p>&nbsp;ಒಮ್ಮೆ ಬಾಲು ಅವರು ತಮಿಳು,ತೆಲುಗು ಭಾಷೆಯಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಹಾಡಿದ್ದರು,ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಹಾಡಿದ್ದರೆ,ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು.ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆಗಿದ್ದ ಸಾಕ್ಷಿ.&nbsp;</p>

<p>&nbsp;ಒಮ್ಮೆ ಬಾಲು ಅವರು ತಮಿಳು,ತೆಲುಗು ಭಾಷೆಯಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಹಾಡಿದ್ದರು,ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಹಾಡಿದ್ದರೆ,ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು.ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆಗಿದ್ದ ಸಾಕ್ಷಿ.&nbsp;</p>

 ಒಮ್ಮೆ ಬಾಲು ಅವರು ತಮಿಳು,ತೆಲುಗು ಭಾಷೆಯಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಹಾಡಿದ್ದರು,ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಹಾಡಿದ್ದರೆ,ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು.ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆಗಿದ್ದ ಸಾಕ್ಷಿ. 

710
<p>ಬಹುತೇಕ ನಟರಿಗೆ ಧ್ವನಿಯಾಗಿದ್ದ ಎಸ್ಪಿಬಿ ಅವರಿಗೆ ಕರುನಾಡಿನ ಕಾಲಪರ್ವತ ಡಾ. ರಾಜ್ ಕುಮಾರ್ ಅವರು ಧ್ವನಿಯಾಗಿದ್ದರು ಎನ್ನುವುದು ಮತ್ತೊಂದು ವಿಶೇಷ.&nbsp;</p>

<p>ಬಹುತೇಕ ನಟರಿಗೆ ಧ್ವನಿಯಾಗಿದ್ದ ಎಸ್ಪಿಬಿ ಅವರಿಗೆ ಕರುನಾಡಿನ ಕಾಲಪರ್ವತ ಡಾ. ರಾಜ್ ಕುಮಾರ್ ಅವರು ಧ್ವನಿಯಾಗಿದ್ದರು ಎನ್ನುವುದು ಮತ್ತೊಂದು ವಿಶೇಷ.&nbsp;</p>

ಬಹುತೇಕ ನಟರಿಗೆ ಧ್ವನಿಯಾಗಿದ್ದ ಎಸ್ಪಿಬಿ ಅವರಿಗೆ ಕರುನಾಡಿನ ಕಾಲಪರ್ವತ ಡಾ. ರಾಜ್ ಕುಮಾರ್ ಅವರು ಧ್ವನಿಯಾಗಿದ್ದರು ಎನ್ನುವುದು ಮತ್ತೊಂದು ವಿಶೇಷ. 

810
<p>ನಕ್ಕರೆ ಅದೇ ಸ್ವರ್ಗ ಎಂಬ ಹಾಸ್ಯಪ್ರಧಾನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹಾಡುಗಾರನಾಗಿ ಪರಿಚಿತರಾದವರು ಬಾಲಸುಬ್ರಮಣ್ಯಂ ಅವರು.ವಿಶೇಷವೆಂದರೆ ಆಗ ಅವರಿಗೆ ಕನ್ನಡ ಬಗ್ಗೆ ಎಳ್ಳಷ್ಟೂ ಮಾಹಿತಿಯಿರಲಿಲ್ಲ.ಆ ಸಿನಿಮಾದ ಸಂಗೀತ ನಿರ್ದೇಶಕರಾದ ರಂಗರಾಯರು ನಾವು ಹೇಳಿಕೊಡ್ತೇವೆ ಅಂತ ಧೈರ್ಯ ತುಂಬಿದ್ದರಿಂದ ಈಗಲೂ ಎಸ್ಪಿಬಿ ಅವರ ದನಿಯಲ್ಲಿ ಹಾಡುಗಳನ್ನು ಕೇಳುವ ಸೌಭಾಗ್ಯ ಕನ್ನಡಿಗರದ್ದಾಗಿದೆ.&nbsp;</p>

<p>ನಕ್ಕರೆ ಅದೇ ಸ್ವರ್ಗ ಎಂಬ ಹಾಸ್ಯಪ್ರಧಾನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹಾಡುಗಾರನಾಗಿ ಪರಿಚಿತರಾದವರು ಬಾಲಸುಬ್ರಮಣ್ಯಂ ಅವರು.ವಿಶೇಷವೆಂದರೆ ಆಗ ಅವರಿಗೆ ಕನ್ನಡ ಬಗ್ಗೆ ಎಳ್ಳಷ್ಟೂ ಮಾಹಿತಿಯಿರಲಿಲ್ಲ.ಆ ಸಿನಿಮಾದ ಸಂಗೀತ ನಿರ್ದೇಶಕರಾದ ರಂಗರಾಯರು ನಾವು ಹೇಳಿಕೊಡ್ತೇವೆ ಅಂತ ಧೈರ್ಯ ತುಂಬಿದ್ದರಿಂದ ಈಗಲೂ ಎಸ್ಪಿಬಿ ಅವರ ದನಿಯಲ್ಲಿ ಹಾಡುಗಳನ್ನು ಕೇಳುವ ಸೌಭಾಗ್ಯ ಕನ್ನಡಿಗರದ್ದಾಗಿದೆ.&nbsp;</p>

ನಕ್ಕರೆ ಅದೇ ಸ್ವರ್ಗ ಎಂಬ ಹಾಸ್ಯಪ್ರಧಾನ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹಾಡುಗಾರನಾಗಿ ಪರಿಚಿತರಾದವರು ಬಾಲಸುಬ್ರಮಣ್ಯಂ ಅವರು.ವಿಶೇಷವೆಂದರೆ ಆಗ ಅವರಿಗೆ ಕನ್ನಡ ಬಗ್ಗೆ ಎಳ್ಳಷ್ಟೂ ಮಾಹಿತಿಯಿರಲಿಲ್ಲ.ಆ ಸಿನಿಮಾದ ಸಂಗೀತ ನಿರ್ದೇಶಕರಾದ ರಂಗರಾಯರು ನಾವು ಹೇಳಿಕೊಡ್ತೇವೆ ಅಂತ ಧೈರ್ಯ ತುಂಬಿದ್ದರಿಂದ ಈಗಲೂ ಎಸ್ಪಿಬಿ ಅವರ ದನಿಯಲ್ಲಿ ಹಾಡುಗಳನ್ನು ಕೇಳುವ ಸೌಭಾಗ್ಯ ಕನ್ನಡಿಗರದ್ದಾಗಿದೆ. 

910
<p>ಕನ್ನಡದ ಎಲ್ಲಾ ಗಾಯಕರಿಗೆ, ಸಂಗೀತ ನಿರ್ದೇಶಕರಿಗೆ ಹಂಸಲೇಖ ಮಾನಸ ಗುರುಗಳಾದ್ರೆ &nbsp;ನಾದಬ್ರಹ್ಮ ಹಂಸಲೇಖ ಅವರಿಗೆ ಮಾತ್ರ ಎಸ್ ಪಿ ಬಾಲಸುಬ್ರಮಣ್ಯಂ ಅವರು ಸತ್ಯಪೀಠ ದರ್ಶಿತರು ಇದನ್ನು ಖುದ್ದು ಹಂಸಲೇಖ ಅವರೇ ಅನೇಕ ಕಾರ್ಯಕ್ರಮಗಳಲ್ಲಿ ಹೇಳಿಕೊಂಡಿದ್ದಾರೆ.&nbsp;</p>

<p>ಕನ್ನಡದ ಎಲ್ಲಾ ಗಾಯಕರಿಗೆ, ಸಂಗೀತ ನಿರ್ದೇಶಕರಿಗೆ ಹಂಸಲೇಖ ಮಾನಸ ಗುರುಗಳಾದ್ರೆ &nbsp;ನಾದಬ್ರಹ್ಮ ಹಂಸಲೇಖ ಅವರಿಗೆ ಮಾತ್ರ ಎಸ್ ಪಿ ಬಾಲಸುಬ್ರಮಣ್ಯಂ ಅವರು ಸತ್ಯಪೀಠ ದರ್ಶಿತರು ಇದನ್ನು ಖುದ್ದು ಹಂಸಲೇಖ ಅವರೇ ಅನೇಕ ಕಾರ್ಯಕ್ರಮಗಳಲ್ಲಿ ಹೇಳಿಕೊಂಡಿದ್ದಾರೆ.&nbsp;</p>

ಕನ್ನಡದ ಎಲ್ಲಾ ಗಾಯಕರಿಗೆ, ಸಂಗೀತ ನಿರ್ದೇಶಕರಿಗೆ ಹಂಸಲೇಖ ಮಾನಸ ಗುರುಗಳಾದ್ರೆ  ನಾದಬ್ರಹ್ಮ ಹಂಸಲೇಖ ಅವರಿಗೆ ಮಾತ್ರ ಎಸ್ ಪಿ ಬಾಲಸುಬ್ರಮಣ್ಯಂ ಅವರು ಸತ್ಯಪೀಠ ದರ್ಶಿತರು ಇದನ್ನು ಖುದ್ದು ಹಂಸಲೇಖ ಅವರೇ ಅನೇಕ ಕಾರ್ಯಕ್ರಮಗಳಲ್ಲಿ ಹೇಳಿಕೊಂಡಿದ್ದಾರೆ. 

1010
<p>ಎಸ್ಪಿಬಿ ಅವರು ಗಾಯಕ, ನಟ , ಸಂಗೀತ ನಿರ್ದೇಶಕ ಅಷ್ಟೇ ಅಲ್ಲ ನಿರೂಪಕರಾಗಿಯೂ ಸೈ ಎನಿಸಿಕೊಂಡಿದ್ದಾರೆ.ತೆಲುಗಿನಲ್ಲಿ ಸ್ವರಾಭಿಷೇಕಂ ಮತ್ತು ಕನ್ನಡದಲ್ಲಿ ಎದೆತುಂಬಿ ಹಾಡುವೆನು ಎಂಬ ಎರಡೂ ಅದ್ಭುತ ಕಾರ್ಯಕಮಗಳನ್ನು ಸಂಗೀತ ಪ್ರಿಯರಿಗೆ ನೀಡಿದವರು. ಇವರನ್ನು ಪಡೆದ ನಾವೇ ಧನ್ಯ ಎಂದು ಹೇಳುವ ಲಕ್ಷಾಂತರ ಕೇಳುಗರ ವತಿಯಿಂದ ಈ ಕಲಾಶಿಖರಕ್ಕೆ ಹುಟ್ಟು ಹಬ್ಬದ ಶುಭಾಶಯಗಳು. ಹೀಗೆ ಇನ್ನಷ್ಟು ಕಾಲ ತಮ್ಮ ಸುಮಧುರ ಕಂಠದಿಂದ ನಮ್ಮೆಲ್ಲರನ್ನು ರಂಜಿಸಲಿ ಎನ್ನುವುದೇ ಆಶಯ.</p>

<p>ಎಸ್ಪಿಬಿ ಅವರು ಗಾಯಕ, ನಟ , ಸಂಗೀತ ನಿರ್ದೇಶಕ ಅಷ್ಟೇ ಅಲ್ಲ ನಿರೂಪಕರಾಗಿಯೂ ಸೈ ಎನಿಸಿಕೊಂಡಿದ್ದಾರೆ.ತೆಲುಗಿನಲ್ಲಿ ಸ್ವರಾಭಿಷೇಕಂ ಮತ್ತು ಕನ್ನಡದಲ್ಲಿ ಎದೆತುಂಬಿ ಹಾಡುವೆನು ಎಂಬ ಎರಡೂ ಅದ್ಭುತ ಕಾರ್ಯಕಮಗಳನ್ನು ಸಂಗೀತ ಪ್ರಿಯರಿಗೆ ನೀಡಿದವರು. ಇವರನ್ನು ಪಡೆದ ನಾವೇ ಧನ್ಯ ಎಂದು ಹೇಳುವ ಲಕ್ಷಾಂತರ ಕೇಳುಗರ ವತಿಯಿಂದ ಈ ಕಲಾಶಿಖರಕ್ಕೆ ಹುಟ್ಟು ಹಬ್ಬದ ಶುಭಾಶಯಗಳು. ಹೀಗೆ ಇನ್ನಷ್ಟು ಕಾಲ ತಮ್ಮ ಸುಮಧುರ ಕಂಠದಿಂದ ನಮ್ಮೆಲ್ಲರನ್ನು ರಂಜಿಸಲಿ ಎನ್ನುವುದೇ ಆಶಯ.</p>

ಎಸ್ಪಿಬಿ ಅವರು ಗಾಯಕ, ನಟ , ಸಂಗೀತ ನಿರ್ದೇಶಕ ಅಷ್ಟೇ ಅಲ್ಲ ನಿರೂಪಕರಾಗಿಯೂ ಸೈ ಎನಿಸಿಕೊಂಡಿದ್ದಾರೆ.ತೆಲುಗಿನಲ್ಲಿ ಸ್ವರಾಭಿಷೇಕಂ ಮತ್ತು ಕನ್ನಡದಲ್ಲಿ ಎದೆತುಂಬಿ ಹಾಡುವೆನು ಎಂಬ ಎರಡೂ ಅದ್ಭುತ ಕಾರ್ಯಕಮಗಳನ್ನು ಸಂಗೀತ ಪ್ರಿಯರಿಗೆ ನೀಡಿದವರು. ಇವರನ್ನು ಪಡೆದ ನಾವೇ ಧನ್ಯ ಎಂದು ಹೇಳುವ ಲಕ್ಷಾಂತರ ಕೇಳುಗರ ವತಿಯಿಂದ ಈ ಕಲಾಶಿಖರಕ್ಕೆ ಹುಟ್ಟು ಹಬ್ಬದ ಶುಭಾಶಯಗಳು. ಹೀಗೆ ಇನ್ನಷ್ಟು ಕಾಲ ತಮ್ಮ ಸುಮಧುರ ಕಂಠದಿಂದ ನಮ್ಮೆಲ್ಲರನ್ನು ರಂಜಿಸಲಿ ಎನ್ನುವುದೇ ಆಶಯ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
YASH: 'ವಿಷಕಾರಿ' ಚಿತ್ರದಲ್ಲಿ ತಮ್ಮ ಇಮೇಜನ್ನೇ ಪಣಕ್ಕಿಟ್ಟ ಯಶ್..? ಕಾರಿನೊಳಗಿನ 'ಆ' ದೃಶ್ಯಕ್ಕೆ ಎದ್ದಿದೆ ಅಪಸ್ವರ..!
Recommended image2
ರಿಷಬ್ ಶೆಟ್ಟಿ 'ಕಾಂತಾರ-1' ಆ ಕಪ್ಪು ಸುಂದರಿಯನ್ನು ಕನ್ನಡ ಮಣ್ಣಿಗೆ ತರುತ್ತಾ? ನನಸಾಗುತ್ತಾ ಹೊಂಬಾಳೆ ಕಸನು..?
Recommended image3
ಎವಿಆರ್ ರೆಡ್ಡಿ ಕನ್ನಡ ನಟಿ ವಿವಾದ, ಹಣ ಕೊಟ್ಟಿದ್ದಕ್ಕೆ ದಾಖಲೆ, ಇಬ್ಬರು ಜೊತೆಗಿರೋ ತೀರಾ ಖಾಸಗಿ ಫೋಟೋ ಲೀಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved