MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಕೈಯಲ್ಲಿ ಕೊಡಲಿ ಹಿಡಿದು 'ಲ್ಯಾಂಡ್‌ಲಾರ್ಡ್‌' ಆದ ದುನಿಯಾ ವಿಜಯ್: ಫ್ಯಾನ್ಸ್‌ಗೆ ಮನವಿ ಮಾಡಿದ್ದೇನು?

ಕೈಯಲ್ಲಿ ಕೊಡಲಿ ಹಿಡಿದು 'ಲ್ಯಾಂಡ್‌ಲಾರ್ಡ್‌' ಆದ ದುನಿಯಾ ವಿಜಯ್: ಫ್ಯಾನ್ಸ್‌ಗೆ ಮನವಿ ಮಾಡಿದ್ದೇನು?

ಪ್ರತಿ ವರ್ಷದಂತೆ ಈ ಬಾರಿ ದುನಿಯಾ ವಿಜಯ್‌ ಅಭಿಮಾನಿಗಳ ಜತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ‘ಹುಟ್ಟುಹಬ್ಬದಂದು ಜಡೇಶ್ ಸಿನಿಮಾ ನಿರ್ದೇಶನದ ಚಿತ್ರದ ಚಿತ್ರೀಕರಣದಲ್ಲಿರುತ್ತೇನೆ.‌ ಹೀಗಾಗಿ ನಿಮ್ಮ ಜತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ’ ಎಂದು ದುನಿಯಾ ವಿಜಯ್‌ ಹೇಳಿದ್ದಾರೆ.

1 Min read
Govindaraj S
Published : Jan 20 2025, 05:35 PM IST
Share this Photo Gallery
  • FB
  • TW
  • Linkdin
  • Whatsapp
16

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಇಂದು (ಜ.20) 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಜಡೇಶ್‌ಕುಮಾರ್‌ ಹಂಪಿ ನಿರ್ದೇಶನದ, ವಿಜಯ್‌ ನಟನೆಯ ಹೊಸ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಲ್ಯಾಂಡ್‌ಲಾರ್ಡ್‌’ ಎಂದು ಹೆಸರಿಡಲಾಗಿದೆ.
 

26

ಈ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಹಾಗೂ ದುನಿಯಾ ವಿಜಯ್‌ ಪುತ್ರಿ ರಿತನ್ಯಾ ನಟಿಸುತ್ತಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿ ದುನಿಯಾ ವಿಜಯ್‌ ಅಭಿಮಾನಿಗಳ ಜತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ‘ಹುಟ್ಟುಹಬ್ಬದಂದು ಜಡೇಶ್ ಸಿನಿಮಾ ನಿರ್ದೇಶನದ ಚಿತ್ರದ ಚಿತ್ರೀಕರಣದಲ್ಲಿರುತ್ತೇನೆ.‌ ಹೀಗಾಗಿ ನಿಮ್ಮ ಜತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ’ ಎಂದು ದುನಿಯಾ ವಿಜಯ್‌ ಹೇಳಿದ್ದಾರೆ.
 

36

'ಚಿತ್ರದಲ್ಲಿ ವಿಜಯ್ ಪಾತ್ರದ ಹೆಸರು ರಾಚಯ್ಯ. ಶೇಕಡ 70ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಹಾಡು ಮತ್ತು ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣ ಬಾಕಿಯಿದೆ. ಈ ವರ್ಷ ಆಗಸ್ಟ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಆಲೋಚನೆಯಿದೆ. 
 

46

ಇದು ಯಾವುದೇ ಹೋರಾಟ ಅಥವಾ ಭೂಮಿಗೆ ಸಂಬಂಧಿಸಿದ ಕಥೆಯಲ್ಲ. ಭೂಮಿ ಒಡೆಯನಾಗಬೇಕೆಂದು ಹೊರಟವನ ಕಥೆ. ಅಪ್ಪ- ಮಗಳ ಭಾವನಾತ್ಮಕ ಸನ್ನಿವೇಶಗಳನ್ನು ಹೊಂದಿರುವ ಚಿತ್ರ' ಎಂದು ಜಡೇಶ್ ಹೇಳಿದ್ದಾರೆ.

56

'ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ' ಎಂಬ ಟ್ಯಾಗ್‌ಲೈನ್‌ ಹೊಂದಿದೆ. ದೇವಾಲಯದ ಎದುರು ದೇವರ ರಥವೊಂದು ಹೊತ್ತಿ ಉರಿಯುತ್ತಿರುವ ಪೋಸ್ಟರ್ ಅನ್ನು ಚಿತ್ರತಂಡ ಈ ಹಿಂದೆ ಬಿಡುಗಡೆಗೊಳಿಸಿತ್ತು.

66

ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್‌ ಕುಮಾರ್, ಬಿ.ಸುರೇಶ್ ಮೊದಲಾದವರು ಚಿತ್ರದಲ್ಲಿದ್ದಾರೆ. 'ಸಾರಥಿ' ಸಿನಿಮಾದ ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
 

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved