MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Photos: ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಗನಿಗೆ ಅಕ್ಷರಾಭ್ಯಾಸ ಮಾಡಿಸಿದ ನಿಖಿಲ್‌ ಕುಮಾರಸ್ವಾಮಿ

Photos: ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಗನಿಗೆ ಅಕ್ಷರಾಭ್ಯಾಸ ಮಾಡಿಸಿದ ನಿಖಿಲ್‌ ಕುಮಾರಸ್ವಾಮಿ

ಇಂದು ಅಕ್ಷಯ ತೃತೀಯ. ಈ ಶುಭ ದಿನದಂದು ಆರಂಭಿಸಿದ ಕೆಲಸ ಯಶಸ್ಸು ಪಡೆಯುತ್ತದೆ ಎಂದು ಹೇಳುತ್ತಾರೆ. ಈಗ ನಿಖಿಲ್‌ ಕುಮಾರಸ್ವಾಮಿ ಅವರು ಮಗನ ಅಕ್ಷರಾಭ್ಯಾಸ ಮಾಡಿಸಿದ್ದಾರೆ. 

1 Min read
Padmashree Bhat
Published : Apr 30 2025, 01:32 PM IST| Updated : Apr 30 2025, 01:53 PM IST
Share this Photo Gallery
  • FB
  • TW
  • Linkdin
  • Whatsapp
18

ಶೃಂಗೇರಿ ಶಾರದಾಂಬೆ ವಿದ್ಯೆಗೆ ಅಧಿಪತಿ ಎನ್ನಬಹುದು. ಈ ಪವಿತ್ರ ಪುಣ್ಯ ಸ್ಥಳದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಮಗ ಅವ್ಯಾನ್‌ ದೇವ್‌ ಅವರ ಅಕ್ಷರಾಭ್ಯಾಸ ಮಾಡಿಸಿದ್ದಾರೆ.
 

28

ಕೆಲದಿನಗಳ ಹಿಂದೆ ನಟಿ ಅಮೂಲ್ಯ ಹಾಗೂ ಜಗದೀಶ್‌ ಆರ್‌ ಚಂದ್ರ ಅವರು ತಮ್ಮ ಅವಳಿ ಮಕ್ಕಳಾದ ಅಥರ್ವ ಹಾಗೂ ಆಧವ್‌ ಅವರ ಅಕ್ಷರಾಭ್ಯಾಸ ಮಾಡಿಸಿದ್ದರು. ಇದಾದ ಬಳಿಕ ನಿಖಿಲ್‌ ಅವರು ಶೃಂಗೇರಿಯಲ್ಲಿ ಮಗನ ಅಕ್ಷರಾಭ್ಯಾಸ ಮಾಡಿಸಿದ್ದಾರೆ.


 

Related Articles

Related image1
ನನ್ನ ಜೀವನದ ಅತ್ಯಮೂಲ್ಯ ಉಡುಗೊರೆ ನೀನು... ಪತ್ನಿಗೆ ಆನಿವರ್ಸರಿ ವಿಶ್ ಮಾಡಿದ ನಿಖಿಲ್ ಕುಮಾರಸ್ವಾಮಿ
Related image2
ನಿಖಿಲ್​ ಎಲ್ಲಿದ್ದೀಯಪ್ಪ... ಡೈಲಾಗ್​ ರೂವಾರಿ ಇವ್ರೇ ನೋಡಿ... ಅಂದು ನಡೆದ ಘಟನೆ ವಿವರಿಸಿದ ನಟಿ ಶಾಲಿನಿ...
38

ಅಕ್ಷರಾಭ್ಯಾಸದ ಬಗ್ಗೆ ಅವರು ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಂದಹಾಗೆ ಶಾರದಾ ಮಾತೆಯ ದರ್ಶನ ಕೂಡ ಪಡೆದಿದ್ದಾರೆ. 
 

48

“ಶ್ರೀ ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತ ಭೇಟಿ ನೀಡಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ  ಭಾರತೀತೀರ್ಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡೆ. ಪರಮಪೂಜ್ಯರ ಅನುಗ್ರಹ, ಕಾರುಣ್ಯಕ್ಕೆ ನಾನು ಧನ್ಯ” ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.
 

58

“ಜಗನ್ಮಾತೆ ಶ್ರೀ ಶಾರದಾಂಬೆಯ ದರ್ಶನ ಪಡೆದು ಪುತ್ರ ಚಿ. ಅವ್ಯಾನ್ ದೇವ್ ಗೆ ಅಮ್ಮನವರ ಸನ್ನಿಧಿಯಲ್ಲಿ ಅಕ್ಷರಾಭ್ಯಾಸ ಮಾಡಿಸಿ ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದೆ” ಎಂದು ನಿಖಿಲ್‌ ಗೌಡ ಹೇಳಿದ್ದಾರೆ. 

68

2021ರಲ್ಲಿ ಅವ್ಯಾನ್‌ ದೇವ್‌ ಅವರ ಜನನವಾಗಿದೆ. ಆಗಾಗ ತಂದೆ ಜೊತೆಗೆ ಆಟ ಆಡುವ ಅವ್ಯಾನ್‌ ದೇವ್‌ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತದೆ. 

78

ಇನ್ನು ಮಗನ ಅಕ್ಷರಾಭ್ಯಾಸದಂದು ರೇವತಿ ಮಂಜುನಾಥ್‌ ಅವರು ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಅಂದಹಾಗೆ ಅವ್ಯಾನ್‌ ಕೂಡ ಸಾಂಪ್ರದಾಯಿಕ ಡ್ರೆಸ್‌ನಲ್ಲಿ ಕಂಗೊಳಿಸಿದ್ದಾರೆ. 

88

ಈ ಶುಭ ಕಾರ್ಯಕ್ರಮದಲ್ಲಿ ಎಚ್‌ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಭಾಗಿಯಾದಂತಿಲ್ಲ. ಅಂದಹಾಗೆ ರೇವತಿ ಅವರು ನಿಖಿಲ್‌ ರಾಜಕೀಯ ಕೆಲಸಗಳಿಗೆ ಬೆಂಬಲ ನೀಡುತ್ತಿದ್ದಾರೆ. 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಹೆಚ್.ಡಿ. ಕುಮಾರಸ್ವಾಮಿ
ಸ್ಯಾಂಡಲ್‌ವುಡ್
ಆಧ್ಯಾತ್ಮ
ಅಕ್ಷಯ ತೃತೀಯ
ನಿಖಿಲ್ ಕುಮಾರಸ್ವಾಮಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved