MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Duleep Trophy Final
Today's Horoscope in Kannada
Mantralaya Online Scam
Hubballi Ganeshotsava
Kalaburagi Drought List
Pitru Paksha 2026 Date
PM Modi Meeting
Karnataka Farmers
Gulbarga Bus Accident
Western Ghats ESA
Karnataka Taxi Fare Meter
Bigg Boss Kannada 13
  • Home
  • Entertainment
  • Sandalwood
  • ರಿಷಬ್ ಶೆಟ್ಟಿ ಸಂಸ್ಥೆಯಲ್ಲಿ ಸಿನಿಮಾ ಮಾಡಬೇಕಿತ್ತು, ಆದ್ರೆ..: ನಟ ಶೈನ್ ಶೆಟ್ಟಿ ಹೇಳಿದ್ದೇನು?

ರಿಷಬ್ ಶೆಟ್ಟಿ ಸಂಸ್ಥೆಯಲ್ಲಿ ಸಿನಿಮಾ ಮಾಡಬೇಕಿತ್ತು, ಆದ್ರೆ..: ನಟ ಶೈನ್ ಶೆಟ್ಟಿ ಹೇಳಿದ್ದೇನು?

ಶೈನ್ ಶೆಟ್ಟಿ ನಿರ್ಮಿಸಿ, ನಾಯಕನಾಗಿ ನಟಿಸಿರುವ ‘ಶಂಕರಾಭರಣ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸುಮಂತ್ ಭಟ್ ನಿರ್ದೇಶನದ ಈ ಹಾರರ್ ಕಾಮಿಡಿಯಲ್ಲಿ ಶೈನ್ ಬಸ್ ಚಾಲಕನಾಗಿ ಕಾಣಿಸಿಕೊಂಡಿದ್ದು, ಸಿನಿಮಾ ನ.20ರಂದು ತೆರೆಗೆ ಬರಲಿದೆ.

1 Min read
Author : Govindaraj S
Published : Sep 07 2026, 04:18 PM IST
Share this Photo Gallery
  • FB
  • TW
  • Linkdin
  • Whatsapp
15
ಕನಸಿನ ಫಲ
Image Credit : others

ಕನಸಿನ ಫಲ

‘ನಮಗೆ ಅನ್ನಿಸುವುದನ್ನು ಮಾಡಬೇಕಾದರೆ ವೇದಿಕೆ ನಮ್ಮದೇ ಆಗಿರಬೇಕು. ಹಾಗಾಗಿ ನಾನೇ ನಿರ್ಮಾಣ ಸಂಸ್ಥೆ ಕಟ್ಟಿ ಮಾಡಿದ ಸಿನಿಮಾ ಇದು. ಹಲವು ವರ್ಷಗಳ ಶ್ರಮದ, ಕನಸಿನ ಫಲ ಈ ಶಂಕರಾಭರಣ’. ಶೈನ್ ಶೆಟ್ಟಿ ಹೇಳಿದ ಮಾತಿದು. ಸಾಮಾನ್ಯವಾಗಿ ಪ್ರತಿಯೊಬ್ಬ ಕಲಾವಿದರೂ ಒಂದೊಳ್ಳೆ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸುಮಂತ್ ಭಟ್ ನಿರ್ದೇಶನ
Image Credit : others

ಸುಮಂತ್ ಭಟ್ ನಿರ್ದೇಶನ

ಕೆಲವರು ಆ ಅವಕಾಶವನ್ನು ತಾವೇ ಸೃಷ್ಟಿಸಿಕೊಳ್ಳುತ್ತಾರೆ. ಶೈನ್ ಎರಡನೇ ದಾರಿ ಆರಿಸಿಕೊಂಡಿದ್ದಾರೆ. ಅವರ ತಂಡ ನಿರ್ಮಿಸಿರುವ, ಅವರು ನಾಯಕನಾಗಿ ನಟಿಸಿರುವ, ‘ಮಿಥ್ಯ’ ಖ್ಯಾತಿಯ ಸುಮಂತ್ ಭಟ್ ನಿರ್ದೇಶನದ ‘ಶಂಕರಾಭರಣ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ ಮತ್ತು ಮೆಚ್ಚುಗೆ ಗಳಿಸಿದೆ.

Related Articles

Related image1
ನಿರ್ದೇಶಕ ಓಂ ಸಾಯಿಪ್ರಕಾಶ್‌ ನನ್ನ ಪಾಲಿಗೆ ಗುರುಗಳಿದ್ದಂತೆ: ಹಿರಿಯ ನಟಿ ಉಮಾಶ್ರೀ!
Related image2
ಕೊನೆಗೂ ಶುರುವಾಯಿತು ದುನಿಯಾ ಸೂರಿ ಚಿತ್ರ ಕಾಗೆ ಬಂಗಾರ: ತಾರಾಬಳಗದಲ್ಲಿ ಸರ್ಪ್ರೈಸ್!
35
ನಿರ್ಮಾಣ ಸಂಸ್ಥೆ ಮಾಡುವ ಧೈರ್ಯ
Image Credit : others

ನಿರ್ಮಾಣ ಸಂಸ್ಥೆ ಮಾಡುವ ಧೈರ್ಯ

ರಿಷಬ್ ಶೆಟ್ಟಿಯವರ ಸಂಸ್ಥೆಯಲ್ಲಿ ನಾನೊಂದು ಸಿನಿಮಾ ಮಾಡಬೇಕಿತ್ತು. ಅದಕ್ಕಾಗಿ ಕತೆ ಮಾಡಿದ್ದಾಗ ಅವರು ಮೆಚ್ಚಿದ್ದರು. ನಾನೂ ಕತೆ ಮಾಡಬಹುದು ಅನ್ನುವ ಧೈರ್ಯ ಬಂದಿತ್ತು. ಆಮೇಲೆ ನಾನೇ ನಿರ್ಮಾಣ ಸಂಸ್ಥೆ ಮಾಡುವ ಧೈರ್ಯ ಮಾಡಿದೆ. ಹಲವು ಸಮಯ ಹೋರಾಟ ಮಾಡಿದರೂ ನಿರ್ಮಾಪಕರು ಸಿಗಲಿಲ್ಲ.

45
ಸಾರ್ಥಕತೆ ತಂದಿದೆ
Image Credit : others

ಸಾರ್ಥಕತೆ ತಂದಿದೆ

ಕೊನೆಗೆ ಅಣ್ಣ ದಿವಾಕರ ಶೆಟ್ಟಿ ಜೊತೆಯಾದರು. ರಂಗಸ್ಥಳ ಸಂಸ್ಥೆ ಕಟ್ಟಿದೆವು. ನನ್ನ ಕತೆಯನ್ನು ಸುಮಂತ್‌ ಭಟ್ರಿಗೆ ಹೇಳಿ ಅವರೂ ಒಪ್ಪಿ ಸಿನಿಮಾ ಆಗಿದೆ. ಈ ಪಯಣ ನನಗೆ ತೃಪ್ತಿ ಕೊಟ್ಟಿದೆ. ಒಂದೊಳ್ಳೆ ಸಿನಿಮಾ ಮಾಡಿದ ಸಾರ್ಥಕತೆ ತಂದಿದೆ ಎನ್ನುತ್ತಾರೆ ಶೈನ್.ಇದೊಂದು ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಶೈನ್ ಬಸ್‌ ಚಾಲಕನ ಪಾತ್ರದಲ್ಲಿ ನಟಿಸಿದ್ದಾರೆ.

55
ತನ್ವಿ ರಾವ್ ಚಿತ್ರದ ನಾಯಕಿ
Image Credit : others

ತನ್ವಿ ರಾವ್ ಚಿತ್ರದ ನಾಯಕಿ

ಕರಾವಳಿ ಭಾಗದ ಖಾಸಗಿ ಬಸ್‌ಗಳ ಜಗತ್ತು ಈ ಕತೆಯಲ್ಲಿ ಅನಾವರಣಗೊಳ್ಳಲಿದೆ. ತನ್ವಿ ರಾವ್ ಈ ಚಿತ್ರದ ನಾಯಕಿ. ಕೃತಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚರಣ್‌ರಾಜ್‌ ಸಂಗೀತ ನೀಡಿರುವ ಈ ಚಿತ್ರ ನ.20ರಂದು ಬಿಡುಗಡೆಯಾಗಲಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರಿಷಬ್ ಶೆಟ್ಟಿ
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಕನ್ನಡ ಚಲನಚಿತ್ರಗಳು

Latest Videos
Recommended Stories
Recommended image1
ನಿರ್ದೇಶಕ ಓಂ ಸಾಯಿಪ್ರಕಾಶ್‌ ನನ್ನ ಪಾಲಿಗೆ ಗುರುಗಳಿದ್ದಂತೆ: ಹಿರಿಯ ನಟಿ ಉಮಾಶ್ರೀ!
Recommended image2
ಕೊನೆಗೂ ಶುರುವಾಯಿತು ದುನಿಯಾ ಸೂರಿ ಚಿತ್ರ ಕಾಗೆ ಬಂಗಾರ: ತಾರಾಬಳಗದಲ್ಲಿ ಸರ್ಪ್ರೈಸ್!
Recommended image3
Bigg Boss: ಬಿಗ್ ಬಾಸ್ ವೇದಿಕೆ ಮೇಲೆ 'ವಿಷ್ಣುವರ್ಧನ್' ಸ್ಟೈಲ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್‌.. ಇದು ಏಕೆ ಗೊತ್ತಾ?
Related Stories
Recommended image1
ನಿರ್ದೇಶಕ ಓಂ ಸಾಯಿಪ್ರಕಾಶ್‌ ನನ್ನ ಪಾಲಿಗೆ ಗುರುಗಳಿದ್ದಂತೆ: ಹಿರಿಯ ನಟಿ ಉಮಾಶ್ರೀ!
Recommended image2
ಕೊನೆಗೂ ಶುರುವಾಯಿತು ದುನಿಯಾ ಸೂರಿ ಚಿತ್ರ ಕಾಗೆ ಬಂಗಾರ: ತಾರಾಬಳಗದಲ್ಲಿ ಸರ್ಪ್ರೈಸ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved