MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು; ಪೊಲೀಸರ ಮುಂದೆ ನಡೆದೇ ಹೋಯ್ತು ಹೈಡ್ರಾಮಾ!

ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು; ಪೊಲೀಸರ ಮುಂದೆ ನಡೆದೇ ಹೋಯ್ತು ಹೈಡ್ರಾಮಾ!

ನಟ ಪ್ರಥಮ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನಾಕಾರರು ನಟನ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಘಟನೆಯು ಪೊಲೀಸ್ ಠಾಣೆಯ ಮುಂದೆಯೇ ನಡೆದಿದ್ದು, ವೈರಲ್ ಆಗಿದೆ. ಪ್ರತಿಭಟನಾಕಾರರು ಪ್ರಥಮ್ ಬಂಧನಕ್ಕೆ ಆಗ್ರಹಿಸಿದ್ದಾರೆ.

2 Min read
Sathish Kumar KH
Published : Jul 31 2025, 09:57 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು ಗ್ರಾಮಾಂತರ/ದೊಡ್ಡಬಳ್ಳಾಪುರ (ಜು.31): ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ ಪ್ರಥಮ್ ಮುಖಕ್ಕೆ ಹೋರಾಟಗಾರರು ಮಸಿ ಬಳೆಸಿದ್ದಾರೆ. ಪೊಲೀಸ್ ಠಾಣೆ ಮುಂದೆಯೇ, ಹಲವು ಪೊಲೀಸರ ಎದುರಿನಲ್ಲಿಯೇ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

26
Image Credit : Asianet News

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಮುಂದೆ ಇಂದು ಸಂಜೆ ನಾಟಕೀಯ ಘಟನೆಗಳು ನಡೆದಿವೆ. ಅಂಬೇಡ್ಕರ್ ಸೇನೆ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ಮತ್ತು ನೂಕುನುಗ್ಗಲು ನಡೆಯಿತು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ನಟ ಪ್ರಥಮ್ ನೀಡಿದ ಹೇಳಿಕೆಗೆ ಆಕ್ರೋಶಗೊಂಡ ಅಂಬೇಡ್ಕರ್ ಸೇನೆ ಸದಸ್ಯರು, ಗುರುವಾರ ಸಂಜೆ ಪೊಲೀಸ್ ಠಾಣೆಯ ಮುಂದೆ ಬಂದು ಪ್ರತಿಭಟನೆ ನಡೆಸಿದರು.

Related Articles

Related image1
ದರ್ಶನ್ ಅಭಿಮಾನಿಗಳ ಮುಂದೆ ಬುದ್ಧಿವಂತಿಕೆಯಿಂದ ತಲೆ ತಗ್ಗಿಸಿದೆ; ನಟ ಒಳ್ಳೆ ಹುಡುಗ ಪ್ರಥಮ್
Related image2
ನಟ ಪ್ರಥಮ್ ಮೇಲೆ ಅಟ್ಯಾಕ್..? ದೊಡ್ಡಬಳ್ಳಾಪುರದಲ್ಲಿ ನಿಜವಾಗಿ ನಡೆದಿದ್ದೇನು?
36
Image Credit : Asianet News

ಅವಮಾನಕಾರಿ ಹೇಳಿಕೆ ನೀಡಿದ ಆರೋಪ;

ಅಂಬೇಡ್ಕರ್ ಸಂಘದ ಸದಸ್ಯರ ಪ್ರಕಾರ, ನಟ ಪ್ರಥಮ್ ಸಂವಿಧಾನ ಹಾಗೂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. 'ಆತನಿಗೆ ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಲು ಏನು ಹಕ್ಕಿದೆ ' ಎಂದು ಅಕ್ರೋಶ ವ್ಯಕ್ತಪಡಿಸಿದರು.

ಪೋಲಿಸರು ಆತನ ರಕ್ಷಣೆ ಮಾಡುತ್ತಾರೆಂಬ ಧೈರ್ಯದಿಂದಲೇ ಅವಹೇಳಕಾರಿ ಹೇಳಿಕೆ ಕೊಡುತ್ತಿದ್ದಾನೆ. ತನ್ನ ಹೇಳಿಕೆ ಬಗ್ಗೆ ಆತ ಎಲ್ಲಿವರೆಗೂ ಕ್ಷಮೆ ಕೇಳಲ್ಲವೋ, ಅಲ್ಲಿವರೆಗೂ ನಾವು ಹೋರಾಟ ಕೈ ಬಿಡಲ್ಲ ಎಂದು ಅಂಬೇಡ್ಕರ್ ಸಂಘಟನೆ ಸದಸ್ಯರು ಆಗ್ರಹಿಸಿದರು. ಯಾವಾಗ ಆತ ಏನೇ ಮಾತನಾಡಿದರೂ, ಪೋಲಿಸರು ರಕ್ಷಣೆ ಮಾಡಿ ಆತನನ್ನು ಕಳಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

46
Image Credit : Asianet News

ಠಾಣೆ ಎದುರು ಪ್ರತಿಭಟನೆ, ಮುಖಕ್ಕೆ ಮಸಿ ಬಳಿದು ಆಕ್ರೋಶ:

ನಟ ಪ್ರಥಮ್ ಗ್ರಾಮಾಂತರ ಠಾಣೆಗೆ ಬರುವ ವೇಳೆ, ಪ್ರತಿಭಟನಾಕಾರರು ಅವರ ಕಾರು ತಡೆದು ನೇರವಾಗಿ ಹಸ್ತಕ್ಷೇಪ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಿತಿ ಉಲ್ಬಣಗೊಂಡಿದ್ದು, ಕೆಲವು ಸದಸ್ಯರು ಮಸಿ ಬಳಿಯಲು ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಸನ್ನಿವೇಶ ಗಂಭೀರ ರೂಪ ತೆಗೆದುಕೊಳ್ಳುತ್ತಿದ್ದಂತೆ ಪೊಲೀಸ್ ಇಲಾಖೆ ತಕ್ಷಣ ಮಧ್ಯಸ್ಥಿಕೆ ಮಾಡಿದ್ದು, ಪ್ರಥಮ್‌ ಅವರನ್ನು ರಕ್ಷಿಸಿ ಸ್ಥಳದಿಂದ ಭದ್ರವಾಗಿ ಕಳಿಸಿದ್ದಾರೆ. ಈ ವೇಳೆ ಪೊಲೀಸರಿಗೂ ಪ್ರತಿಭಟನಾಕಾರರಿಗೂ ನೂಕಾಟ ನಡೆದಿದ್ದು, ಕೆಲ ಕ್ಷಣ ಪರಿಸ್ಥಿತಿ ಉದ್ವಿಗ್ನತೆ ಪಡೆದುಕೊಂಡಿತ್ತು.

56
Image Credit : Asianet News

ನಟ ಪ್ರಥಮ್ ಬಂಧನದ ಬೇಡಿಕೆ:

ಅಂಬೇಡ್ಕರ್ ಸೇನೆ ಹಾಗೂ ಕರ್ನಾಟಕ ಭೀಮ ಸೇನೆ ಸಂಘಟನೆ ಸದಸ್ಯರು, ಪ್ರಥಮ್ ವಿರುದ್ಧ ಪ್ರಕರಣ ದಾಖಲಾಗಬೇಕು ಹಾಗೂ ಬಂಧನ ಮಾಡಬೇಕು. ಆತನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಘೋಷಣೆ ಕೂಗಿದರು. ಅಂಬೇಡ್ಕರ್ ಸಂಘಟನೆಯ ದೊಡ್ಡಬಳ್ಳಾಪುರ ಅಧ್ಯಕ್ಷ ಮಂಜುನಾಥ್, 'ಇದು ಸಾಮಾನ್ಯ ಘಟನೆ ಅಲ್ಲ. ಇದು ನಮ್ಮ ಹಕ್ಕುಗಳ ಮೇಲಿನ ಅಪಮಾನ. ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ' ಎಂದು ಮಾಧ್ಯಮದೊಂದಿಗೆ ಮಾತನಾಡಿದರು.

66
Image Credit : Asianet News

ತನಿಖೆ ಮುಂದುವರೆಸುವ ಸಾಧ್ಯತೆ:

ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಘಟನೆ ನಡೆದ ಬಳಿಕ ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಈ ಮೂಲಕ ಗಲಾಟೆ ನಡೆದ ಸ್ಥಳದಲ್ಲಿ ಶಾಂತಿ ಕಾಪಾಡಲಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸತೊಡಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ದರ್ಶನ್ ತೂಗುದೀಪ
ಬೆಂಗಳೂರು ಗ್ರಾಮಾಂತರ
ಕರ್ನಾಟಕ ಪೊಲೀಸ್
ಸ್ಯಾಂಡಲ್‌ವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved