MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಹರಿಹರಪುರ ಕ್ಷೇತ್ರಕ್ಕೆ 'ಕಾಂತಾರ' ಖ್ಯಾತಿಯ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಭೇಟಿ, ಫ್ಯಾನ್ಸ್ ಥ್ರಿಲ್!

ಹರಿಹರಪುರ ಕ್ಷೇತ್ರಕ್ಕೆ 'ಕಾಂತಾರ' ಖ್ಯಾತಿಯ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಭೇಟಿ, ಫ್ಯಾನ್ಸ್ ಥ್ರಿಲ್!

ಹರಿಹರಪುರ ಕ್ಷೇತ್ರವು ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ. ಅಲ್ಲಿಗೆ ದಿನಾಲೂ ಸಾವಿರಾರಿಉ ಭಕ್ತರು ಭೇಟಿ ನೀಡುತ್ತಾರೆ.  ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಈ ದೇವಾಲಯವು ಇತಿಹಾಸ ಪ್ರಸಿದ್ಧ ದೇಗುಲವಾಗಿದೆ. 

2 Min read
Shriram Bhat
Published : May 22 2024, 03:19 PM IST
Share this Photo Gallery
  • FB
  • TW
  • Linkdin
  • Whatsapp
112

ಹರಿಹರಪುರ ಕ್ಷೇತ್ರಕ್ಕೆ ಸ್ಯಾಂಡಲ್‌ವುಡ್ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಮಗಳ ಜೊತೆ ಕುಟುಂಬ ಸಮೇತರಾಗಿ ನಟ-ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರ ಶಾರದಾ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದ ರಿಷಬ್ ದಂಪತಿಗಳು ಅಲ್ಲಿ ಅಭಿಮಾನಿಗಳ ಜತೆ ಫೊಟೋ ಕೂಡ ತೆಗೆಸಿಕೊಂಡೊದ್ದಾರೆ. 

212

ರಿಷಬ್ ಕಂಡು ಅಭಿಮಾನಿಗಳು ಸೆಲ್ಫಿಗೆ ಮುಗಿ ಬಿದ್ದಿದ್ದಾರೆ. ಬಳಿಕ, ಹರಿಹರಪುರದ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ದರ್ಶನ ಪಡೆದಿದ್ದಾರೆ ಸ್ಯಾಂಡಲ್‌ವುಡ್ 'ಕಾಂತಾರ' ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ದಂಪತಿಗಳು. ಮಠದ ಆವರಣದ ಆಂಜನೇಯನ ಬಳಿ ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ.

312

ಹರಿಹರಪುರ ಕ್ಷೇತ್ರವು ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲ. ಅಲ್ಲಿಗೆ ದಿನಾಲೂ ಸಾವಿರಾರಿಉ ಭಕ್ತರು ಭೇಟಿ ನೀಡುತ್ತಾರೆ.  ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಈ ದೇವಾಲಯವು ಇತಿಹಾಸ ಪ್ರಸಿದ್ಧ ದೇಗುಲವಾಗಿದೆ. 

412

ಸದ್ಯ, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕಾಂತಾರ ಚಿತ್ರದ ಪ್ರೀಕ್ವೆಲ್‌ಗೆ ಶೂಟಿಂಗ್ ಮಾಡುವುದರಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಕಾಂತಾರ ಮೊದಲ ಭಾಗದಲ್ಲಿ ನಟಿಸಿರುವ ನಟಿ ಸಪ್ತಮಿ ಗೌಡ ನಟಿಸುತ್ತಿಲ್ಲ, ಬದಲಿಗೆ ಬೇರೊಬ್ಬ ನಟಿಯನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. 

512

ಕಾಂತಾರ ಚಿತ್ರದ ಡಿಜಿಟಲ್ ರೈಟ್ಸ್ 125 ಕೋಟಿ ರೂಪಾಯಿಗೆ ಅಮೆಜಾನ್ ಪ್ರೈಮ್ ವೀಡಿಯೋ ಕಂಪನಿಗೆ ಸೇಲ್‌ ಆಗಿದೆ. ಇದು ನಿಜವಾಗಿಯೂ ಎಲ್ಲರೂ ಖುಷಿ ಪಡಬೇಕಾದ ವಿಚಾರ. ಕಾರಣ, ಕೇವಲ 15-16 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಾಂತಾರ ಚಿತ್ರವು 125 ಕೋಟಿ ರೂ.ಗೆ ಸೇಲ್ ಆಗಿದ್ದು ಅಚ್ಚರಿ ಹುಟ್ಟಿಸುವ ಸಂಗತಿ. 

612

ಜತೆಗೆ, ಕಾಂತಾರ ಚಿತ್ರದ ಬಿಡುಗಡೆಯಿಂದ ಜಗತ್ತಿನಾದ್ಯಂತ 500 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿದೆ. ಇದೀಗ, ಅಚ್ಚರಿ ಹಾಗೂ ಖುಷಿ ಸಂಗತಿ ಎಂಬಂತೆ, ಕಾಂತಾರ ಚಿತ್ರದ ಡಿಜಿಟಲ್ ಹಕ್ಕು ಬರೋಬ್ಬರಿ 125 ಕೋಟಿಗೆ ಸೇಲ್ ಆಗಿದ್ದು, ಹೊಸ ದಾಖಲೆ ಬರೆದಿದೆ. ಕಡಿಮೆ ಬಜೆಟ್ಟಿನ ಕನ್ನಡ ಚಿತ್ರವೊಂದು ಈ ಮಟ್ಟಕ್ಕೆ ಪ್ರಖ್ಯಾತಿ ಪಡೆದು, ಇಷ್ಟು ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದು ಮತ್ತೊಂದು ದಾಖಲೆ ಎನ್ನಬಹುದು. 

712

ಈ ಬಗ್ಗೆ ಇಡೀ ಕಾಂತಾರ ಟೀಮ್ ಖುಷಿಯನ್ನು ಹಂಚಿಕೊಳ್ಳುವ ಕ್ಷಣ ಖಂಡಿತ ದೂರವಿಲ್ಲ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಜೋಡಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಾಂತಾರ ಚಿತ್ರವು ಈ ಮೂಲಕ ಇದೀಗ ಮತ್ತೊಂದು ಮನ್ನಣೆಗೆ ಪಾತ್ರವಾಗಿದೆ. 

812

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರವು 'ದೈವಾರಾಧನೆ'ಗೆ ಸಂಬಂಧಿಸಿದ ವಿಷಯವನ್ನು ಒಳಗೊಂಡಿದೆ. ಈ ಚಿತ್ರವು ತನ್ನ ವಿಭಿನ್ನತೆ ಹಾಗು ಘನತೆಯಿಂದ ಅಪಾರ ಜನಮನ್ನಣೆ ಪಡೆದಿದೆ. ಈ ಚಿತ್ರವು ಕಡಿಮೆ ಬಜೆಟ್ ಹಾಗೂ ಹೆಚ್ಚಿನ ಗಳಿಕ ಮೂಲಕ ಇಡೀ ಜಗತ್ತಿನ ಗಮನವನ್ನು ಸೆಳೆದಿದೆ. 

912

ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರು ಕಾಂತಾರ ಚಿತ್ರದ ಮೂಲಕ ಇಂಟರ್‌ನ್ಯಾಷನಲ್ ಖ್ಯಾತಿ ಪಡೆದುಕೊಂಡಿದ್ದಾರೆ. ಈಗ ಅವರಿಬ್ಬರನ್ನೂ ಪ್ಯಾನ್ ಇಂಡಿಯಾ ಸ್ಟಾರ್‌ಗಳೆಂದು ಕರೆಯುವುದರಲ್ಲಿ ಯಾವ ತಪ್ಪೂ ಇಲ್ಲ. 
 

1012

ಕನ್ನಡದಲ್ಲಿ ಕಡಿಮೆ ಬಜೆಟ್ಟಿನಲ್ಲಿ ನಿರ್ಮಾಣವಾಗಿ ದಾಖಲೆ ಗಳಿಕೆ ಕಂಡ ಈ ಕಾಂತಾರ ಚಿತ್ರದ ಕಥಾವಸ್ತು ಹಾಗೂ ಮೇಕಿಂಗ್ ಬಗ್ಗೆ ಇಡೀ ಜಗತ್ತು ಅಚ್ಚರಿಗೆ ಒಳಗಾಗಿದೆ. ಇಷ್ಟು ಕಡಿಮೆ ಬಜೆಟ್ಟಿನಲ್ಲಿ ಇಷ್ಟೊಂದು ಒಳ್ಳೆಯ ಸಿನಿಮಾ ಮಾಡಬಹುದೆಂದು ಕಾಂತಾರ ಹೆಸರಿನ ಕನ್ನಡ ಚಿತ್ರದ ಮೂಲಕ ಜಗತ್ತು ಕಂಡುಕೊಂಡಿದೆ. 

1112

ಈಗ ಕಾಂತಾರ ಸೃಷ್ಟಿಕರ್ತ, ಅಂದರೆ ನಿರ್ದೇಶಕರಾದ ರಿಷಬ್ ಶೆಟ್ಟಿ ಈ ಚಿತ್ರದ 'ಪ್ರೀಕ್ವೆಲ್' ಅಂದರೆ ಮೊದಲ ಭಾಗದ ಸಿನಿಮಾ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಕಾಂತಾರ ಪ್ರೀಕ್ವೆಲ್ ಸಿನಿಮಾದಲ್ಲಿ ಸೀಕ್ವೆಲ್‌ನಲ್ಲಿ ಅಂದರೆ ಕಾಂತಾರದಲ್ಲಿ ನಟಿಸಿದ್ದ ಸಪ್ತಮಿ ಗೌಡ ನಟಿಸುತ್ತಿಲ್ಲ. 

1212

ಈ ಬಗ್ಗೆ ಸ್ವತಃ ಸಪ್ತಮಿ ಗೌಡ ಸಾಕಷ್ಟು ಕಡೆ ಹೇಳಿಕೊಂಡಿದ್ದಾರೆ. 'ನನ್ನ ಪಾತ್ರ ಕಾಂತಾರದಲ್ಲೇ ಕೊನೆಗೊಂಡಿದೆ. ಹೀಗಾಗಿ ಕಾಂತಾರ ಪ್ರೀಕ್ವೆಲ್‌ನಲ್ಲಿ ಸಹಜವಾಗಿಯೇ ಬೇರೆ ನಟಿಯ ಅಗತ್ಯವಿದೆ. ಹೀಗಾಗಿ ನಾನು ಅದರಲ್ಲಿ ನಟಿಸುತ್ತಿಲ್ಲ' ಎಂದಿದ್ದಾರೆ. 

ಅದೇನೇ ಇರಲಿ, 15 ಕೋಟಿ ರೂಪಾಯಿಯಲ್ಲಿ ನಿರ್ಮಿಸಲಾದ ಕಾಂತಾರ ಚಿತ್ರವು ಈಗ ಬರೋಬ್ಬರಿ 125 ಕೋಟಿ ರೂಪಾಯಿಗೆ ಡಿಜಿಟಲ್ ಹಕ್ಕುಗಳನ್ನು ಪಡೆದು ಎಲ್ಲರ ಅಚ್ಚರಿ ಹಾಗೂ ಸಂತೋಷಕ್ಕೆ ಕಾರಣವಾಗಿದೆ. 

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ಕಾಂತಾರ ಚಲನಚಿತ್ರ
ರಿಷಬ್ ಶೆಟ್ಟಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved