MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಅರ್ಜುನ್‌ ಜನ್ಯ ನಿರ್ದೇಶನದ ಹೊಸ ಚಿತ್ರಕ್ಕೆ ಕಿರುತೆರೆ ಸುಂದರಿ ಕೌಸ್ತುಭ ನಾಯಕಿ

ಅರ್ಜುನ್‌ ಜನ್ಯ ನಿರ್ದೇಶನದ ಹೊಸ ಚಿತ್ರಕ್ಕೆ ಕಿರುತೆರೆ ಸುಂದರಿ ಕೌಸ್ತುಭ ನಾಯಕಿ

ರಾಜ್‌ ಬಿ ಶೆಟ್ಟಿ ಚಿತ್ರಕ್ಕೆ 'ನನ್ನರಸಿ ರಾಧೆ' ಧಾರಾವಾಹಿ ಸುಂದರಿ ಕೌಸ್ತುಭ ಮಣಿ ನಾಯಕಿ. 

1 Min read
Vaishnavi Chandrashekar
Published : Mar 30 2023, 09:59 AM IST
Share this Photo Gallery
  • FB
  • TW
  • Linkdin
  • Whatsapp
16

 ಕನ್ನಡ ಚಿತ್ರರಂಗದ ಮ್ಯೂಸಿಕಲ್ ಮ್ಯಾಜಿಕಲ್ ಕಂಪೋಸರ್ ಅರ್ಜುನ್‌ ಜನ್ಯ ನಿರ್ದೇಶನ, ಉಪೇಂದ್ರ, ಶಿವಣ್ಣ, ರಾಜ್‌ ಬಿ ಶೆಟ್ಟಿನಟನೆಯ ‘45’ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. 

26

ರಾಜ್‌ ಬಿ ಶೆಟ್ಟಿಅವರಿಗೆ ಕೌಸ್ತುಭ ನಾಯಕಿಯಾಗಿರುತ್ತಾರೆ ಎಂದು ಚಿತ್ರತಂಡ ತಿಳಿಸಿದೆ. ಕಿರುತೆರೆ ಹಿನ್ನೆಲೆಯ ಕೌಸ್ತುಭ ‘ನನ್ನರಸಿ ರಾಧೆ’ ಎಂಬ ಸೀರಿಯಲ್‌ನಲ್ಲಿ ನಟಿಸಿದ್ದರು. ತೆಲುಗು ಸೀರಿಯಲ್‌ಗಳಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

36

ಯುವ ಪ್ರತಿಭೆ ತೇಜ್ ನಟಿಸಿ, ನಿರ್ದೇಶನ ಮಾಡುತ್ತಿರುವ  'ರಾಮಾಚಾರಿ 2.0' (Ramachari 2.0)ಚಿತ್ರದಲ್ಲೂ ಕೌಸ್ತುಭ ನಟಿಸಿದ್ದಾರೆ. ನಟಿಯಾಗಿ, ನಾನು ಹೊಸ ಉದ್ಯಮಗಳನ್ನು ಅನ್ವೇಷಿಸಲು ಮತ್ತು ಅನುಭವಿಸಲು ಉತ್ಸುಕಳಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಚಿತ್ರ ಮುಂದಿನ ತಿಂಗಳು ರಿಲೀಸ್ ಆಗಲಿದೆ. 

46

ನಟಿಯಾಗಬೇಕು ಎಂಬ ಕನಸೇ ಕಂಡಿರದ ಕೌಸ್ತುಭ, ನಟಿಯಾಗಿದ್ದು ಮಾತ್ರ ವಿಶೇಷ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ಕೌಸ್ತುಭ ಮಣಿ ಆಕಸ್ಮಿಕವಾಗಿ ಬಣ್ಣದ ಬದುಕಿಗೆ ಕಾಲಿಟ್ಟರು. 

56

ನಟಿ ಮಾನ್ವಿತಾ ಕಾಮತ್ ಅವರನ್ನು  ಫ್ಯಾಶನ್ ಶೋವೊಂದರಲ್ಲಿ  ಭೇಟಿ ಮಾಡಿದ ನಂತರ ಮಾನ್ವಿತಾ ಧಾರಾವಾಹಿಯ ತಂಡಕ್ಕೆ ಇವರನ್ನು ಪರಿಚಯಿಸಿದ್ದರಂತೆ . ನಂತರ ‘ನನ್ನರಸಿ ರಾಧೆ’ ಧಾರಾವಾಹಿಯ ಲುಕ್ ಟೆಸ್ಟ್ ಮತ್ತು ಆಡಿಷನ್‌ನಲ್ಲಿ (look test audiiton) ಪಾಸ್ ಆದ ಕೌಸ್ತುಭ ಮಣಿ ಕಿರುತೆರೆ ಲೋಕಕ್ಕೆ ಕಾಲಿಟ್ಟರು.

66

ಕೌಸ್ತುಭ ಮಣಿ (Kaustubha Mani) ಡಿಸೆಂಬರ್ 25, 1999 ರಂದುಬೆಂಗಳೂರಿನಲ್ಲಿ ಜನಿಸಿದರು. ಈ ನಟಿ ಸಿರೀಯಲ್ ಗಳಲ್ಲಿ ಸದಾ ಟ್ರೆಡಿಶನಲ್ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಇವರ ಸೋಶಿಯಲ್ ಮೀಡಿಯಾ ಪೇಜ್ ನೋಡಿದ್ರೆ ಅಲ್ಲೂ ಸಹ ಟ್ರೆಡಿಶನಲ್ ಬಟ್ಟೆಯಲ್ಲಿಯೇ ನಟಿ ಕಾಣಿಸಿಕೊಂಡಿದ್ದಾರೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಅರ್ಜುನ್ ಜನ್ಯ
ಸ್ಯಾಂಡಲ್‌ವುಡ್
ಉಪೇಂದ್ರ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved