MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನಟ ದಿಗಂತ್ ಎಡಗೈಯೇ ಅಪಘಾತಕ್ಕೆ ಕಾರಣ ಎಂದ ಕಿಚ್ಚ ಸುದೀಪ್: ಅಷ್ಟಕ್ಕೂ ಆಗಿದ್ದೇನು?

ನಟ ದಿಗಂತ್ ಎಡಗೈಯೇ ಅಪಘಾತಕ್ಕೆ ಕಾರಣ ಎಂದ ಕಿಚ್ಚ ಸುದೀಪ್: ಅಷ್ಟಕ್ಕೂ ಆಗಿದ್ದೇನು?

ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಟ್ರೇಲರನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಚಿತ್ರರಂಗದ ಹಲವು ಘಟಾನುಘಟಿಗಳು ಮೆಚ್ಚಿಕೊಂಡಿದ್ದಾರೆ.

1 Min read
Govindaraj S
Published : Jun 09 2025, 05:44 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಸಮರ್ಥ ಕಡಕೋಳ ನಿರ್ದೇಶನದ, ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಟ್ರೇಲರನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.

26
Image Credit : Asianet News

‘ಸಿನಿಮಾ ವಿಶಿಷ್ಟವಾಗಿರುವುದಕ್ಕೆ ಪ್ರಯತ್ನ ಪಟ್ಟಾಗ ಆ ಸಿನಿಮಾ ವೀಕ್ಷಣೆಗೊಳಪಡುವ ಅರ್ಹತೆ ಗಳಿಸುತ್ತದೆ’ ಎಂದು ಈ ವೇಳೆ ಸುದೀಪ್ ಹೇಳಿದ್ದಾರೆ. ಈ ಚಿತ್ರ ಜೂ.13ರಂದು ಬಿಡುಗಡೆಯಾಗುತ್ತಿದೆ.

Related Articles

Related image1
500 ವರ್ಷಗಳ ಹಿಂದಿನ ಪಿನಾಕ ಸಾಮ್ರಾಜ್ಯದ ಕತೆ: ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌
Related image2
ದಿಗಂತ್ ಎಡಗೈಗೆ ಕೈಜೋಡಿಸಿದ ಬ್ಲಿಂಕ್ ಮತ್ತು ಶಾಖಾಹಾರಿ ನಿರ್ಮಾಪಕರು!
36
Image Credit : Asianet News

ಟ್ರೇಲರನ್ನು ರಿಷಬ್‌ ಶೆಟ್ಟಿ, ಶಿವರಾಜ್‌ ಕುಮಾರ್‌ ಸೇರಿದಂತೆ ಚಿತ್ರರಂಗದ ಹಲವು ಘಟಾನುಘಟಿಗಳು ಮೆಚ್ಚಿಕೊಂಡಿದ್ದಾರೆ. ಸಮರ್ಥ ಕಡಕೋಳ ಈ ಹಿಂದೆ ರಿಷಬ್ ನಟನೆಯ ‘ಆ್ಯಂಟಗನಿ ಶೆಟ್ಟಿ’ ಸಿನಿಮಾ ನಿರ್ದೇಶನ ಮಾಡಬೇಕಿತ್ತು.

46
Image Credit : Asianet News

ಆದರೆ ಈ ಸಿನಿಮಾ ಕಾರಣಾಂತರಗಳಿಂದ ಮುಂದೆ ಹೋಗಿದ್ದರಿಂದ ಸಮರ್ಥ್ ಎಡಗೈ ಬಳಸುವವರ ಕಷ್ಟ ಸುಖಗಳನ್ನು ಈ ವಿಶಿಷ್ಟ ಕಥಾ ಹಂದರದ ಸಿನಿಮಾ ಮೂಲಕ ಹೇಳಿದ್ದಾರೆ. ವಿಭಿನ್ನವಾಗಿ ಮೂಡಿ ಬಂದಿರುವ ಟ್ರೇಲರ್‌ಗೆ ಮೆಚ್ಚುಗೆ ಹರಿದು ಬರುತ್ತಿದೆ.

56
Image Credit : Asianet News

ಅಲ್ಲದೇ ಚಿತ್ರತಂಡ ಹಲವಾರು ಹೊಸ ರೀತಿಯ ಡಿಜಿಟಲ್ ಪ್ರಚಾರಗಳನ್ನು ಕೈಗೊಂಡಿದ್ದು, ಗಮನ ಸೆಳೆಯುತ್ತಿದೆ. ನಿಧಿ ಸುಬ್ಬಯ್ಯ ಮತ್ತು ಧನು ಹರ್ಷ ನಾಯಕಿಯರಾಗಿ ನಟಿಸಿದ್ದಾರೆ.

66
Image Credit : Asianet News

ಖ್ಯಾತ ನಿರ್ದೇಶಕ ಗುರುದತ್ ಗಾಣಿಗ, ಬ್ಲಿಂಕ್ ನಿರ್ಮಾಪಕ ರವಿಚಂದ್ರ ಮತ್ತು ಶಾಖಾಹಾರಿ ಸಿನಿಮಾದ ನಿರ್ಮಾಪಕ ರಾಜೇಶ್ ಕೀಳಂಬಿ ಸೇರಿಕೊಂಡು ಈ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕಿಚ್ಚ ಸುದೀಪ್
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved