MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Darshan Arrest: ನಿಜವಾಗೇ ಹೋಯ್ತು ದರ್ಶನ್​ ಕುರಿತ ಕೋಡಿಶ್ರೀ ನುಡಿ: ನಟನ ಭವಿಷ್ಯವೇನು?

Darshan Arrest: ನಿಜವಾಗೇ ಹೋಯ್ತು ದರ್ಶನ್​ ಕುರಿತ ಕೋಡಿಶ್ರೀ ನುಡಿ: ನಟನ ಭವಿಷ್ಯವೇನು?

ನಟ ದರ್ಶನ್​, ಪವಿತ್ರಾ ಗೌಡ ಸೇರಿದಂತೆ ಇನ್ನು ಇತರರಿಗೆ ಸಿಕ್ಕ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಗೊಳಿಸುತ್ತಲೇ ಎಲ್ಲರ ಅರೆಸ್ಟ್​ ಆಗಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ವಿಡಿಯೋ ವೈರಲ್​ ಆಗಿದೆ. 

2 Min read
Suchethana D
Published : Aug 14 2025, 05:44 PM IST
Share this Photo Gallery
  • FB
  • TW
  • Linkdin
  • Whatsapp
17
ಜಾಮೀನು ರದ್ದು: ದರ್ಶನ್​ ಅರೆಸ್ಟ್​
Image Credit : Asianet News

ಜಾಮೀನು ರದ್ದು: ದರ್ಶನ್​ ಅರೆಸ್ಟ್​

ಬೆಂಗಳೂರು : ರೇಣುಕಾಸ್ವಾಮಿ ಭೀಕರ ಕೊ*ಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದ ಪ್ರಮುಖ ಆರೋಪಿ ನಟ ದರ್ಶನ್ ಜಾಮೀನು ರದ್ದಾಗಿರೋ ಹಿನ್ನೆಲೆಯಲ್ಲಿ, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಜೊತೆ, ಎ1 ಆರೋಪಿ ಪವಿತ್ರಾ ಗೌಡ ಕೂಡ ಅರೆಸ್ಟ್​ ಆಗಿದ್ದಾರೆ. ಜಾಮೀನು ರದ್ದಾಗುತ್ತಿದ್ದಂತೆಯೇ ದರ್ಶನ್​ ಅವರು ಎಸ್ಕೇಪ್​ ಆಗಿದ್ದರು. ಅವರನ್ನು ಬಂಧಿಸಲು ನೈಸ್ ರೋಡ್ ಬಳಿ ಪೊಲೀಸರು ಕಾದಿದ್ದರು.

27
ಪತ್ನಿಯ ಮನೆಯಲ್ಲಿ ಅವಿತಿದ್ದ ದರ್ಶನ್​
Image Credit : instagram

ಪತ್ನಿಯ ಮನೆಯಲ್ಲಿ ಅವಿತಿದ್ದ ದರ್ಶನ್​

ಆದರೆ ದರ್ಶನ್ ಪೊಲೀಸರ ಕಣ್ಣು ತಪ್ಪಿಸಿದ್ದರು. ಟೋಲ್ ಗೇಟ್ ಬಳಿಯೇ ಜೀಪ್ ಹಾಕಿಕೊಂಡು ಪೊಲೀಸರು ಕಾಯುತ್ತಿದ್ದರು. ಆದರೆ ದರ್ಶನ್ ಪೊಲೀಸರ ಕಣ್ಣು ತಪ್ಪಿಸಿ ಹೊಸಕರೆ ಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಮನೆ ಸೇರಿದ್ದರು. ಕೊನೆಗೆ ಪತ್ನಿ ಮನೆಯಿಂದಲೇ ಪೊಲೀಸರು ದರ್ಶನ್‌ ಅವರನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಬೆಂಗಳೂರಿನಲ್ಲಿ ಐದು ಜನರ ಬಂಧನವಾಗಿದೆ, ಮತ್ತಿಬ್ಬರ ಬಂಧನಕ್ಕೆ ಬೆಂಗಳೂರು ಪೊಲೀಸರು ಚಿತ್ರದುರ್ಗಕ್ಕೆ ತೆರಳಿದ್ದಾರೆ.

37
ಕೋಡಿಶ್ರೀ ಹೇಳಿದ್ದೇನು?
Image Credit : Google

ಕೋಡಿಶ್ರೀ ಹೇಳಿದ್ದೇನು?

ಇದರ ನಡುವೆಯೇ, ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಅರ್ಥಾತ್​ ಕೋಡಿಶ್ರೀ ನುಡಿದಿರುವ ಭವಿಷ್ಯವಾಣಿಯೊಂದು ಇದೀಗ ಮತ್ತೆ ವೈರಲ್​ ಆಗುತ್ತಿದೆ. ದರ್ಶನ್​ ಅವರಿಗೆ ಜಾಮೀನು ಸಿಕ್ಕ ಸಂದರ್ಭದಲ್ಲಿ ಸ್ವಾಮೀಜಿ ಈ ಭವಿಷ್ಯವನ್ನು ನುಡಿದಿದ್ದರು. ದೇಶದ ಬಗ್ಗೆ, ಕರ್ನಾಟಕ ಸರ್ಕಾರದ ಬಗ್ಗೆ ಹೇಳುತ್ತಲೇ ದರ್ಶನ್​ ಕುರಿತೂ ಸ್ವಾಮೀಜಿ ಹೇಳಿದ್ದರು. ಮಹಾಭಾರತದಲ್ಲಿ ಶ್ರೀ ಕೃಷ್ಣ ಇದ್ದ, ಹೀಗಾಗಿ ಭೀಮ ಗೆದ್ದ. ಈಗ ಶ್ರೀ ಕೃಷ್ಣ ಇಲ್ಲ ದುರ್ಯೋಧನ ಗೆಲ್ಲುತ್ತಾನೆ. ಆದರೆ, ಅದು ಕ್ಷಣಿಕ ಪಾಪದ ಪಾಷಣ ಕಳೆದ ಮೇಲೆ, ಪಾಪ ಮಾಡಿದವ ಶಿಕ್ಷೆ ಅನುಭವಿಸಲೇಬೇಕು ಎಂದಿದ್ದರು.

47
ಜೈಲಿನಿಂದ ಹೊರಬರುತ್ತಲೇ ಭವಿಷ್ಯವಾಣಿ
Image Credit : Asianet News

ಜೈಲಿನಿಂದ ಹೊರಬರುತ್ತಲೇ ಭವಿಷ್ಯವಾಣಿ

ದರ್ಶನ್​, ಪವಿತ್ರಾ ಗೌಡ ಸೇರಿದಂತೆ ಕೆಲವರಿಗೆ ಜಾಮೀನು ಸಿಕ್ಕು ಹೊರಕ್ಕೆ ಬಂದ ಮೇಲೆ, ಅವರು ಮತ್ತೆ ಜೈಲು ಸೇರುವುದು ನಿಶ್ಚಿತ ಎನ್ನುವ ಅರ್ಥದಲ್ಲಿ ಕೋಡಿಶ್ರೀ ಹೇಳಿದ್ದು, ಅದೀಗ ನಿಜವಾಗಿದೆ. ಅವರು ಹೇಳಿದ್ದೇನೆಂದರೆ, ಮಾಡಿದ ಪಾಪವನ್ನು ಅನುಭವಿಸಲೇಬೇಕು. ಪುಣ್ಯದ ಕೆಲಸ ಮಾಡಲು ಭಯಪಡಬಾರದು, ಜನರು ಅದ್ಯಾಕೋ ಭಯಪಡುತ್ತಿದ್ದಾರೆ, ಪಾಪದ ಪಾಷಾಣ ಕಳೆಯಬೇಕು,ಪಾಪದ ಕೆಲಸ ಮಾಡುವ ಮುಂಚೇಯೇ ಹೆದರಬೇಕಿತ್ತು ಎಂದಿದ್ದರು.

57
ಕೋಡಿಮಠದ ಸ್ವಾಮೀಜಿ ಭವಿಷ್ಯ
Image Credit : Asianet News

ಕೋಡಿಮಠದ ಸ್ವಾಮೀಜಿ ಭವಿಷ್ಯ

ದೊಡ್ಡ ದೊಡ್ಡವರೆಲ್ಲ ಜೈಲಿಗೆ ಹೋಗ್ತಾರೆ ಅಂತ ನಾನು ಈ ಹಿಂದೆಯೇ ಹೇಳಿದ್ದೆ. ಮುಂದೆ ಮತ್ತಷ್ಟು ಗಂಡಾಂತರಗಳು ಕಾದಿದೆ. ಸದ್ಯಕ್ಕೆ ಅವುಗಳನ್ನು ನಾನು ಹೇಳುವುದಿಲ್ಲ ಎಂದು ಕೂಡ ಅವರು ನುಡಿದಿದ್ದರು.

67
ಪತ್ನಿ ಮನೆಯಿಂದ ದರ್ಶನ್​ ಬಂಧನ
Image Credit : Google

ಪತ್ನಿ ಮನೆಯಿಂದ ದರ್ಶನ್​ ಬಂಧನ

ಇನ್ನು ದರ್ಶನ್​ ಜಾಮೀನಿನ ಕುರಿತು ಲೇಟೆಸ್ಟ್​ ವರದಿಗಳ ಪ್ರಕಾರ, ಸದ್ಯ ವಿಜಯಲಕ್ಷ್ಮಿ ನಿವಾಸದಿಂದ ಬಂಧನವಾಗಿರುವ ದರ್ಶನ್‌ ನನ್ನು ಪೊಲೀಸರು ಅನ್ನಪೂರ್ಣೇಶ್ವರಿ ಠಾಣೆಗೆ ಕರೆತಂದಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ನಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಿದ್ದಾರೆ. ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಪೊಲೀಸ್‌ ಠಾಣೆಯಲ್ಲಿದ್ದು, ಈಕೆಯ ಜೊತೆಗೆ ಲಕ್ಷ್ಮಣ್, ಪ್ರದೋಷ್, ನಾಗಾರಾಜ್ ಬಂಧನವಾಗಿದೆ.

77
ಚಿತ್ರದುರ್ಗಕ್ಕೆ ಪೊಲೀಸರು
Image Credit : Asianet News

ಚಿತ್ರದುರ್ಗಕ್ಕೆ ಪೊಲೀಸರು

ಚಿತ್ರದುರ್ಗದ ಇಬ್ಬರು ಆರೋಪಿಗಳಾದ ಎ6 ಅನುಕುಮಾರ್, ಎ7 ಜಗದೀಶ್ ಅನ್ನು ವಶಕ್ಕೆ ಪಡೆಯಲು ಕಾಮಾಕ್ಷಿಪಾಳ್ಯ ಠಾಣೆ ಎಸ್ ಐ ವಿನಾಯಕ ನೇತೃತ್ವದ ಟೀಮ್ ಚಿತ್ರದುರ್ಗಕ್ಕೆ ತೆರಳಿದೆ. ಆರೋಪಿಗಳ ಮೆಡಿಕಲ್ ಚೆಕಪ್ ಮಾಡಿಸಲು ವೈದ್ಯರನ್ನು ಪೊಲೀಸರು ಠಾಣೆಗೆ ಕರೆಸಿದ್ದಾರೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ದರ್ಶನ್ ತೂಗುದೀಪ
ರೇಣುಕಾಸ್ವಾಮಿ ಪ್ರಕರಣ
ಸ್ಯಾಂಡಲ್‌ವುಡ್
ಕ್ರೈಮ್ ನ್ಯೂಸ್
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved