MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • 'ಪ್ರಳಯಾಂತಕ' ರವಿಚಂದ್ರನ್ ಮಗ ಮನೋರಂಜನ್ ಈ ಲುಕ್‌ 'ಶಾಂತಿ'ಯಲ್ಲ ಕ್ರಾಂತಿಯೇ' ಅಂತೀರಾ?

'ಪ್ರಳಯಾಂತಕ' ರವಿಚಂದ್ರನ್ ಮಗ ಮನೋರಂಜನ್ ಈ ಲುಕ್‌ 'ಶಾಂತಿ'ಯಲ್ಲ ಕ್ರಾಂತಿಯೇ' ಅಂತೀರಾ?

ರವಿಚಂದ್ರನ್‌ ಪುತ್ರ ಮನೋರಂಜನ್‌ ಮೊದಲ ಬಾರಿ ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿ.ಕೆ.ಚಂದ್ರಹಾಸ ನಿರ್ದೇಶನದ ‘ಕೌಂತೇಯ’ ಎಂಬ ಮರ್ಡರ್‌ ಮಿಸ್ಟ್ರಿಯಲ್ಲಿ ವಿಶಿಷ್ಟ ಪಾತ್ರದಲ್ಲಿ ನಟಿಸುತ್ತಿದ್ದಾರೆ.

1 Min read
Govindaraj S
Published : Dec 04 2025, 04:51 PM IST
Share this Photo Gallery
  • FB
  • TW
  • Linkdin
  • Whatsapp
16
ಮರ್ಡರ್ ಮಿಸ್ಟ್ರಿ ಕಥಾಹಂದರ
Image Credit : Social Media

ಮರ್ಡರ್ ಮಿಸ್ಟ್ರಿ ಕಥಾಹಂದರ

ಇತ್ತೀಚೆಗಷ್ಟೇ ಮುಹೂರ್ತ ಆಚರಿಸಿಕೊಂಡಿದ್ದ ಮನೋರಂಜನ್ ಹಾಗೂ ಅಚ್ಯುತ್ ಕುಮಾರ್ ಪ್ರಮುಖ ಭೂಮಿಕೆಯಲ್ಲಿರುವ ಕೌಂತೇಯ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮರ್ಡರ್ ಮಿಸ್ಟ್ರಿ ಕಥಾಹಂದರವಿರುವ ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಪಾಸಿಟಿವ್ ಕ್ಯಾರೆಕ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

26
ನೆಗೆಟಿವ್‌ ಶೇಡ್‌ನಲ್ಲಿ ಮನೋರಂಜನ್
Image Credit : Social Media

ನೆಗೆಟಿವ್‌ ಶೇಡ್‌ನಲ್ಲಿ ಮನೋರಂಜನ್

ಇದೇ ಮೊದಲ ಬಾರಿಗೆ ರವಿಚಂದ್ರನ್ ಪುತ್ರ ಮನೋರಂಜನ್ ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಗೆಟಪ್ ಸಹ ಭಿನ್ನವಾಗಿದ್ದು, ಯಾಕಾಗಿ ಅವರು ನೆಗೆಟಿವ್ ಪಾತ್ರ ನಿಭಾಯಿಸುತ್ತಿದ್ದಾರೆ ಎಂಬುದು ಸದ್ಯಕ್ಕೆ ಗೌಪ್ಯವಾಗಿರಿಸಿದೆ ‘ಕೌಂತೇಯ’ ತಂಡ.

Related Articles

Related image1
ಟಿವಿ ರೈಟ್ಸ್‌ ಸೇಲ್‌ ಆಗಿದ್ದಕ್ಕೆ 2 ವರ್ಷದ ನಂತರ ರವಿಚಂದ್ರನ್‌ ಸಿನಿಮಾ ಬಿಡುಗಡೆ ಮಾಡಿದ ನಿರ್ಮಾಪಕರು!
Related image2
ರಿಷಬ್‌ ಶೆಟ್ಟಿಗೆ ಗೌರವ ನಮನ: ಕುಂದಾಪುರದಲ್ಲಿ ದಿಗ್ಗಜರ ಸಮ್ಮುಖದಲ್ಲಿ 'ರಿಷಭೋತ್ಸವ': ಯಾವಾಗ?
36
ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್
Image Credit : Social Media

ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್

ಮನೋರಂಜನ್‌ಗೆ ಜೋಡಿಯಾಗಿ ಅನನ್ಯ ರಾಜಶೇಖರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪ್ರಮುಖ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಅನನ್ಯ, ಆರಂಭದಲ್ಲೇ ಮುಖ್ಯ ಪಾತ್ರ ದೊರೆತ ಖುಷಿಯಲ್ಲಿದ್ದಾರೆ. ಇನ್ನು ಎಸಿಪಿಯಾಗಿ ಪ್ರಿಯಾಂಕಾ ತಿಮ್ಮೇಶ್ ಇದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಖಾಕಿ ತೊಟ್ಟು ಕಂಗೊಳಿಸುತ್ತಿದ್ದಾರೆ.

46
ಅಚ್ಯುತ್ ಕುಮಾರ್ ಮಗಳಾದ ಶರಣ್ಯ
Image Credit : Social Media

ಅಚ್ಯುತ್ ಕುಮಾರ್ ಮಗಳಾದ ಶರಣ್ಯ

ಶರಣ್ಯ ಶೆಟ್ಟಿ ಚಿತ್ರದ ನಾಯಕಿ. ಅಚ್ಯುತ್ ಕುಮಾರ್ ಮಗಳ ಪಾತ್ರದಲ್ಲಿ ಶರಣ್ಯ ಕಾಣಿಸಿಕೊಂಡಿದ್ದಾರೆ. ಶ್ರೀ ಮಾಂಕಾಳಿ ಪಿಕ್ಚರ್ಸ್‌ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಸಿನಿಮಾಕ್ಕೆ ಸುರೇಶ್ ಕುಮಾರ್ ಬಂಡವಾಳ ಹೂಡಿದ್ದಾರೆ.

56
ಮೈಸೂರಿನ ಸುತ್ತಮುತ್ತ ಶೂಟಿಂಗ್
Image Credit : Social Media

ಮೈಸೂರಿನ ಸುತ್ತಮುತ್ತ ಶೂಟಿಂಗ್

ಬಿ.ಕೆ.ಚಂದ್ರಹಾಸ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇವರ ಜತೆ ಚಿತ್ರಕಥೆಗೆ ಸಾಥ್ ನೀಡುವುದರ ಜತೆಗೆ ಸಂಭಾಷಣೆಗೆ ಪೆನ್ನು ಹಿಡಿದಿದ್ದಾರೆ ಹರಿ. ಪಿ.ಎಲ್.ರವಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬಹುತೇಕ ಮೈಸೂರಿನ ಸುತ್ತಮುತ್ತ ಶೂಟಿಂಗ್ ನಡೆಸಿರುವ ಚಿತ್ರತಂಡ, ಈಗಾಗಲೇ ಶೇ.70ರಷ್ಟು ಮುಗಿಸಿದೆ.

66
ಕೌಂತೇಯ ಯಾರು?
Image Credit : Social Media

ಕೌಂತೇಯ ಯಾರು?

ಕೌಂತೇಯ ಅಂದರೆ ಕುಂತಿಪುತ್ರ ಎಂದರ್ಥ. ಈ ಚಿತ್ರದಲ್ಲಿ ಕೌಂತೇಯ ಯಾರು ಎಂಬುದು ಒಂದೆಡೆಯಾದರೆ, ಮತ್ತೊಂದೆಡೆ ಮರ್ಡರ್ ಮಿಸ್ಟ್ರಿ ಕಥೆಯನ್ನು ಕೌತುಕವಾಗಿ ತೆಗೆದುಕೊಂಡು ಹೋಗಿರುವುದೇ ಈ ಚಿತ್ರದ ವಿಶೇಷ ಎಂದರು ನಿರ್ದೇಶಕ ಚಂದ್ರಹಾಸ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರವಿಚಂದ್ರನ್
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಸಿನಿಮಾ

Latest Videos
Recommended Stories
Recommended image1
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!
Recommended image2
ಎವರ್‌ಗ್ರೀನ್ ನಟ ರಾಮ್ ಕುಮಾರ್ ಬರ್ತ್ ಡೇ… 57ರಲ್ಲೂ ಯಂಗ್ ಎಂದ ಮಗಳು
Recommended image3
ಆ 'ಕರಾಳ ಮುಖ'ದ ವಿರುದ್ಧ ಸಿಡಿದೆದ್ದ ರಶ್ಮಿಕಾ ಮಂದಣ್ಣ; 'ಕಣ್ಣಿಗೆ ಕಂಡಿದ್ದೆಲ್ಲವೂ ಸತ್ಯವಲ್ಲ' ಅಂದಿದ್ಯಾಕೆ?
Related Stories
Recommended image1
ಟಿವಿ ರೈಟ್ಸ್‌ ಸೇಲ್‌ ಆಗಿದ್ದಕ್ಕೆ 2 ವರ್ಷದ ನಂತರ ರವಿಚಂದ್ರನ್‌ ಸಿನಿಮಾ ಬಿಡುಗಡೆ ಮಾಡಿದ ನಿರ್ಮಾಪಕರು!
Recommended image2
ರಿಷಬ್‌ ಶೆಟ್ಟಿಗೆ ಗೌರವ ನಮನ: ಕುಂದಾಪುರದಲ್ಲಿ ದಿಗ್ಗಜರ ಸಮ್ಮುಖದಲ್ಲಿ 'ರಿಷಭೋತ್ಸವ': ಯಾವಾಗ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved