MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಶೂಟಿಂಗ್‌ನಲ್ಲಿ ಲಕ್ಷಾಂತರ ನಷ್ಟ, ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು!

ಶೂಟಿಂಗ್‌ನಲ್ಲಿ ಲಕ್ಷಾಂತರ ನಷ್ಟ, ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು!

 ಚಿಕ್ಕಮಗಳೂರು ಮೂಲದ ದೀಪಕ್ ಮಯೂರ್ ಪಟೇಲ್, ನಟ ಸುದೀಪ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಿದ್ದಾರೆ. 2016ರಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ, ಚಿತ್ರೀಕರಣ ತಂಡವು ತೋಟವನ್ನು ಹಾಳುಗೆಡವಿ, ಪರಿಹಾರ ನೀಡದೆ ವಂಚಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

2 Min read
Author : Gowthami K
Published : Jan 20 2026, 04:54 PM IST
Share this Photo Gallery
  • FB
  • TW
  • Linkdin
  • Whatsapp
18
ಲಕ್ಷಾಂತರ ರೂಪಾಯಿ ನಷ್ಟ, ಕಿಚ್ಚನ ವಿರುದ್ಧ ದೂರು
Image Credit : Asianet News

ಲಕ್ಷಾಂತರ ರೂಪಾಯಿ ನಷ್ಟ, ಕಿಚ್ಚನ ವಿರುದ್ಧ ದೂರು

ಚಿಕ್ಕಮಗಳೂರು: ಚಲನಚಿತ್ರ ಹಾಗೂ ಧಾರಾವಾಹಿ ಚಿತ್ರೀಕರಣದ ನೆಪದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ಚಿಕ್ಕಮಗಳೂರು ಮೂಲದ ದೀಪಕ್ ಮಯೂರ್ ಪಟೇಲ್ ಅವರು ನಟ ಸುದೀಪ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಗಿಸಿರುವ ಕಿಚ್ಚನಿಗೆ ಈ ಪ್ರಕರಣ ತಲೆ ನೋವು ತಂದಿಟ್ಟಿದೆ.

28
ದೀಪಕ್ ಮಯೂರ್ ಪಟೇಲ್ ದೂರು
Image Credit : Asianet News

ದೀಪಕ್ ಮಯೂರ್ ಪಟೇಲ್ ದೂರು

ದೀಪಕ್ ಮಯೂರ್ ಪಟೇಲ್ ಅವರು ನೀಡಿರುವ ದೂರಿನ ಅನ್ವಯ ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮದ ಸರ್ವೇ ನಂಬರ್ 275ರಲ್ಲಿ ಇರುವ ತಮ್ಮ ಸ್ವಂತ ತೋಟದ ಜಾಗದಲ್ಲಿ ‘ವಾರಸ್ಥಾರ’ ಧಾರಾವಾಹಿಯ ಚಿತ್ರೀಕರಣ ನಡೆಸಲು 2016ರಲ್ಲಿ ಅನುಮತಿ ಕೋರಲಾಗಿತ್ತು. ಸುಮಾರು ಎರಡು ವರ್ಷಗಳ ಕಾಲ ಚಿತ್ರೀಕರಣಕ್ಕೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದು, ವಾಸ್ತವವಾಗಿ ನಾಲ್ಕು ತಿಂಗಳ ಕಾಲ ಚಿತ್ರೀಕರಣ ನಡೆದಿತ್ತು ಎಂದು ಅವರು ತಿಳಿಸಿದ್ದಾರೆ. ಇದೀಗ ಹಳೆಯ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.

Related Articles

Related image1
BBK 12: ಗ್ರಾಂಡ್ ಫಿನಾಲೆ ಬಳಿಕ ಕಿಚ್ಚ ಸುದೀಪ್ ಮೇಲೆ ಮುಗಿಬಿದ್ದ ಕೆಲವರು.. ಸೋಷಿಯಲ್ ಮೀಡಿಯಾ ಟೀಕೆಗೆ ಏನರ್ಥ?
Related image2
BBK 12 Finale: ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲದಿದ್ದರೆ 'ಕಿಚ್ಚ ಸುದೀಪ್' ಮಂಡ್ಯ ಜಿಲ್ಲೆಗೆ ಕಾಲಿಡುವಂತಿಲ್ಲ!
38
ಚಿತ್ರೀಕರಣದ ವೇಳೆ ತೋಟಕ್ಕೆ ಭಾರೀ ಹಾನಿ
Image Credit : Asianet News

ಚಿತ್ರೀಕರಣದ ವೇಳೆ ತೋಟಕ್ಕೆ ಭಾರೀ ಹಾನಿ

ದೂರುದಾರರ ಹೇಳಿಕೆಯಂತೆ, ಧಾರಾವಾಹಿಯ ಕಲಾವಿದರು ಹಾಗೂ ತಾಂತ್ರಿಕ ಸಿಬ್ಬಂದಿ ವಾಸಿಸಲು ಶೆಡ್‌ಗಳನ್ನು ನಿರ್ಮಿಸುವ ಸಲುವಾಗಿ ಕಾಫಿ ಗಿಡಗಳು, ಸಿಲ್ವರ್ ಮರಗಳು ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಹಾಕಲಾಗಿದೆ. ಇದರಿಂದ ತೋಟಕ್ಕೆ ಗಂಭೀರ ಹಾನಿಯಾಗಿದ್ದು, ಒಂದು ಎಕರೆ ಜಾಗ ಸಂಪೂರ್ಣವಾಗಿ ನಾಶವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

48
 ನೋಟ್‌ಬ್ಯಾಂಕ್ ನಂತರ ಚಿತ್ರೀಕರಣ ಸ್ಥಗಿತ
Image Credit : Asianet News

ನೋಟ್‌ಬ್ಯಾಂಕ್ ನಂತರ ಚಿತ್ರೀಕರಣ ಸ್ಥಗಿತ

ನೋಟ್‌ಬ್ಯಾಂಕ್ ಘೋಷಣೆಯ ನಂತರ ಚಿತ್ರೀಕರಣ ತಂಡವು ಬೆಂಗಳೂರು ಕಡೆಗೆ ವಾಪಸ್ ತೆರಳಿದ್ದು, ಬಳಿಕ ತೋಟದ ಜಾಗವನ್ನು ಸರಿಪಡಿಸದೇ ಹಾಗೆಯೇ ಬಿಟ್ಟು ಹೋಗಿದ್ದಾರೆ ಎಂಬ ಆರೋಪವಿದೆ. ತೋಟದ ಹಾನಿ ಸರಿಪಡಿಸಲು ಹಾಗೂ ನಷ್ಟವಾಗಿ ನೀಡಬೇಕಿದ್ದ ಸುಮಾರು 80 ಸಾವಿರ ರೂಪಾಯಿ ಹಣವನ್ನೂ ಪಾವತಿಸಿಲ್ಲ ಎಂದು ದೀಪಕ್ ಮಯೂರ್ ಪಟೇಲ್ ದೂರಿದ್ದಾರೆ.

58
ಪರಿಹಾರ ನೀಡದೇ ನಿರ್ಲಕ್ಷ್ಯ ಆರೋಪ
Image Credit : social media

ಪರಿಹಾರ ನೀಡದೇ ನಿರ್ಲಕ್ಷ್ಯ ಆರೋಪ

ಚಿತ್ರೀಕರಣದಿಂದ ತಮಗೆ ಉಂಟಾದ ನಷ್ಟಕ್ಕೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿರುವ ದೀಪಕ್, ಈ ವಿಷಯದಲ್ಲಿ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾಗಿದ್ದಾರೆ. 2016ರಿಂದಲೂ ಚಿಕ್ಕಮಗಳೂರು ಎಸ್ಪಿ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

68
ಕೋರ್ಟ್ ಮೆಟ್ಟಿಲು ಏರಿದ್ದ ಪ್ರಕರಣ
Image Credit : Colors Kannada

ಕೋರ್ಟ್ ಮೆಟ್ಟಿಲು ಏರಿದ್ದ ಪ್ರಕರಣ

ಈ ಪ್ರಕರಣ ಈ ಹಿಂದೆ ನ್ಯಾಯಾಲಯದ ಮೆಟ್ಟಿಲು ಕೂಡ ಏರಿದ್ದು, ಆದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ದೂರುದಾರರು ಹೇಳಿದ್ದಾರೆ. ಮತ್ತೆ ಇದೇ ವರ್ಷದ ಜನವರಿ 16ರಂದು ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಹೊಸದಾಗಿ ದೂರು ಸಲ್ಲಿಸಿದ್ದಾರೆ.

ಕೋ-ಪ್ರೊಡ್ಯೂಸರ್ ವಿರುದ್ಧವೂ ಆರೋಪ

ದೂರಿನಲ್ಲಿ ನಟ ಸುದೀಪ್ ಜೊತೆಗೆ ಧಾರಾವಾಹಿಯ ಕೋ-ಪ್ರೊಡ್ಯೂಸರ್‌ಗಳಾದ ಮಹೇಶ್ ಹಾಗೂ ಗಡ್ಡ ವಿಜಿ ಅವರ ಹೆಸರುಗಳನ್ನೂ ಉಲ್ಲೇಖಿಸಲಾಗಿದ್ದು, ಚಿತ್ರೀಕರಣದ ವೇಳೆ ಇವರು ಸ್ಥಳಕ್ಕೆ ಬಂದು ವ್ಯವಸ್ಥೆಗಳನ್ನು ನೋಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

78
ಬೈಗೂರು ಗ್ರಾಮದಲ್ಲಿ ನಡೆದ ಚಿತ್ರೀಕರಣ
Image Credit : Colors Kannada

ಬೈಗೂರು ಗ್ರಾಮದಲ್ಲಿ ನಡೆದ ಚಿತ್ರೀಕರಣ

ಬೈಗೂರು ಗ್ರಾಮದ ಸರ್ವೇ ನಂಬರ್ 275ರಲ್ಲಿ ಸುಮಾರು ಒಂದು ಎಕರೆ ಜಾಗದಲ್ಲಿ ಧಾರಾವಾಹಿ ಚಿತ್ರೀಕರಣ ನಡೆದಿದ್ದು, ಆ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕಿತ್ತುಹಾಕಿ ನಷ್ಟ ಉಂಟು ಮಾಡಲಾಗಿದೆ ಎಂದು ದೀಪಕ್ ಮಯೂರ್ ಪಟೇಲ್ ಆರೋಪಿಸಿದ್ದಾರೆ. ಈ ಸಂಬಂಧ ನ್ಯಾಯಕ್ಕಾಗಿ ಮತ್ತೊಮ್ಮೆ ಅಧಿಕಾರಿಗಳ ಮೊರೆ ಹೋಗಿರುವ ಅವರು, ತಮಗೆ ಉಂಟಾದ ನಷ್ಟಕ್ಕೆ ತಕ್ಷಣ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಈ ದೂರಿನ ಮೇಲೆ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

88
2020ರಲ್ಲಿ ವಿವಾದಕ್ಕೆ ತೆರೆ
Image Credit : Colors Kannada

2020ರಲ್ಲಿ ವಿವಾದಕ್ಕೆ ತೆರೆ

ನಟ ಸುದೀಪ್ ತಮ್ಮ ಕಿಚ್ಚ ಕ್ರಿಯೇಷನ್ ಮೂಲಕ ಈ ಸೀರಿಯಲ್ ತೆಗೆದಿದ್ದರು.'ವಾರಸ್ದಾರ' ಗಡ್ಡ ವಿಜಿ ನಿರ್ದೇಶನದ ಮೂಲಕ ಶುರು ಆಗಿದ್ದ ಧಾರಾವಾಹಿ. ಯಜ್ಞ ಶೆಟ್ಟಿ ಈ ಧಾರಾವಾಹಿಯಲ್ಲಿ ನಾಯಕಿ. 2020ರಲ್ಲಿ ವಿವಾದಗಳ ಕುರಿತು ದಾಖಲಾಗಿದ್ದ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿತ್ತು. ಮನೆಯ ಮಾಲೀಕರಿಗೆ ಬಾಡಿಗೆ ಹಣ ಪಾವತಿಸದೆ ವಂಚಿಸಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿತ್ತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಿಕ್ಕಮಗಳೂರು
ಕಿಚ್ಚ ಸುದೀಪ್
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ಬಿಗ್ ಬಾಸ್ ಕನ್ನಡ

Latest Videos
Recommended Stories
Recommended image1
ನಟಿ ಪವಿತ್ರಾ ಗೌಡಗೆ 'ಮನೆ ಊಟ' ಕೊಡಲೇಬೇಡಿ; ಸೆಷನ್ಸ್ ಕೋರ್ಟ್ ಊಟದ ಆದೇಶಕ್ಕೆ ಹೈಕೋರ್ಟ್ ತಡೆ!
Recommended image2
ಜೊತೆಗೆ ಪೂಜೆ ಮಾಡಿ, ಹಬ್ಬದೂಟ ಸವಿದ ಚಂದನವನದ ತಾರೆಯರು… Photo Viral
Recommended image3
ತವರಿನಲ್ಲಿ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟಗೆ ಅದ್ಧೂರಿ ಸ್ವಾಗತ
Related Stories
Recommended image1
BBK 12: ಗ್ರಾಂಡ್ ಫಿನಾಲೆ ಬಳಿಕ ಕಿಚ್ಚ ಸುದೀಪ್ ಮೇಲೆ ಮುಗಿಬಿದ್ದ ಕೆಲವರು.. ಸೋಷಿಯಲ್ ಮೀಡಿಯಾ ಟೀಕೆಗೆ ಏನರ್ಥ?
Recommended image2
BBK 12 Finale: ಗಿಲ್ಲಿ ನಟ ಬಿಗ್ ಬಾಸ್ ಟ್ರೋಫಿ ಗೆಲ್ಲದಿದ್ದರೆ 'ಕಿಚ್ಚ ಸುದೀಪ್' ಮಂಡ್ಯ ಜಿಲ್ಲೆಗೆ ಕಾಲಿಡುವಂತಿಲ್ಲ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved