ಅಂಬಿ-ವಿಷ್ಣು ಬಾಂಧವ್ಯಕ್ಕೆ ಮಸಿ ಬಳಿಯಬೇಡಿ; ಸಂಸದೆ ಸುಮಲತಾ ಮನವಿ!
ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸರ್ಕಾರ 5 ಕೋಟಿ ರೂಪಾಯಿ ಘೋಷಣೆ ಮಾಡಿದೆ. ಈ ಸಮಯದಲ್ಲಿ ನೆಟ್ಟಿಗರು ವಿಷ್ಣು ಸ್ಮಾರಕದ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಸ್ವತಃ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

<p>ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.</p>
ಸ್ಯಾಂಡಲ್ವುಡ್ ರೆಬೆಲ್ ಸ್ಟಾರ್ ಮಂಡ್ಯದ ಗಂಡು ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಜನವರಿಯಲ್ಲಿ ಪ್ರತಿಷ್ಠಾನ ರಚಿಸಲಾಗಿತ್ತು.
<p>ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು. </p>
ನಿನ್ನೆ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಅಂಬರೀಶ್ ಇಬ್ಬರೂ ಭಾಗಿಯಾಗಿದ್ದರು.
<p>ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. </p>
ಎಂಟು ಸದಸ್ಯರ ಸಮಿತಿಯಲ್ಲಿ ನಡೆದ ಮೊದಲ ಸಭೆಯಲ್ಲಿ ಸರ್ಕಾರದಿಂದ 5 ಕೋಟಿ ಘೋಷಣೆ ಮಾಡಲಾಗಿದೆ.ಈ ವಿಷಯ ಹೊರಬೀಳುತ್ತಿದ್ದಂತೆ ಸಾಹಸಸಿಂಹ ಡಾ ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
<p> ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.</p>
ಡಾ.ವಿಷ್ಣುವರ್ಧನ ಸ್ಮಾರಕದ ವಿಚಾರವನ್ನು ಸಂಸದೆ ಸುಮಲತಾ ಹಾಗೂ ಸರ್ಕಾರ ಕಡೆಗಣಿಸಿದೆ ಎನ್ನುವ ಆರೋಪ ವಿಷ್ಣು ಅಭಿಮಾನಿಗಳ ವಲಯದಿಂದ ಕೇಳಿ ಬರುತ್ತಿದೆ.
<p>ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.</p>
ಈ ವಿಚಾರದ ಬಗ್ಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.
<p> 'ನಮ್ಮ ಪ್ರೀತಿಯ ವಿಷ್ಣುವರ್ಧನ್ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'</p>
'ನಮ್ಮ ಪ್ರೀತಿಯ ವಿಷ್ಣುವರ್ಧನ್ ರವರ ಸ್ಮಾರಕದ ಕೆಲಸ ಮನೆಯವರ ಅಪೇಕ್ಷೆಯಂತೆ ಮೈಸೂರಿನಲ್ಲೇ 1 ವರ್ಷಗಳ ಹಿಂದೆಯೇ ಶುರು ಆಗಿರುವುದು ಕೆಲವು ಅಭಿಮಾನಿಗಳಿಗೆ ತಿಳಿದು ಬಂದಿಲ್ಲ'
<p> 'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'. </p>
'ನನಗೆ ತಿಳಿದಿರುವಂತೆ 10 ಕೋಟಿಯಲ್ಲಿ 5 ಕೋಟಿ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ'.
<p> 'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.</p>
'ಅನಗತ್ಯ ಮಾತುಗಳಿಂದ ಅಂಬಿ-ವಿಷ್ಣು ಸ್ನೇಹ ಬಾಂಧವ್ಯಕ್ಕೆ ಮಸಿ ಬಳಿಯೋದು ಬೇಡ' ಎಂದು ಮನವಿ ಮಾಡಿಕೊಂಡಿದ್ದಾರೆ.
<p>ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ 5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.</p>
ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗುತ್ತಿರುವ ಈ ಪರಿಸ್ಥಿತಿಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಅದಕ್ಕೆ 5 ಕೋಟಿ ಬಿಡುಗಡೆ ಮಾಡುವುದು ಬೇಕಿತ್ತಾ ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.
<p>ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.</p>
ಅಂಬಿ - ವಿಷ್ಣು ಜೊತೆಗಿದ್ದು ಕೆಲವೊಂದು ಫೋಟೋಗಳನ್ನು ಶೇರ್ ಮಾಡಿದ್ದಾರೆ.