MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ಶಿವಣ್ಣನ ಮನೆಯಲ್ಲಿ ಬರ್ತಡೇ ಮಾಡಿಕೊಂಡ ಅರ್ಜುನ್ ಜನ್ಯ; ಗೂಡ್ಸ್ ಆಟೋದಲ್ಲಿ ಹೋಗಿ ಕಾರ್ಯಕ್ರಮ ಕೊಡ್ತಿದ್ದ ಪ್ರತಿಭೆ!

ಶಿವಣ್ಣನ ಮನೆಯಲ್ಲಿ ಬರ್ತಡೇ ಮಾಡಿಕೊಂಡ ಅರ್ಜುನ್ ಜನ್ಯ; ಗೂಡ್ಸ್ ಆಟೋದಲ್ಲಿ ಹೋಗಿ ಕಾರ್ಯಕ್ರಮ ಕೊಡ್ತಿದ್ದ ಪ್ರತಿಭೆ!

ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ, ಸರಿಗಮಪ ತೀರ್ಪುಗಾರರಾಗಿ, ಈಗ ನಿರ್ದೇಶಕರಾಗಿ ಹೊಸ ಹೆಜ್ಜೆ ಇಟ್ಟಿರುವ ಅರ್ಜುನ್ ಜನ್ಯ ಅವರ ಸಾಧನೆಯ ಹಾದಿ. ಶಿವರಾಜ್ ಕುಮಾರ್ ಅವರೊಂದಿಗೆ 45ನೇ ಸಿನಿಮಾ ಮಾಡುತ್ತಿರುವ ಅವರು, ತಮ್ಮ ಜನ್ಮದಿನವನ್ನು ಶಿವಣ್ಣನ ಮನೆಯಲ್ಲಿ ಆಚರಿಸಿಕೊಂಡರು.

2 Min read
Author : Sathish Kumar KH
Published : May 13 2025, 03:09 PM IST
Share this Photo Gallery
  • FB
  • TW
  • Linkdin
  • Whatsapp
17

ಕನ್ನಡ ಚಿತ್ರರಂಗದ ಪ್ರತಿಭಾವಂತ ಸಂಗೀತ ನಿರ್ದೇಶಕ, ಮ್ಯೂಸಿಷಿಯನ್ ಅರ್ಜುನ್ ಜನ್ಯ ಅವರು ಹಲವು ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇದೀಗ ಸಿನಿಮಾ ನಿರ್ದೇಶನಕ್ಕೂ ಕಾಲಿಟ್ಟಿದ್ದು, ನಟ ಶಿವರಾಜ್ ಕುಮಾರ್ ಅವರೊಂದಿಗೆ 45 ಸಿನಿಮಾ ಮಾಡುತ್ತಿದ್ದಾರೆ. ಇದೀಗ ಶಿವಣ್ಣನ ಮನೆಗೆ ಹೋಗಿ ತಮ್ಮ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ. ಈ ವೇಳೆ ಗೀತಾ ಶಿವರಾಜ್ ಕುಮಾರ್ ಅವರು ಕೇಕ್ ಅನ್ನು ಅರ್ಜುನ್ ಜನ್ಯ ಅವರಿಗೆ ತಿನ್ನಿಸಿ ಸಂಸತ ನೂರ್ಮಡಿಗೊಳಿಸಿದ್ದಾರೆ.

27

ಅರ್ಜುನ್ ಜನ್ಯ ಹೆಸರು ಕೇಳಿದಾಕ್ಷಣ ಸ್ಮರಣೀಯ ಧ್ವನಿ, ಶಕ್ತಿಶಾಲಿ ಬಿಟ್‌ಗಳು, ಮನಸ್ಸಿಗೆ ತಾಕುವ ಮೆಲೋಡಿ ಹಾಡುಗಳು ನೆನಪಿಗೆ ಬರುತ್ತವೆ. ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ಅವರು, ತಮ್ಮ ಕ್ರಿಯಾತ್ಮಕ ಶಕ್ತಿಗೆ ಉದಾಹರಣೆ ಆಗಿದ್ದಾರೆ.

Related Articles

Related image1
ಮದರ್ಸ್ ಡೇ ಸ್ಪೆಷಲ್, ಅಮ್ಮನಿಗಾಗಿ ಅನುಶ್ರೀ ಮಾಡಿದ ರೊಟ್ಟಿ ಹೇಗಿತ್ತು?
Related image2
ಅದ್ದೂರಿ ಪ್ರೈವೇಟ್‌ ಜೆಟ್‌ನಲ್ಲಿ 45 ತಂಡ ದೇಶ ಸಂಚಾರ: ಫೋಟೋ ವೈರಲ್‌!
37

ಅರ್ಜನ್ ಜನ್ಯ ಅವರು 2009 ರಲ್ಲಿ ‘ಬಿರುಗಾಳಿ’ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಬೆಳಕಿಗೆ ಬಂದರು. ಈ ಸಿನಿಮಾದ ಮೂಲಕ ಅರ್ಜುನ್ ಜನ್ಯ ತಮ್ಮದೇ ಆದ ವಿಭಿನ್ನವಾದ ಸಂಗೀತ ಶೈಲಿಯಿಂದ ಹೊರಹೊಮ್ಮಿದರು. ‘ವಜ್ರಕಾಯ’, ‘ಪೈಲ್ವಾನ್’, ‘ಪೊಗರು’, ‘ವಿಕ್ರಾಂತ್ ರೋಣ’ ಮುಂತಾದ ಚಿತ್ರಗಳಲ್ಲಿ ಅವರು ನೀಡಿದ ಹಾಡುಗಳು ಹೃದಯ ಸ್ಪರ್ಶಿ ಆಗಿದ್ದೇವೆ. ಕೇವಲ ತಾಳಮೇಳವಲ್ಲ, ಅವರ ಸಂಗೀತವು ಸಿನಿಮಾದ ಭಾವನೆಗಳನ್ನೇ ಪ್ರತಿ ಬಿಂಬಿಸುತ್ತಿದೆ.
 

47

ಪ್ರಶಸ್ತಿಗಳು ಮತ್ತು ಗೌರವಗಳು:
ಅರ್ಜುನ್‌ ಅವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಅವರು ಕೇವಲ ಸಂಗೀತ ನಿರ್ದೇಶಕರಷ್ಟೇ ಅಲ್ಲ, ಹಲವು ಕಲಾ ಉಪಕರಣಗಳಲ್ಲಿ ಪರಿಣಿತರು. ಹಾರ್ಮೋನಿಯಂ, ಕೀಬೋರ್ಡ್, ಝೆಲೋ ಮತ್ತು ಸಿಂಥಸೈಸರ್‌ನಲ್ಲಿ ಪರಿಣತಿ ಹೊಂದಿದ್ದಾರೆ. ವಿಭಿನ್ನ ಶೈಲಿಯ ಸಂಗೀತ ರಚನೆಗೆ ಸದಾ ತಯಾರಾಗಿರುವ ಕಲಾವಿದ ಆಗಿದ್ದಾರೆ.

57

ಅಪರೂಪದ ಸಂಗತಿಗಳು:
ಅರ್ಜುನ್ ಜನ್ಯ ಅವರ ಮೂಲ ಹೆಸರು ‘ಲೋಕೇಶ್’. ಪ್ರಾರಂಭದಲ್ಲಿ ಅನೇಕ ಹೋಂಪ್ರೊಡಕ್ಷನ್ ಸಿನಿಮಾಗಳಿಗೆ ಬ್ಯಾಕ್‌ಗ್ರೌಂಡ್ ಮ್ಯೂಸಿಕ್ ನೀಡಿದ ಅನುಭವ ಅವರ ಧ್ವನಿ ನಿಯಂತ್ರಣವನ್ನು ಬೆಳೆಸಿತು. ಅವರ ಸಂಗೀತದಲ್ಲಿ ಹಿಂದೂಸ್ತಾನಿ, ಪಾಶ್ಚಾತ್ಯ ಮತ್ತು ಜನಪದ ಪ್ರಭಾವ ಸ್ಪಷ್ಟವಾಗಿ ಕಾಣುತ್ತದೆ.

67

ಅರ್ಜುನ್ ಜನ್ಯ ಅವರು ತಮ್ಮ ಸಂಗೀತ ನಿರ್ದೇಶನದ ಜೊತೆಗೆ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದ ಜಡ್ಜಸ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿ ಸರಿಗಮಪ ಸ್ಪರ್ಧೆಗೆ ಬಂದಿರುವ ಡಜನ್ ಗಟ್ಟಲೆ ಪ್ರತಿಭೆಗಳನ್ನು ಗುರುತಿಸಿ ಸಿನಿಮಾದ ಹಾಡನ್ನು ಹಾಡಲು ಚಾನ್ಸ್ ಕೊಟ್ಟಿದ್ದಾರೆ.

77

ಕರ್ನಾಟಕದ ಮೂಲೆ ಮೂಲೆಯ ಹಲವು ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಮಾಡಿದ್ದಾರೆ. ಇದೀಗ ಜೀ ಕನ್ನಡ ವಾಹಿನಿಯಿಂದ ಅವರಿಗೆ ಜನ್ಮದಿನದ ಶುಭಾಶಯ ಕೋರಲಾಗಿದೆ. ಅದರಲ್ಲಿ 'ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್ ಹಾಡುಗಳ ಜನಕ, ಮ್ಯಾಜಿಕಲ್ ಕಂಪೋಸರ್, ಸರಿಗಮಪ ಕಾರ್ಯಕ್ರಮದ ತೀರ್ಪುಗಾರರಾದ ಅರ್ಜುನ್ ಜನ್ಯ ಅವರಿಗೆ ಜನ್ಮದಿನದ ಶುಭಾಶಯಗಳು' ಎಂದು ಟ್ಯಾಗ್‌ಲೈನ್ ಬರೆಯಲಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಜೀ ಕನ್ನಡ
ಡಾ. ಶಿವರಾಜಕುಮಾರ್
ಸ್ಯಾಂಡಲ್‌ವುಡ್

Latest Videos
Recommended Stories
Recommended image1
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!
Recommended image2
ಜೈ ಹನುಮಾನ್ ಮುಹೂರ್ತ ಬೆನ್ನಲ್ಲೇ ಮಂತ್ರಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ, ರಾಯರ ಕುರಿತು ಸಿನಿಮಾ ಮಾಡ್ತಾರಾ ಡಿವೈನ್ ಸ್ಟಾರ್, ಹೇಳಿದ್ದೇನು?
Recommended image3
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
Related Stories
Recommended image1
ಮದರ್ಸ್ ಡೇ ಸ್ಪೆಷಲ್, ಅಮ್ಮನಿಗಾಗಿ ಅನುಶ್ರೀ ಮಾಡಿದ ರೊಟ್ಟಿ ಹೇಗಿತ್ತು?
Recommended image2
ಅದ್ದೂರಿ ಪ್ರೈವೇಟ್‌ ಜೆಟ್‌ನಲ್ಲಿ 45 ತಂಡ ದೇಶ ಸಂಚಾರ: ಫೋಟೋ ವೈರಲ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved