MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಭಯಪಟ್ಟು ಮಾಡಿರುವ ಪಾತ್ರ ನನ್ನದು.. ತುಂಬಾ ಖುಷಿ ಇದೆ: ಪ್ರಜ್ವಲ್ ದೇವರಾಜ್ ಹೇಳಿದ್ದೇನು?

ಭಯಪಟ್ಟು ಮಾಡಿರುವ ಪಾತ್ರ ನನ್ನದು.. ತುಂಬಾ ಖುಷಿ ಇದೆ: ಪ್ರಜ್ವಲ್ ದೇವರಾಜ್ ಹೇಳಿದ್ದೇನು?

‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್‌ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್‌ ಬಿ ಶೆಟ್ಟಿ, ರಮೇಶ್‌ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.

1 Min read
Govindaraj S
Published : Sep 10 2025, 05:47 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : our own

‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’. ಹೀಗೆ ಹೇಳಿದ್ದು ಪ್ರಜ್ವಲ್‌ ದೇವರಾಜ್‌.

26
Image Credit : our own

ಅವರು ವಿಭಿನ್ನ ಗೆಟಪ್‌ನಲ್ಲಿ ನಟಿಸಿರುವ ‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್‌ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್‌ ಬಿ ಶೆಟ್ಟಿ, ರಮೇಶ್‌ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.

Related Articles

Related image1
ಸು ಫ್ರಂ ಸೋ ನಂತರ ರಾಜ್ ಬಿ ಶೆಟ್ಟಿ ಮತ್ತೆ ಧಮಾಕಾ: ಪ್ರಜ್ವಲ್ ದೇವರಾಜ್ ಜೊತೆ ಮಾವೀರನ ಜತೆಯಾಟ!
Related image2
ಒಂದೇ ಚಿತ್ರದಲ್ಲಿ ಶಿವಣ್ಣ, ಪ್ರಜ್ವಲ್‌ ದೇವರಾಜ್‌: ನಿರ್ದೇಶಕ ಯಾರು ಗೊತ್ತಾ?
36
Image Credit : Social Media

ಇತ್ತೀಚೆಗೆ ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಗೆಟಪ್‌ನಲ್ಲಿ ಕಾಣಿಸಿಕೊಂಡರು.

46
Image Credit : Social Media

ಈಗಾಗಲೇ ‘ಕರಾವಳಿ’ ಸಿನಿಮಾದ ಒಂದಷ್ಟು ಪಾತ್ರಗಳ ಝಲಕ್ ಅನ್ನು ಪೋಸ್ಟರ್ ಮೂಲಕ ತೋರಿಸಲಾಗಿದೆ. ಶೀರ್ಷಿಕೆಯೇ ಸೂಚಿಸುವಂತೆ ಇದು ಕರಾವಳಿ ಭಾಗದ ಸಂಸ್ಕೃತಿ, ಸೊಗಡು ಇರುವ ಸಿನಿಮಾ ಆಗಿರಲಿದೆ.

56
Image Credit : Social Media

ಇನ್ನು ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ಮಾವೀರ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ರಾಜ್ ಬಿ ಶೆಟ್ಟಿ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದರಿಂದ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

66
Image Credit : Social Media

'ಕರಾವಳಿ' ಸಿನಿಮಾ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಸಿನಿಮಾ ಮೂಡಿಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸಿನಿಮಾ
ಸ್ಯಾಂಡಲ್ವುಡ್ ಫಿಲ್ಮ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved